Home ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ
HomeKadurLatest Newsnamma chikmagalur

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

Share
Share

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ ನಡೆಸಿದ ಆರೋಪದಡಿ ಬೀರೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಗಸ್ಟ್‌ 14ರಂದು ಸಂಜೆ ಕಡೂರು ಪಟ್ಟಣದಿಂದ ಮಹಮದ್‌ ಇರ್ಫಾನ್‌, 31 ಎಕರೆ ನಿವಾಸಿಗಳಾದ ಅಭಿಷೇಕ್‌ ಹಾಗೂ ಶೇಖ್‌ ಸಲ್ಮಾನ್‌ ಅವರು ಜೇನುಗೂಡು ತೆಗೆಯುವ ಉದ್ದೇಶದಿಂದ ಬೈಕ್‌ನಲ್ಲಿ ಮರಡಿಹಳ್ಳಿ ಗ್ರಾಮದತ್ತ ತೆರಳಿದ್ದರು. ಮರಡಿಹಳ್ಳಿ ಸಮೀಪದ ರೈಲ್ವೆ ಬ್ರಿಡ್ಜ್‌ ಬಳಿ ಬೈಕ್‌ ನಿಲ್ಲಿಸಿ ಜೇನುಗೂಡು ಹುಡುಕುತ್ತಾ ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದರು.

ಬಾಯಾರಿಕೆಯಾದ ಹಿನ್ನೆಲೆಯಲ್ಲಿ ಸಂಜೆ ಸುಮಾರು 7.30ಕ್ಕೆ ಸಮೀಪದ ಜಮೀನಿನ ಪಂಪ್‌ಸೆಟ್‌ ಬಳಿ ನೀರು ಕುಡಿಯಲು ತೆರಳಿದಾಗ, ಅಲ್ಲಿದ್ದ ಸುಮಾರು 7ರಿಂದ 10 ಮಂದಿ ಅವರನ್ನು ತಡೆದು ಜಮೀನಿನಲ್ಲಿ ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ತಾವು ಜೇನುಗೂಡು ತೆಗೆಯಲು ಬಂದಿರುವುದಾಗಿ ತಿಳಿಸಿದರೂ, ಅವರು ಸುಳ್ಳು ಹೇಳುತ್ತಿದ್ದಾರೆ ಹಾಗೂ ಜಮೀನಿನಲ್ಲಿ ಪಂಪ್‌ಸೆಟ್‌ ಕೇಬಲ್‌ ಕಳ್ಳತನವಾಗುತ್ತಿರುವ ಹಿನ್ನೆಲೆಯಲ್ಲಿ ಕೇಬಲ್‌ ಕದಿಯಲು ಬಂದಿದ್ದೀರಿ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಲ್ಲೇ ಕಟ್‌ ಆಗಿ ಬಿದ್ದಿದ್ದ ಕೇಬಲ್‌ ಬಳಸಿ ಮಹಮದ್‌ ಇರ್ಫಾನ್‌ ಅವರ ಬೆನ್ನು, ಕೈ ಹಾಗೂ ಕಾಲುಗಳಿಗೆ ಹಲ್ಲೆ ನಡೆಸಲಾಗಿದೆ. ಅವರೊಂದಿಗೆ ಇದ್ದ ಅಭಿಷೇಕ್‌ ಹಾಗೂ ಶೇಖ್‌ ಸಲ್ಮಾನ್‌ ಅವರ ಮೇಲೂ ಕೇಬಲ್‌ನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಜೀಪಿನಲ್ಲಿ ಸ್ಥಳಕ್ಕೆ ಬರುತ್ತಿರುವುದನ್ನು ಕಂಡು ಹಲ್ಲೆ ನಡೆಸಿದವರು ಪರಾರಿಯಾಗಿದ್ದಾರೆ. ಹಲ್ಲೆ ನಡೆಸಿದವರ ಹೆಸರು ಹಾಗೂ ವಿಳಾಸ ತಿಳಿದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಗಾಯಾಳುಗಳನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ಮಹಮದ್‌ ಇರ್ಫಾನ್‌ ಅವರ ಹೇಳಿಕೆಯನ್ನು ಆಗಸ್ಟ್‌ 15ರಂದು ಸಂಜೆ 5.30ರಿಂದ 6 ಗಂಟೆಯವರೆಗೆ ದಾಖಲಿಸಿಕೊಳ್ಳಲಾಗಿದ್ದು, ಬಳಿಕ ಬೀರೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಲ್ಲೆ ನಡೆಸಿದವರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ

Three people attacked on suspicion of being cable thieves

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...