ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ-ಕಂಚಿಗಾನೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ಸೊಂದು ಪಲ್ಟಿಯಾದ ಭೀಕರ ಘಟನೆ ನಡೆದಿದೆ. ಬೆಂಗಳೂರು ಮೂಲದ ಈ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚು ಪ್ರವಾಸಿಗರಿದ್ದು, ಅದೃಷ್ಟವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಕಳಸ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತೀ ವೇಗ ಅಥವಾ ತಿರುವಿನ ಅಂದಾಜು ಸಿಗದಿರುವುದು ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ವಾಹನ ಚಾಲನೆ ಮಾಡುವಾಗ ಚಾಲಕರು ಹೆಚ್ಚಿನ ಜಾಗ್ರತೆ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
Three seriously injured as bus overturns in Kalasa
Leave a comment