Home namma chikmagalur chikamagalur ಭಾರತೀಬೈಲ್ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಹುಲಿ …?
chikamagalurCrime NewsHomeLatest Newsnamma chikmagalur

ಭಾರತೀಬೈಲ್ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಹುಲಿ …?

Share
Share

ಮೂಡಿಗೆರೆ: ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಾರತೀಬೈಲ್ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಅಳವಡಿಸಿದ್ದ ಕ್ಯಾಮೆರಾದಲ್ಲಿ ಹುಲಿಯ ಚಲನವಲನ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಅರಣ್ಯ ಇಲಾಖೆಯ ಮೂಡಿಗೆರೆ ಉಪವಿಭಾಗದ ಮೂಡಿಗೆರೆ ವಲಯದ ಭಾರತೀಬೈಲು ಶಾಖೆ ವ್ಯಾಪ್ತಿಯ ಬಿ. ಹೊಸಹಳ್ಳಿ ಗ್ರಾಮದ ಸರ್ವೆ ನಂ. 212ರಲ್ಲಿ ಕಾಡು ಪ್ರಾಣಿಯ ದಾಳಿಯಿಂದ ಹಸು ಮೃತಪಟ್ಟಿತ್ತು. ಘಟನೆ ನಡೆದ ಹಿನ್ನೆಲೆ ಇಲಾಖೆ ಸ್ಥಳ ಪರಿಶೀಲನೆ ನಡೆಸಿದ್ದು, ಭಾರತೀಬೈಲ್ ಸಮೀಪದ ಅರಣ್ಯ ಪ್ರದೇಶದಲ್ಲಿ ಕ್ಯಾಮೆರಾ ಅಳವಡಿಸಿತ್ತು.

ಟ್ರ್ಯಾಪ್‌ ಕ್ಯಾಮೆರಾದಲ್ಲಿ ಹುಲಿಯ ಚಲನವಲನ ಸೆರೆಯಾಗಿದ್ದು, ಈ ದೃಶ್ಯಗಳು ಬಹಿರಂಗವಾದ ಬಳಿಕ ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. ಹಸುಗಳ ಮೇಲೆ ನಿರಂತರ ದಾಳಿ ನಡೆಯುತ್ತಿರುವುದರಿಂದ ಗ್ರಾಮಸ್ಥರು ಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಹುಲಿಯ ಜೊತೆಗೆ ಇತರೆ ಕಾಡುಪ್ರಾಣಿಗಳ ಸಂಚಲನ ಕೂಡ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಹಿನ್ನೆಲೆ ಹುಲಿಯನ್ನು ಕೂಡಲೇ ಸೆರೆ ಹಿಡಿದು ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಹುಲಿ ಕಾಣಿಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಭಾರತೀಬೈಲ್, ಬಿ‌. ಹೊಸಹಳ್ಳಿ, ಹೊಕ್ಕಳ್ಳಿ, ಪಾಂಡವರತಟ್ಟ, ದೊಡ್ಡಳ್ಳ, ಹೆಬ್ಬಾಳಗದ್ದೆ, ತಳವಾರ ಮುಂತಾದ ಪ್ರದೇಶಗಳಲ್ಲಿ ತೋಟಗಳಿಗೆ ತೆರಳಲು ಕಾರ್ಮಿಕರು ಭಯಗೊಂಡಿದ್ದು ಕೃಷಿ ಚಟುವಟಿಕೆಗಳು ಸ್ತಬ್ಧಗೊಂಡಿವೆ.

Tiger in forest area near Bharathibai village…?

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...