Home namma chikmagalur chikamagalur ಮರ್ಲೆ ಗ್ರಾಮದ ಕಲ್ಲು ಕ್ವಾರಿ ಬಳಿ ಹುಲಿ ಪ್ರತ್ಯಕ್ಷ
chikamagalurHomeLatest Newsnamma chikmagalur

ಮರ್ಲೆ ಗ್ರಾಮದ ಕಲ್ಲು ಕ್ವಾರಿ ಬಳಿ ಹುಲಿ ಪ್ರತ್ಯಕ್ಷ

Share
Share

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದೀಗ ಚಿಕ್ಕಮಗಳೂರು ತಾಲ್ಲೂಕಿನ ಮರ್ಲೆ ಗ್ರಾಮದ ಕಲ್ಲು ಕ್ವಾರಿ ಹಾಗೂ ಅರಣ್ಯದ ಅಂಚಿನ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.

ಈ ಭಾಗದಲ್ಲಿ ಹುಲಿಯ ಚಲನವಲನ ಖಚಿತಪಟ್ಟ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಸಾರ್ವಜನಿಕರಿಗೆ ತುರ್ತು ಮುನ್ನೆಚ್ಚರಿಕೆ ನೀಡಿದ್ದು ಮರ್ಲೆ, ನಾಗರಹಳ್ಳಿ ಹಾಗೂ ಕಳಸಾಪುರ ಗ್ರಾಮಗಳ ನಿವಾಸಿಗಳು ಅತೀವ ಜಾಗರೂಕತೆಯಿಂದ ಇರಬೇಕು ಎಂದು ಸೂಚಿಸಿದೆ.

ಅರಣ್ಯದ ಅಂಚಿನಲ್ಲಿ ಜಮೀನು ಹೊಂದಿರುವ ಮಾಲೀಕರು ಮತ್ತು ಗ್ರಾಮಸ್ಥರು ಅನಾವಶ್ಯಕ ಓಡಾಟವನ್ನು ನಿಲ್ಲಿಸಬೇಕು ಹಾಗೂ ಕೃಷಿ ಚಟುವಟಿಕೆಗಳ ಸಮಯದಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಇಲಾಖೆ ತಿಳಿಸಿದೆ.

ಮುಖ್ಯವಾಗಿ ಸಾಕು ಜಾನುವಾರುಗಳನ್ನು ಮೇಯಿಸಲು ಅರಣ್ಯದ ಅಂಚಿಗೆ ಬಿಡಬಾರದೆಂದು ಕಟ್ಟುನಿಟ್ಟಿನ ಆದೇಶ ನೀಡಲಾಗಿದ್ದು, ಅರಣ್ಯ ಅಧಿಕಾರಿಗಳು ಹುಲಿಯ ಚಲನವಲನದ ಮೇಲೆ ನಿರಂತರ ನಿಗಾ ಇರಿಸಿದ್ದಾರೆ.

Tiger sighted near stone quarry in Marle village

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರಿ ಶಾಲೆಗಳ ವಿಲೀನ ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಅಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಸರಿಕೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮೈಲಿಮನೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನಗೊಳಿಸುವುದನ್ನು ವಿರೋಧಿಸಿ ಬುಧವಾರ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಕೆಸರಿಕೆಯ...

ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಧರಣಿ

ಚಿಕ್ಕಮಗಳೂರು:  ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಗೆ ಮಾಡುತ್ತಿರುವ ದ್ರೋಹವನ್ನು ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಕಾರ್ಮಿಕರು ಪ್ರತಿಭಟನೆ...

Related Articles

ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದವರ ಬಂಧನ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತಾಂತರದ ಭೂತ ಮತ್ತೆ ದರ್ಶನ ನೀಡಿದೆ. ವಾರದ ಸಂತೆಯಲ್ಲಿ ವ್ಯಾಪಾರಕ್ಕೆ ಬಂದಿದ್ದ...

ಏ.2ಕ್ಕೆ ಕಡೂರಿನಲ್ಲಿ ದೇವರದಾಸಿಮಯ್ಯ ಜಯಂತಿ

ಚಿಕ್ಕಮಗಳೂರು: ಜಿಲ್ಲಾ ಮಟ್ಟದ ೧೦೪೬ನೇ ಶ್ರೀ ದೇವರ ದಾಸಿಮಯ್ಯನವರ ಜಯಂತಿ ಮತ್ತು ದೇವಾಂಗ ಜನಜಾಗೃತಿ ಹಾಗೂ...

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಳಿಸುವಂತೆ ಆಗ್ರಹಿಸಿ ಧರಣಿ

ಚಿಕ್ಕಮಗಳುರು: ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಬಡ, ರೈತ, ಕೂಲಿ ಕಾರ್ಮಿಕ ಮಕ್ಕಳನ್ನು ಶಿಕ್ಷಣದಿಂದ ವಂಚಿಸಲಾಗುತ್ತಿದೆ...

ಗ್ಯಾಸ್ ಏಜೆನ್ಸಿ-ಗೋದಾಮಿನಿಂದ ಸಿಲಿಂಡರ್ ವಿತರಣೆ ಇಲ್ಲ

ಚಿಕ್ಕಮಗಳೂರು:  ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ಎಂದಿನಂತೆ ಜೇಷ್ಠತೆ ಆಧಾರದ ಮೇಲೆ ಗ್ರಾಹಕರ ಮನೆಗಳಿಗೆ ಸಂಬಂಧಿಸಿದ ಗ್ಯಾಸ್...