Home namma chikmagalur chikamagalur ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ
chikamagalurHomeLatest Newsnamma chikmagalur

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

Share
Share

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಕವಿಕಲ್ ಮಠದ ರಸ್ತೆಯಲ್ಲಿ ಬೃಹತ್ ಗಾತ್ರದ ಹುಲಿಯೊಂದು ದಿಢೀರನೆ ಪ್ರತ್ಯಕ್ಷವಾಗಿದ್ದು, ಕೆಲಕಾಲ ರಸ್ತೆ ಬದಿಯಲ್ಲಿ ನಡಿಗೆಯಿಟ್ಟ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಸ್ತೆಯ ಪಕ್ಕದ ದಟ್ಟ ಪೊದೆಗಳಿಂದ ಹೊರಬಂದ ಹುಲಿ ಮಣ್ಣಿನ ಹಾದಿಯಲ್ಲಿ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದ ದೃಶ್ಯವನ್ನು ಕಾರಿನೊಳಗಿದ್ದ ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಹುಲಿಯನ್ನು ಕಣ್ಣಾರೆ ಕಂಡ ಪ್ರವಾಸಿಗರು ಒಂದೆಡೆ ರೋಮಾಂಚನಗೊಂಡರೆ, ಮತ್ತೊಂದೆಡೆ ಕ್ಷಣಕಾಲ ಆತಂಕಕ್ಕೂ ಒಳಗಾದರು.

ಸ್ವಲ್ಪ ದೂರ ರಸ್ತೆಯಲ್ಲೇ ಸಾಗಿದ ಹುಲಿ, ಬಳಿಕ ಕಾರಿನತ್ತ ಒಮ್ಮೆ ಗಂಭೀರವಾಗಿ ದೃಷ್ಟಿ ಹರಿಸಿ ನಿಧಾನವಾಗಿ ಮತ್ತೆ ದಟ್ಟ ಅರಣ್ಯದೊಳಗೆ ಮರೆಯಾಯಿತು. ಮಂಜು ಮುಸುಕಿದ ಹಸಿರು ಕಾನನದ ನಡುವೆ ಕಾಡಿನ ರಾಜನ ಈ ಅಪರೂಪದ ಸಂಚಾರದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಪ್ರಕೃತಿ ಮತ್ತು ವನ್ಯಜೀವಿ ಪ್ರಿಯರ ಗಮನ ಸೆಳೆಯುತ್ತಿದೆ.

ಕವಿಕಲ್ ಮಠ ಹಾಗೂ ಮಲ್ಲಂದೂರು ಸುತ್ತಮುತ್ತಲಿನ ಪ್ರದೇಶಗಳು ಭದ್ರಾ ಅಭಯಾರಣ್ಯದ ವ್ಯಾಪ್ತಿಗೆ ಹೊಂದಿಕೊಂಡಿರುವುದರಿಂದ ಹುಲಿ ಸೇರಿದಂತೆ ಹಲವು ವನ್ಯಜೀವಿಗಳ ಸಂಚಾರ ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಸಂಚರಿಸುವ ಪ್ರವಾಸಿಗರು ಎಚ್ಚರಿಕೆ ವಹಿಸಿ, ವನ್ಯಜೀವಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟು ಮಾಡದೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

Tiger suddenly spotted on Kavikal Mutt road

Share

Leave a comment

Leave a Reply

Your email address will not be published. Required fields are marked *

Don't Miss

ಬೆಳವಾಡಿ ಕೆರೆಗೆ ಎತ್ತಿನಹೊಳೆ ನೀರು-ರೈತರಲ್ಲಿ ಸಂತಸ

ಚಿಕ್ಕಮಗಳೂರು: ಎತ್ತಿನಹೊಳೆ ಯೋಜನೆಯ ನೀರಿನಿಂದ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹೋಬಳಿಯ ಬೆಳವಾಡಿ ಕೆರೆ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರು...

`ನಾನು’ ಎಂಬುದನ್ನು ಬಿಟ್ಟು `ನಾವು’ ಎಂಬ ಮನೋಭಾವ ಬೆಳೆಸಿಕೊಳ್ಳಿ

ಚಿಕ್ಕಮಗಳೂರು: `ನಾನು ಮಾಡಿದ್ದು, ನಾನು ಮಾಡಿದ್ದು’ ಎನ್ನುವುದಕ್ಕಿಂತ `ನಾವು ಮಾಡಿದ್ದು’ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ಜನರ ಆಶೀರ್ವಾದದಿಂದಲೇ ಜನಪ್ರತಿನಿಧಿಗಳು ಅಧಿಕಾರಕ್ಕೆ ಬರುತ್ತಾರೆ. ಅಭಿವೃದ್ಧಿ ಕಾರ್ಯಗಳಿಗೆ ವೈಯಕ್ತಿಕ ಹಕ್ಕು ಸಾಧಿಸುವ ಬದಲು ಎಲ್ಲರ...

Related Articles

ಮುಖ್ಯಮಂತ್ರಿ ಸೂಕ್ತ ಭದ್ರತಾ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳ ಜಿಲ್ಲಾ ಭೇಟಿಯ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ಭದ್ರತಾ ವ್ಯವಸ್ಥೆ ಕಲ್ಪಿಸುವುದಲ್ಲದೆ, ಶಿಷ್ಟಾಚಾರ ಪಾಲನೆಗೆ...

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ...

 ವಿಶ್ವಕರ್ಮ ಸಮುದಾಯ ಎಲ್ಲ ರಂಗಗಳಲ್ಲೂ ಮುಂಚೂಣಿಗೆ ಬರಲಿ

ಚಿಕ್ಕಮಗಳೂರು: ವಿಶ್ವಕರ್ಮ ಸಮುದಾಯ ಎಲ್ಲ ರಂಗಗಳಲ್ಲೂ ಮುಂಚೂಣಿಗೆ ಬರಬೇಕು ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ...