Home namma chikmagalur Tarikere Tiger walking:ಕೆಮ್ಮಣ್ಣುಗುಂಡಿ ಸುತ್ತ ಮುತ್ತ ಹುಲಿ ವಾಕಿಂಗ್ 
Tarikere

Tiger walking:ಕೆಮ್ಮಣ್ಣುಗುಂಡಿ ಸುತ್ತ ಮುತ್ತ ಹುಲಿ ವಾಕಿಂಗ್ 

Share
Share

ಚಿಕ್ಕಮಗಳೂರು: ರಾಜ್ಯದ ಪ್ರಸಿದ್ಧ ಗಿರಿಧಾಮ ಕೆಮ್ಮಣ್ಣುಗುಂಡಿ ಸುತ್ತ ಮುತ್ತ ಹುಲಿ ಮತ್ತು ಕರಡಿ ಓಡಾಟದಿಂದ ಜನರಿಗೆ ಭಯ ಶುರುವಾಗಿದೆ.

ಕಳೆದ ಒಂದು ತಿಂಗಳಿಂದ ಹುಲಿ ರಾಜಾ ರೋಷವಾಗಿ ಸಂಜೆ ಆರರಿಂದ ಎಂಟು ಗಂಟೆವರೆಗೆ ಮತ್ತುಬೆಳಗ್ಗೆ ಏಳೆಂಟು ಗಂಟೆಯವರೆಗೆ ರಸ್ತೆ ಅಕ್ಕ ಪಕ್ಕ ಓಡಾಡುತ್ತಿದೆ ಎಂದು ಸ್ಥಳೀಯರು ಹೇಳುತ್ತಾರೆ.

ಕೆಮ್ಮಣ್ಣುಗುಂಡಿ, ಕಲ್ಲತ್ತಿಪುರ,ಕೇಶವಮೂರ್ತಿ ಎಸ್ಟೇಟ್ ಮತ್ತು ಸಣ್ಣಖಾನ್ ಎಸ್ಟೇಟ್ ಸುತ್ತಮುತ್ತಲಿನಲ್ಲಿ ಹುಲಿ ಓಡಾಡುತ್ತಿದೆ ಕಳೆದ ಮೂರು ದಿನಗಳ ಹಿಂದೆ ಕೆಮ್ಮಣ್ಣುಗುಂಡಿ ಐ,ಬಿ ಸಮೀಪ ಒಂದು ಗಂಟೆಗಳ ಕಾಲ ಓಡಾಟ ನಡೆಸಿದೆ.

ಈ ಬಗ್ಗೆ ಕೆಮ್ಮಣ್ಣುಗುಂಡಿ ರಾಜಭವನದ ನೌಕರರನ್ನು ಕೇಳಿದರೆ ಭದ್ರ ಅಭಯಾರಣ್ಯ ವಾಗಿರುವುದರಿಂದ ಪ್ರಾಣಿಗಳ ಓಡಾಟ ಸಹಜ ಎನ್ನುತ್ತಾರೆ.

ಹುಲಿ ಐದಾರು ದನಗಳ ಶಿಕಾರಿ ಮಾಡಿದೆ ಮನುಷ್ಯರ ತಂಟೆ ಬಂದಿಲ್ಲ ನಿಜ ಒಮ್ಮೆ ಮನುಷ್ಯನ ರಕ್ತ ನೋಡಿದರೆ ಕಷ್ಟ ಹೆಚ್ಚು ಕಡಿಮೆಯಾದರೆ ಯಾರು ಜವಬ್ದಾರರು ಅರಣ್ಯ ಇಲಾಖೆ ಗಮನಕ್ಕೆ ತಂದರು ನಮಗೂ ಇದಕ್ಕೂ ಸಂಭಂಧವಿಲ್ಲ ಎನ್ನುವಂತೆ ಇರುವುದನ್ನು ನೋಡಿದರೆ ಅರಣ್ಯ ಇಲಾಖೆ ಹುಲಿ ತಂದು ಬಿಟ್ಟಿರಬಹುದು ಎಂಬ ಅನುಮಾನವಿದೆ ಎನ್ನುತ್ತಾರೆ.

ಹುಲಿ ಜೊತೆಗೆ ಕರಡಿ ಕಾಟ ಶುರುವಾಗಿದ್ದು ಕಲ್ಲತ್ತಿಪುರ ಗುಡ್ಡದಲ್ಲಿ ಕರಡಿ ಅಗಾಗ್ಗೆ ಕಾಣಿಸಿಕೊಂಡು ಭಯ ತರುತ್ತಿದೆ ಎಂದು ಜನ ದೂರುತ್ತಿದ್ದಾರೆ.

ಪ್ರತಿನಿತ್ಯ ವಾಕಿಂಗ್ ಬರುವ ಹುಲಿಯನ್ನು ಟೈಗರ್ ಪ್ರಾಜೆಕ್ಟ್ ಒಳಗಡೆ ಬಿಡಲು ಒತ್ತಯಿಸಿದ್ದಾರೆ.

Tiger walking around Kemmanugundi

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕುರಕುಚ್ಚಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ-ಇಬ್ಬರ ಬಂಧನ

ಚಿಕ್ಕಮಗಳೂರು: ತಂಗಿಯನ್ನು ಕೊಲೆಗೈದಿದ್ದ ಭಾವನನ್ನು ಬಾಮೈದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತರೀಕೆರೆ ತಾಲೂಕಿನ ಕುರಕುಚ್ಚಿ...

ಮಕ್ಕಳಪ್ರತಿಭೆ ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ ಕ್ರೀಡಾ ಶಿಕ್ಷಕ

ತರೀಕೆರೆ: ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳ ಜೊತೆಗೆ ದೈಹಿಕ ಶಿಕ್ಷಣವು ಬಹು ಮುಖ್ಯ. ಮಕ್ಕಳ ಆಸಕ್ತಿ ಗಮನಿಸಿ...

ದಶಮಾನೋತ್ಸವ ಪ್ರಶಸ್ತಿಗೆ ಜಿಲ್ಲೆಯ 10 ಕಲಾವಿದರ ಆಯ್ಕೆ

ತರೀಕೆರೆ: ಜಾನಪದದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಜಿಲ್ಲೆಯ 10 ಕಲಾವಿದರನ್ನು ಜಿಲ್ಲಾ ದಶಮಾನೋತ್ಸವ ಪ್ರಶಸ್ತಿಗೆ...

ತರೀಕೆರೆ ಕ್ಷೇತ್ರದಲ್ಲಿ ಇಲಿ-ಬೆಕ್ಕು ಕಣ್ಣಾ ಮುಚ್ಚಾಲೆ

ತರೀಕೆರೆ: ತರೀಕೆರೆ ಕ್ಷೇತ್ರದಲ್ಲಿ ಕಂತು,ಕಂತು ದಂಧೆಗಳು ನಡೆಯುತ್ತಿರುವುದು ಎಲ್ಲರಿಗೂ ತಿಳಿದಿದೆ .ಇದಕ್ಕೆ ಸಾಕ್ಷಿ ಎಂಬಂತೆ 2023...