Home namma chikmagalur ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ನಗರದಲ್ಲಿ  ತಿರಂಗಾಯಾತ್ರೆ
namma chikmagalurchikamagalurHomeLatest News

ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ನಗರದಲ್ಲಿ  ತಿರಂಗಾಯಾತ್ರೆ

Share
Share

ಚಿಕ್ಕಮಗಳೂರು: ಆಪರೇಷನ್ ಸಿಂಧೂರ ಕಾರ್ಯಚರಣೆಯಲ್ಲಿ ಹೋರಾಡಿದ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ರಾಷ್ಟ್ರ ರಕ್ಷಣೆಗಾಗಿ ನಾಗರಿಕರು ಸಂಘಟನೆಯಿಂದ ನಗರದಲ್ಲಿ ಶುಕ್ರವಾರ ತಿರಂಗಾಯಾತ್ರೆ ನಡೆಸಲಾಯಿತು.

ಒಂಕಾರೇಶ್ವರ ದೇವಾಲಯದಿಂದ ಆಜಾದ್ ಪಾರ್ಕ್ ವೃತ್ತದ ತನಕ ಸಾವಿರ ಅಡಿ ಉದ್ದದ ರಾಷ್ಟ್ರಧ್ವಜ ಹಿಡಿದು ನೂರಾರು ಜನ ಘೋಷಣೆ ಕೂಗುತ್ತಾ ಸಾಗಿದರು. ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ‘ನಾವೆಲ್ಲರು ಒಂದಾಗಿ ಸೈನಿಕರ ಜತೆಗೆ ನಾವಿದ್ದೇವೆ ಎಂಬ ದೃಷ್ಟಿಯಿಂದ ತಿರಂಗಯಾತ್ರೆ ಆಯೋಜಿಸಲಾಗಿದೆ’ ಎಂದರು.

ಪಾಕಿಸ್ತಾನ ಭಯೋತ್ಪಾದನೆಯ ಬೀಜ ಬಿತ್ತಿ ಆ ಮೂಲಕ ಭಾರತವನ್ನು ದುರ್ಬಲಗೊಳಿಸುವ ಸಂಚು ಮಾಡುತ್ತಿದೆ. ಭಯೋತ್ಪಾದನೆ ಕೊನೆಯಾಗಬೇಕು. ಭಯೋತ್ಪಾದನೆ ಮಾನವತೆಗೆ ವಿರೋಧವಾಗಿದೆ. ಪ್ರಜಾಪ್ರಭುತ್ವಕ್ಕೆ ಭಯ ಹುಟ್ಟಿಸುತ್ತಿದೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ಹೀಗಾಗಿ ಇದು ಕೊನೆಯಾಗಬೇಕು. ಕೇವಲ ಭಯೋತ್ಪಾದಕರನ್ನು ಮಟ್ಟ ಹಾಕುವುದರಿಂದ ಇದು ಕೊನೆಯಾಗಲ್ಲ. ಭಯೋತ್ಪಾದನೆಯ ಡಿಎನ್‌ಎ ನಾಶಪಡಿಸುವ ಕೆಲಸ ಮಾಡಬೇಕಾಗುತ್ತದೆ ಎಂದು ಹೇಳಿದರು.

‘ದೇಶದ ಒಳಗೂ ಕೆಲವರಿದ್ದಾರೆ. ದೇಶದ ಅನ್ನ ತಿಂದು ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗುವವರಿಗೆ ತಕ್ಕ ಪಾಠ ಕಲಿಸಬೇಕಿದೆ. ಭಾರತದ ಜತೆ ನಾವೆಲ್ಲರೂ ಇದ್ದೇವೆ ಎಂಬ ಸಂದೇಶವನ್ನು ಈ ತಿರಂಗಾಯಾತ್ರೆಯ ಮೂಲಕ ಸಾರಿದ್ದೇವೆ’ ಎಂದರು.

ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಮುಖಂಡ ಡಿ.ಎನ್. ಜೀವರಾಜ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ್ ಶೆಟ್ಟಿ, ನಗರ ಮಂಡಲ ಅಧ್ಯಕ್ಷ ಪುಷ್ಪರಾಜ್, ಬಿಜೆಪಿ ಜಿಲ್ಲಾ ವಕ್ತಾರ ಪುಟ್ಟಸ್ವಾಮಿ, ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ , ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಿಂತಾ ಅನಿಲ್ ಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರೇಮಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ, ಮುಖಂಡ ಕೋಟೆ ರಂಗನಾಥ್ ಇದ್ದರು.

Tiranga Yatra in the city to boost the morale of the soldiers

Share

Leave a comment

Leave a Reply

Your email address will not be published. Required fields are marked *

Don't Miss

ಬಿ.ಎಲ್.ಶಂಕರ್ ರ ರಾಜಕೀಯ ಹಪ ಹಪಿಗೆ ಮತ್ತೆ ಮತ್ತೆ ತಣ್ಣೀರು !

ಬಿ.ಎಲ್.ಶಂಕರ್ ಕಾಂಗ್ರೆಸ್ ನ ರಾಜ್ಯ ನಾಯಕರು ನಿಜ,ಆದರೆ ಇವರು ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಲ್ಲಿ ಕಡ್ಡಿ ಆಡಿಸುವುದರಲ್ಲಿ ನಿಪುಣ. ಕಾಂಗ್ರೆಸ್ ಸೇರಿ ಎಲ್ಲಾ ಚುನಾವಣೆಯಲ್ಲಿ ಸೋತು ದಾಖಲೆ ಮಾಡಿದ್ದಾರೆ.ಚಿತ್ರಕಲಾ ಪರಿಷತ್ತಗೆ ಗೂಟಾ...

ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ ನಿಯಂತ್ರಣ ತಪ್ಪಿ ಪಲ್ಟಿ

ಚಿಕ್ಕಮಗಳೂರು: ಮಂಗಳೂರಿನಿಂದ ಹೊರನಾಡಿಗೆ ಆಗಮಿಸಿದ್ದ ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ (ಟಿಟಿ) ವಾಹನ ತಡರಾತ್ರಿ ಹೊರನಾಡು ಸಮೀಪದ ಭಾಮಿ ಅಂಗಡಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿದಂತೆ...

Related Articles

ಕೆ.ಬಿ.ಎಂಗೆ ಆತ್ಮೀಯ ಅಭಿಮಾನಾರ್ಪಣೆ

ಬೀರೂರ: ಜನಾನುರಾಗಿ ಸೇವೆ ಸಲ್ಲಿಸಿ ಅಜಾತಶತ್ರು ಪಟ್ಟಣದ ಹಿರಿಯ ಮುತ್ಸದಿ ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ್...

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು...

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ...

ಗುಡುಗು ಸಿಡಿಲಿನ ಆರ್ಭಟಕ್ಕೆ ಬಸ್ ತಂಗುದಾಣದನಲ್ಲಿದ್ದ ದಂಪತಿ ಗಾಯ

ಎನ್.ಆ‌ರ್.ಪುರ: ಕಾಫಿನಾಡಿನಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಗುಡುಗು ಸಿಡಿಲಿನ ಆರ್ಭಟಕ್ಕೆ ದಂಪತಿ ಗಾಯಗೊಂಡಿರುವ ಘಟನೆ...