Home State News ಮಾರುಕಟ್ಟೆಯಲ್ಲಿ ಟೊಮೆಟೊ ಧಾರಣೆ ದಿಢೀರ್‌ ಕುಸಿತ
State News

ಮಾರುಕಟ್ಟೆಯಲ್ಲಿ ಟೊಮೆಟೊ ಧಾರಣೆ ದಿಢೀರ್‌ ಕುಸಿತ

Share
Share

ಬೆಂಗಳೂರು: ಮಳೆ, ಮೋಡ ಕವಿದ ವಾತಾವರಣ ಮತ್ತು ರೋಗಬಾಧೆಯಿಂದ ಗುಣಮಟ್ಟ ಕಳೆದು ಕೊಳ್ಳುತ್ತಿರುವ ಟೊಮೆಟೊ ಧಾರಣೆ ಮಾರುಕಟ್ಟೆಯಲ್ಲಿ ದಿಢೀರ್‌ ಕುಸಿತ ಕಂಡಿದೆ.

ವಾರದ ಹಿಂದೆ ಕೋಲಾರ ಎಪಿಎಂಸಿ ಹರಾಜಿನಲ್ಲಿ ₹750ಕ್ಕೆ ಮಾರಾಟವಾಗಿದ್ದ 15 ಕೆ.ಜಿ ಟೊಮೆಟೊ ಬಾಕ್ಸ್‌ ಈಗ ₹300ಕ್ಕೆ ಕುಸಿದಿದೆ. ಗುಣಮಟ್ಟದ ಟೊಮೆಟೊ ಬಾಕ್ಸ್‌ಗೆ ಮಾತ್ರ ₹300 ಇದ್ದರೆ, ಇನ್ನುಳಿದ ಟೊಮೆಟೊ ಬಾಕ್ಸ್‌ಗಳು ಕೇವಲ ₹100ಕ್ಕೆ ಮಾರಾಟವಾಗುತ್ತಿವೆ.

ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ ಟೊಮೆಟೊ ಬೆಲೆ ₹15ರಿಂದ ₹20 ಇದೆ. ಹೆಚ್ಚು ಟೊಮೆಟೊ ಬೆಳೆಯುವ ಕೋಲಾರ ಜಿಲ್ಲೆಯಲ್ಲಿ ಸುಗ್ಗಿ ಮುಗಿಯುತ್ತಿದೆ. ಸಾಲು, ಸಾಲು ಹಬ್ಬಗಳಿಂದಾಗಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ಬೆಳೆಗಾರರು ದರ ಕುಸಿತದಿಂದ ನಿರಾಶರಾಗಿದ್ದಾರೆ.

ಎಪಿಎಂಸಿ ಮಾರುಕಟ್ಟೆಗೆ ಮಂಗಳವಾರ 17 ಸಾವಿರ ಕ್ವಿಂಟಲ್‌ ಅಂದರೆ 1.25 ಲಕ್ಷ ಬಾಕ್ಸ್‌ ಟೊಮೆಟೊ ಆವಕವಾಗಿದೆ. ಹಿಂದೆ ಇದೇ ಅವಧಿಯಲ್ಲಿ ದಿನಕ್ಕೆ 30 ಸಾವಿರ ಕ್ವಿಂಟಲ್‌ವರೆಗೆ ಟೊಮೆಟೊ ಮಾರುಕಟ್ಟೆಗೆ ಪೂರೈಕೆ ಆಗುತಿತ್ತು.

‘ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ ರಾಜ್ಯಗಳಲ್ಲಿ ಟೊಮೆಟೊಗೆ ಬೇಡಿಕೆ ಇದೆ. ಗುಣಮಟ್ಟದ ಟೊಮೆಟೊ ಮಾರುಕಟ್ಟೆಗೆ ಬರುತ್ತಿಲ್ಲ. ಗುಣಮಟ್ಟವಿಲ್ಲದಿದ್ದರೆ ಖರೀದಿ ಮಾಡಲ್ಲ. ಲಾರಿಯಲ್ಲಿ ಒಯ್ದರೂ ಮಾರಾಟವಾಗದೆ ಟೊಮೆಟೊ ಹಾಳಾಗುತ್ತಿದೆ. ಹೀಗಾಗಿ, ಟೊಮೆಟೊ ಸಾಗಿಸಲು ವರ್ತಕರು ಹಿಂದೇಟು ಹಾಕುತ್ತಿದ್ದಾರೆ’ ಎಂದು ಕೋಲಾರ ಎಪಿಎಂಸಿ ಕಾರ್ಯದರ್ಶಿ ಕಿರಣ್‌ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಜಿಲ್ಲೆಯಲ್ಲಿ ಟೊಮೆಟೊ ಬೆಳೆಯುವ ಪ್ರದೇಶದ ವಿಸ್ತೀರ್ಣ ತಗ್ಗಿಲ್ಲ. ಹವಾಮಾನ ವೈಪರೀತ್ಯ, ರೋಗಬಾಧೆ ಕಾರಣಗಳಿಂದ ಫಸಲು ಕಡಿಮೆ ಆಗಿದೆ ಎನ್ನುತ್ತಾರೆ ಅವರು.

ಏಷ್ಯಾದ 2ನೇ ದೊಡ್ಡ ಮಾರುಕಟ್ಟೆ ಕೋಲಾರದ ಎಪಿಎಂಸಿ ಟೊಮೆಟೊ ಮಾರಾಟದಲ್ಲಿ ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಮಾರುಕಟ್ಟೆ ಎನಿಸಿದೆ. ಚಿತ್ರದುರ್ಗದ ಚಳ್ಳಕೆರೆ ಸೇರಿ ವಿವಿಧೆಡೆಯ ಟೊಮೆಟೊ ಕೂಡಾ ಬರಲಿದೆ. ಇಲ್ಲಿಂದ ಬೆಂಗಳೂರು ಹೊರತುಪಡಿಸಿ 15ರಿಂದ 20 ರಾಜ್ಯಗಳಿಗೆ ಪೂರೈಕೆ ಆಗಲಿದೆ.

Tomato prices plummet in the market

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

127 K.G ಚಿನ್ನದ ಕಳ್ಳಿ ರನ್ಯಾರಾವ್ ಗೆ 102 ಕೋಟಿ ದಂಡ

ಚಿಕ್ಕಮಗಳೂರು: ಚಿಕ್ಕಮಗಳೂರು ಮೂಲದ ಚಿತ್ರನಟಿ ರನ್ಯಾ ರಾವ್ ವಿದೇಶದಿಂದ 127ಕೆ,ಜಿ,ಚಿನ್ನ ಕದ್ದು ತಂದು ಕಂದಾಯ ಗುಪ್ತಚರ...

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಮಟ್ಟು ಔಟ್- ಶಿವಕುಮಾರ್ ಇನ್- ಆರತಿ ಸ್ಟ್ರಾಂಗ್- ಜಕ್ಕಣ್ಣ ಒಕೆ

ಬೆಂಗಳೂರು: ವಿಧಾನ ಪರಿಷತ್ ಗೆ ನಾಲ್ವರನ್ನು ನೇಮಕ ಮಾಡಿ ಎರಡು ತಿಂಗಳ ಹಿಂದೆ ರಾಜ್ಯಪಾಲರ ಬಳಿ...

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು

ಬೆಂಗಳೂರು: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು...