Home Latest News ದತ್ತಜಯಂತಿ ಹಿನ್ನೆಲೆ ನಾಳೆ ನಗರ ಅಲಂಕಾರಕ್ಕೆ ಚಾಲನೆ
Latest News

ದತ್ತಜಯಂತಿ ಹಿನ್ನೆಲೆ ನಾಳೆ ನಗರ ಅಲಂಕಾರಕ್ಕೆ ಚಾಲನೆ

Share
Share

ಚಿಕ್ಕಮಗಳೂರು: ದತ್ತಮಾಲಾ ಅಭಿಯಾನಕ್ಕೆ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಈ ಬಾರಿಯ ದತ್ತ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ನಿರ್ಧರಿಸಿದೆ. ನಾಳೆ ಸಂಜೆ 7ಕ್ಕೆ ಗೆ ಚಿಕ್ಕಮಗಳೂರು ನಗರದ ಅಲಂಕಾರದ ಉದ್ಘಾಟನೆ ನಡೆಯಲಿದೆ ಎಂದು ಬಜರಂಗದಳ ಜಿಲ್ಲಾ ಸಹ ಸಂಚಾಲಕ ಶಾಮ್ ವಿ ಗೌಡ ತಿಳಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ದತ್ತಮಾಲಾ ಅಭಿಯಾನ ಡಿಸೆಂಬರ್ 6 ರಿಂದ ಆರಂಭಗೊಳ್ಳಲಿದ್ದು, 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ದತ್ತ ಜಯಂತಿ ಉತ್ಸವವನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ. ಚಿಕ್ಕಮಗಳೂರಿನ ಪ್ರತಿ ಹಿಂದೂಖಹ ಮನೆ ಹಾಗೂ ಕಟ್ಟಡಗಳ ಮೇಲೆ ಕೇಸರಿ ಧ್ವಜವನ್ನು ಹಾರಿಸಿ, ನಗರದ ಎಲ್ಲಾ ವಾರ್ಡ್ಗಳಲ್ಲಿ ದತ್ತ ಜಯಂತಿ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಲಂಕಾರ ಮಾಡಲಾಗುವುದು.

ಕೇಸರಿ ಬಂಟಿಂಗ್ಸ್ ಹಾಗೂ ದ್ವಜಗಳಿಂದ ಇಡೀ ನಗರವನ್ನ ಕೇಸರಿಮಯಗೊಳಿಸಲಾಗುವುದು, ಜೊತೆಗೆ ಡಿಸೆಂಬರ್ 13ರಂದು ನಡೆಯುವ ಬೃಹತ್ ಶೋಭ ಯಾತ್ರೆ ಸಂಚರಿಸುವ ಮಾರ್ಗದಲ್ಲಿ ಸಂಪೂರ್ಣ ಕೇಸರಿಮಯ ಮಾಡಲಾಗುವುದು ಎಂದು ಶ್ಯಾಮ್ ತಿಳಿಸಿದ್ದಾರೆ. ಹಿಂದೂದು ಕಾರ್ಯಕರ್ತರಲ್ಲಿ ಧಾರ್ಮಿಕ ಭಾವನೆಗಳ ಜೊತೆ ಆಧ್ಯಾತ್ಮಿಕ ಭಾವನೆಗಳನ್ನು ಜೋಡಿಸುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...