Home ವಸೂಲಿ,ವಸೂಲಿ ಎಷ್ಟು ? ಪ್ರವಾಸೋದ್ಯಮ ಅಭಿವೃದ್ಧಿ ಸಭೆ !
HomeLatest Newsnamma chikmagalur

ವಸೂಲಿ,ವಸೂಲಿ ಎಷ್ಟು ? ಪ್ರವಾಸೋದ್ಯಮ ಅಭಿವೃದ್ಧಿ ಸಭೆ !

Share
Share

ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಪ್ರಕರಣಗಳ ಸಭೆ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಸುನೀಲ್ ವಲ್ಲಾಪುರೆ,ಅನಿಲ್ ಕುಮಾರ್, ಎಸ್.ಪಿ.ಸುಂಕನೂರ್,ಎಂ.ಪಿ ಸುಜಾ ಕುಶಾಲಪ್ಪ ಮತ್ತು ಶಾಸಕ ಹೆಚ್.ಡಿ.ತಮ್ಮಯ್ಯ ಭಾಗವಹಿಸಿದ್ದರು.ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿದ್ದು ಅದಕ್ಕೆ ಒತ್ತು ನೀಡಬೇಕು ಮತ್ತು ಇರುವ ಪ್ರಕರಣಗಳ ಬಗ್ಗೆ ತುರ್ತು ಕ್ರಮ ಕೈಗೊಳ್ಳಲು ಸಭೆ ನಿರ್ಣಯಿಸಿತು.

ಸಭೆಯ ಸ್ವಾರಸ್ಯ ಎಂದರೆ ಈ ಸಭೆ ನಡೆಸಲು ಹಲವು ಇಲಾಖೆಗಳಿಂದ ವಸೂಲಿ ಮಾಡಿರುವುದು .ಬಹುತೇಕ ಇಲಾಖೆಗಳಿಂದ ಇಂತಿಷ್ಟು ಎಂದು ವಸೂಲಿ ಮಾಡಿದವರು ಯಾರು? ಮತ್ತು ಏಕೆ ? ಎಂಬುದು ಯಕ್ಷ ಪ್ರಶ್ನೆಯಾಗಿ ಉಳಿದಿಲ್ಲ ಬಂದಂತವರಿಗೆ ಭರ್ಜರಿ ಗಿಫ್ಟ್ ಕೊಡಲು ಎನ್ನಲಾಗಿದೆ.ಇವರಿಗೆಲ್ಲಾ ಟಿ.ಎ. ಡಿ.ಎ.ಉಚಿತ ವಸತಿ,ಊಟ,ತಿಂಡಿ ಓಡಾಡಲು ಕಾರು ಸರ್ಕಾರ ಕೊಟ್ಟರು ಕೂಡ ಇಲಾಖಾವಾರು ವಸೂಲಿ ಮಾಡಿದವರು ಯಾರು ? ಇನ್ನೂ ಸ್ವಾರಸ್ಯ ಸಂಗತಿಯೆಂದರೆ ಇವರಿಗೆಲ್ಲಾ ಸಭೆ ನೆಪ ಮಾತ್ರಕ್ಕೆ ,ಬಂದಿದ್ದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡರ ಮಗನ ಮದುವೆಗೆ ಎಂಬುದು ಬಹಿರಂಗ ಸತ್ಯ.

ಸಭೆಯು ಆಯಿತು, ಭರ್ಜರಿ ಗಿಫ್ಟ್ ಸಿಕ್ಕತು ಮತ್ತು ಮದುವೆಯಲ್ಲಿ ಭಾಗಿಯಾಗಿ ಮೂರು ದಿನ ಗ್ಯಾರಂಟಿ ಸರ್ಕಾರದ ಸೇವೆ ಅನುಭವಿಸದ್ದು ಆಯಿತು .

Tourism development meeting!

Share

Leave a comment

Leave a Reply

Your email address will not be published. Required fields are marked *

Don't Miss

ಹಿರೇಬೈಲು ಗ್ರಾಮದಲ್ಲಿ ನಕಲಿ ವೈದ್ಯನ ವಿರುದ್ಧ ಕ್ರಮ

ಕಳಸ: ಹಿರೇಬೈಲು ಗ್ರಾಮದಲ್ಲಿ ಕ್ಲಿನಿಕ್ ನಡೆಸುತ್ತಿದ್ದ ನಕಲಿ ವೈದ್ಯನ ವಿರುದ್ಧ ಕ್ರಮ ಕೈಗೊಂಡಿದ್ದು, ಕ್ಲಿನಿಕ್ ಅನ್ನು ಬಂದ್ ಮಾಡಿಸಲಾಗಿದೆ ಎಂದು ಆರೋಗ್ಯ ಇಲಾಖೆಯವರು ತಿಳಿಸಿದ್ದಾರೆ. ಸ್ಥಳೀಯರ ದೂರಿನ ಮೇರೆಗೆ ಆರೋಗ್ಯ ಇಲಾಖೆ...

ವಿದ್ಯುತ್‌ಶಾಕ್‌ನಿಂದ ಲೈನ್‌ಮ್ಯಾನ್ ಸಾವು

ಬಾಳೆಹೊನ್ನೂರು: ಆಲ್ದೂರು ವಲಯದ ಸಂಗಮೇಶ್ವರ ಪೇಟೆಯ ಸೆಕ್ಷನ್ ಪವರ್‌ಮ್ಯಾನ್ ಪ್ರವೀಣ ಪಾತ್ರೋಟ(25) ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೆನಕಟ್ಟಿ ಗ್ರಾಮದ ಪ್ರವೀಣ ಅವರು, ಶುಕ್ರವಾರ ಬೆಳಿಗ್ಗೆ ಹುಣಸೇಕೊಪ್ಪ ಬಳಿ...

Related Articles

ಜು.28ಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳ

ಚಿಕ್ಕಮಗಳೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ವಸಾಹತು ಹಿಂಭಾಗ, ಜಿಲ್ಲಾ ಪಂಚಾಯಿತಿ ಹತ್ತಿರ, ಜ್ಯೋತಿನಗರ, ಚಿಕ್ಕಮಗಳೂರು)...

ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಕುದುರೆಮುಖ, ಮುಳ್ಳಯ್ಯನ...

ಸಾರ್ವಜನಿಕರ ಸುರಕ್ಷತೆಗಾಗಿ “ಮನೆ-ಮನೆಗೆ ಪೊಲೀಸ್”

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ 368 ಬೀಟ್‌ಗಳಲ್ಲಿ ಏಕಕಾಲದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾ ಪೊಲೀಸ್...

ಗಿರಿಭಾಗಕ್ಕೆ ಪ್ರವೇಶ ಶುಲ್ಕ-ಪಾಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಮತ್ತು ಐ.ಡಿ.ಪೀಠ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಿ ವಾಸಿಗಳಿಗೆ ಪ್ರವೇಶ ಶುಲ್ಕ ಮತ್ತು ಪಾಸ್...