Home namma chikmagalur chikamagalur ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಹುಚ್ಚಾಟ
chikamagalurHomeLatest Newsnamma chikmagalur

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಹುಚ್ಚಾಟ

Share
Share

ಚಿಕ್ಕಮಗಳೂರು: ಪೋಲಿಸ್ ಇಲಾಖೆಯ ಎಚ್ಚರಿಕೆಯ ಫಲಕದ ಸಮೀಪದಲ್ಲೇ ಪ್ರವಾಸಿಗರು ಧುಮ್ಮಿಕ್ಕುವ ಜಲಪಾತಗಳ ಜಾರುವ ಬಂಡೆ ಮೇಲೆ ಫೋಟೋ ಶೂಟ್,ಎತ್ತರ ಕಲ್ಲುಬಂಡೆಗಳ ಮೇಲೆ ನಿಂತು ಡ್ಯಾನ್ಸ್‌ಮಾಡುವ ವೀಡಿಯೋ ಮಾಡಿಕೊಳ್ಳುವುದೂ ಸೇರಿದಂತೆ ನಿರ್ಭೀತಿಯಿಂದ ಪ್ರವಾಸಿಗರು ಹುಚ್ಚಾಟ ನಡೆಸುತ್ತಿರುವುದು ಮುಂದುವರೆದಿದೆ.

ಫೋಟೋ ಶೂಟ್ ಮಾಡಬೇಡಿ, ಬಂಡೆ ಹತ್ತಬೇಡಿ ಎಂಬ ನಾಮಫಲಕಹಾಕಿರುವ ಜಾಗದಲ್ಲೇ ಬಂಡೆ ಏರುತ್ತಿದ್ದಾರೆ.ಚಾರ್ಮಾಡಿ ಘಾಟಿಯಲ್ಲಿ ಬಣಕಲ್ ಪೊಲೀಸರು ಬೀಟ್ ಇರುತ್ತಾರೆ. ಇಡೀ ದಿನ ಓಡಾಡುತ್ತಿರು ತ್ತಾರೆ. ಆದರೆ, ಕೆಲ ಪ್ರವಾಸಿಗರು ಪೊಲೀಸರ ಕಣ್ತಪ್ಪಿಸಿ ಈ ರೀತಿ ಹುಚ್ಚಾಟ ಮೆರೆಯುತ್ತಿದ್ದಾರೆ.

ವರ್ಷ ಪೂರ್ತಿ ಸುರಿದ ನಿರಂತರ ಮಳೆಯಿಂದ ಚಾರ್ಮಾಡಿ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಸುಂದರ ತಾಣ. ೨೨ ಕಿ.ಮೀ. ವ್ಯಾಪ್ತಿಯ ರಸ್ತೆ ತಿರುವುದಗಳಿಂದ ಕೂಡಿದ್ದು ರಸ್ತೆಯ ಇಕ್ಕೆಲಗಳಲ್ಲಿ ಒಂದೆಡೆ ಪಾತಾಳ, ಮತ್ತೊಂದೆ ಡೆ ಮುಗಿಲೆತ್ತರದ ಬೆಟ್ಟಗುಡ್ಡಗಳು. ಇಂತಹ ಸುಂದರ ಹಾಗೂ ಅಪಾಯದ ತಾಣದಲ್ಲಿ ಪ್ರವಾಸಿಗರು ಹೇಳೋರು-ಕೇಳೋರಿಲ್ಲದೆ ಹುಚ್ಚಾಟ ಮೆರೆಯುತ್ತಿದ್ದಾರೆ.

ರಸ್ತೆ ಬದಿ ಎಲ್ಲೆಂದರಲ್ಲಿ ವಾಹನಗಳನ್ನ ಪಾರ್ಕ್ ಮಾಡುವ ಪ್ರವಾಸಿಗರು ಹತ್ತಾರು ಅಡಿ ಎತ್ತರ ಕಲ್ಲುಬಂಡೆಗಳ ಮೇಲೆ ನಿಂತು ಡ್ಯಾನ್ಸ್ ಮಾಡುತ್ತಾ ಫೋಟೋ ಕ್ಲಿಕ್ಕಿಸಿಕೊಳ್ಳುವ ಕ್ರೇಜಿಗೆ ಮುಂದಾಗಿದ್ದಾರೆ. ಈ ಕಲ್ಲುಬಂಡೆ ಹಾಗೂ ಗುಡ್ಡಗಳನ್ನು ಏರಿ ಇಳಿಯುವಾಗ ಒಂಚೂರು ಬ್ಯಾಲೆನ್ಸ್ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ.

ಈಗಾಗಲೇ ಇಂತಹ ಅಪಾಯಕಾರಿ ಜಾಗದಿಂದ ಬಿದ್ದು ಕೈ-ಕಾಲು ಮುರಿದುಕೊಂಡು, ತಲೆ ಒಡೆದುಕೊಂಡು ತಿಂಗಳುಗಟ್ಟಲೇ ಹಾಸಿಗೆ ಹಿಡಿದಿರುವವರು ಇದ್ದಾರೆ. ಆದರೆ, ಇಂತಹಾ ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರ ಮೋಜಿನ ಬೇಜವಾಬ್ದಾರಿ ವರ್ತನೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಹುಚ್ಚಾಟಮೆರೆಯುವ ಪ್ರವಾಸಿಗರ ವಾಹನಗಳನ್ನು ಸೀಜ್ ಮಾಡಬೇಕು. ಕೇಸ್ ದಾಖಲಿಸಬೇಕು. ಗದರಿಸಿ ಕಳಿಸಿದರೆ ಮತ್ತೆ ಅದೇ ಕೆಲಸ ಮಾಡುತ್ತಾರೆ ಎಂದು ಸ್ಥಳಿಯರು ಆಗ್ರಹಿಸಿದ್ದಾರೆ.

Tourists flock to Charmadi Ghat

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...