Home namma chikmagalur ಪಟ್ಟಣ ಸಹಕಾರ ಬ್ಯಾಂಕಿಗೆ 1.60 ಕೋಟಿ ರೂ ನಿವ್ವಳ ಲಾಭ
namma chikmagalurchikamagalurHomeLatest News

ಪಟ್ಟಣ ಸಹಕಾರ ಬ್ಯಾಂಕಿಗೆ 1.60 ಕೋಟಿ ರೂ ನಿವ್ವಳ ಲಾಭ

Share
Share

ಚಿಕ್ಕಮಗಳೂರು: : ಇಲ್ಲಿನ ಪಟ್ಟಣ ಸಹಕಾರ ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ ೧.೬೦ ಕೋಟಿ ರೂ ನಿವ್ವಳ ಲಾಭ ಗಳಿಸಿದ್ದು, ಷೇರುದಾರರಿಗೆ ಶೇ.೧೨ ರಷ್ಟು ಡಿವಿಡೆಂಟ್ ನೀಡಲು ಉದ್ದೇಶಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಹೆಚ್.ಎನ್ ನಂಜೇಗೌಡ ತಿಳಿಸಿದರು.
ಅವರು ಇಂದು ಕೆಂಪನಹಳ್ಳಿ ರಸ್ತೆ, ಗಾಯಿತ್ರಿದೇವಿ ಕಲ್ಯಾಣ ಮಂಟಪದಲ್ಲಿ ಚಿಕ್ಕಮಗಳೂರು ಪಟ್ಟಣ ಸಹಕಾರ ಬ್ಯಾಂಕ್ ೨೦೨೪-೨೫ನೇ ಸಾಲಿನ ಆಡಿಟ್ ಆದ ಲೆಕ್ಕಪತ್ರಗಳು ಮತ್ತು ವಾರ್ಷಿಕ ವರದಿ ೨೯ನೇ ವಾರ್ಷಿಕ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಡಳಿತ ಮಂಡಳಿಯ ಸಹಕಾರದೊಂದಿಗೆ ಠೇವಣಿ ಸಂಗ್ರಹ, ಸಾಲ ವಿತರಣೆ ಹಾಗೂ ಸಾಲ ವಸೂಲಾತಿಗೆ ಹೆಚ್ಚಿನ ಗಮನ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ ಆರ್‌ಬಿಐ ನಿರ್ದೇಶನಕ್ಕಿಂತ ಎನ್‌ಪಿಎ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದರು. ಬ್ಯಾಂಕಿನಲ್ಲಿ ೪೨೯೦ ಸದಸ್ಯರಿಂದ ಒಟ್ಟು ಷೇರುಬಂಡವಾಳ ೩೩೬.೯೮ ಲಕ್ಷ ರೂ ಸಂಗ್ರಹಣೆಯಾಗಿದ್ದು, ೩೧-೦೩-೨೦೨೫ ಕ್ಕೆ ೮೪.೭೩ ಕೋಟಿ ರೂ ಠೇವಣಿ ಸಂಗ್ರಹಿಸಲಾಗಿದೆ. ೫೮.೯೮ ಕೋಟಿ ರೂ ಸಾಲ ವಿತರಿಸಲಾಗಿದೆ. ೩೭.೩೬ ಕೋಟಿ ರೂ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಬಂಡವಾಳ ಹೂಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಕಳೆದ ವರ್ಷ ಬೈಪಾಸ್ ರಸ್ತೆಯಲ್ಲಿ ಪ್ರಾರಂಭಿಸಿದ ಬ್ಯಾಂಕಿನ ಶಾಖೆ ಉತ್ತಮವಾಗಿ ನಡೆಯುತ್ತಿದ್ದು, ಒಟ್ಟಾರೆಯಾಗಿ ಈ ಬಾರಿ ಬ್ಯಾಂಕಿಗೆ ಎ ಶ್ರೇಣಿ ಪಡೆಯಲಾಗಿದೆ ಎಂದು ತಿಳಿಸಿದರು. ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಹೊಸ ಸೇವೆಗಳು ಆರಂಭವಾಗಿದ್ದು, ಇದನ್ನು ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ. ಬ್ಯಾಂಕಿನ ಪ್ರಗತಿ ಬಗ್ಗೆ ವಿವರವಾಗಿ ಈಗಾಗಲೇ ಪ್ರತೀ ವರ್ಷ ವಾರ್ಷಿಕ ವರದಿಯಲ್ಲಿ ವಿವರಿಸಲಾಗಿದೆ ಎಂದರು.

ತಮ್ಮ ಅಧಿಕಾರವಧಿಯಲ್ಲಿ ನಗರದ ಹೃದಯ ಭಾಗದಲ್ಲಿರುವ ಪಟ್ಟಣ ಸಹಕಾರ ಬ್ಯಾಂಕ್ ಪ್ರಾರಂಭದಿಂದಲೂ ಲಾಭ ಗಳಿಸುತ್ತಾ ಬರುತ್ತಿರುವುದು ಸಂತಸ ತಂದಿದೆ. ಸರ್ಕಾರದ ನೀತಿ ಬಾರತೀಯ ರಿಸರ್ವ್ ಬ್ಯಾಂಕಿನ ಕಲ್ಪನೆ ಹಾಗೂ ಸಾಮಾಜಿಕ ನ್ಯಾಯದ ಎಲ್ಲಾ ಅಂಶಗಳನ್ನು ಸಮನಾಗಿ ಪಾಲಿಸಲಾಗುತ್ತಿದ್ದು, ಬ್ಯಾಂಕ್ ಇನ್ನಷ್ಟು ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಎಲ್ಲಾ ಸದಸ್ಯರು ಸಹಕರಿಸಬೇಕೆಂದು ಮನವಿ ಮಾಡಿದರು.

ಸಾಲ ಪಡೆದಿರುವವರು ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕಿನ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದ ಅವರು, ವ್ಯಾಪಾರ ಅಭಿವೃದ್ಧಿ, ಗೃಹ ನಿರ್ಮಾಣ, ವಾಹನ ಖರೀದಿಗೆ, ಚಿನ್ನದ ಮೇಲಿನ ಸಾಲಸೌಲಭ್ಯ ನೀಡಲಾಗಿದೆ ಎಂದು ವಿವರಿಸಿದರು. ಇದೆ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಸಭೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಭಗವತಿ ಹರೀಶ್, ನಿರ್ದೇಶಕರುಗಳಾದ ಎಂ.ವಿ. ಷಡಾಕ್ಷರಿ, ಬಿ.ಹೆಚ್ ಶ್ರೀಕಾಂತ್ ಪೈ, ಜಿ. ರಘು, ಎಂ.ಎಸ್ ಉಮೇಶ್, ಕೆ.ಎಸ್ ಧರ್ಮರಾಜ್, ಶಶಿಪ್ರಸಾದ್, ಶೈಲಜಾ ಮಂಜುನಾಥ್, ಸಿ.ಆರ್ ಮಂಜು, ಹೆಚ್.ಎಂ ಚಂದ್ರಶೇಖರ್, ಕೆ.ಡಿ. ಪುಟ್ಟಣ್ಣ, ಸಿ.ವಿ. ಹರ್ಷ, ಸಿಬ್ಬಂದಿಗಳಾದ ಬಿ.ವಿ ರಾಘವೇಂದ್ರ, ಬಿ.ಎನ್ ಅಶೋಕ್, ಸಿ.ಆರ್.ಶೈಲಜ, ಕೆ.ಟಿ.ಪ್ರಕಾಶ್, ಎ.ಶ್ರೀನಾಥ್, ಮದನ್ ಮಹೇಂದ್ರ.ಎಸ್.ಎಲ್, ಹೆಚ್.ಬಿ.ಮಾದಯ್ಯ, ಲಕ್ಷ್ಮಣ ಮತ್ತಿತರರು ಭಾಗವಹಿಸಿದ್ದರು. ಮೊದಲಿಗೆ ನಿರ್ದೇಶಕ ಪಿ. ಮಂಜುನಾಥ್ ಜೋಶಿ, ಸ್ವಾಗತಿಸಿದರು.

Town Cooperative Bank posts net profit of Rs 1.60 crore

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !

ಅಜ್ಜಂಪುರ: ಪಟ್ಟಣ ಪಂಚಾಯತಿ ಚುನಾವಣೆ ನಡೆದು ಇಪ್ಪತ್ತು ದಿನಗಳಾಗಿದೆ ಆದರೆ ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆ ವಿಳಂಬ...

ಜನರಿಗೆ ವಾಸ್ತವ ಸಂಗತಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ...

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು

ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’...

ಅಂಬೇಡ್ಕರ್ ಸಂವಿಧಾನದ ತತ್ವ ಹೊಂದಿರುವ ಪಕ್ಷ ಕಾಂಗ್ರೆಸ್

ಚಿಕ್ಕಮಗಳೂರು:  ಅಂಬೇಡ್ಕರ್ ಸಂವಿಧಾನದ ತತ್ವವನ್ನು ಹೊಂದಿರುವ ಪಕ್ಷ ಕಾಂ ಗ್ರೆಸ್. ಚುನಾವಣೆಗೆ ಮಾತ್ರ ಪಕ್ಷ ಸೀಮಿತವಾಗದೇ...