Home namma chikmagalur ajjampura ಅಜ್ಜಂಪುರ ಗರಿಗೆದರಿದ ಪಟ್ಟಣ ಪಂಚಾಯತಿ ಚುನಾವಣೆ
ajjampuraHomeLatest Newsnamma chikmagalur

ಅಜ್ಜಂಪುರ ಗರಿಗೆದರಿದ ಪಟ್ಟಣ ಪಂಚಾಯತಿ ಚುನಾವಣೆ

Share
Share

ಅಜ್ಜಂಪುರ:ಗ್ರಾಮ ಪಂಚಾಯಿತಿಯಾಗಿದ್ದನ್ನು ಮೇಲ್ದರ್ಜೆಗೆ ಏರಿಸಿ ಪಟ್ಟಣ ಪಂಚಾಯತಿಯಾಗಿ ಹಲವು ತಕರಾರುಗಳಿಂದಾಗಿ ಐದಾರು ವರ್ಷಗಳು ಚುನಾವಣೆ ನಡೆದಿಲ್ಲ.

ಆಗಸ್ಟ್ 17 ರಂದು ಚುನಾವಣೆ ನಡೆಯಲಿದ್ದು 11 ವಾರ್ಡ್‌ಗಳಿಗೆ ಅಭ್ಯರ್ಥಿಗಳನ್ನು ಚುನಾವಣಾ ಅಖಾಡಕ್ಕೆ ಇಳಿಸಲು ಕಾಂಗ್ರೆಸ್ ಮತ್ತು ಬಿಜೆಪಿ ತಯಾರಿ ನಡೆಸುತ್ತಿವೆ.

ಕೆಲ ವಾರ್ಡ್‌ ಗಳಲ್ಲಿ ಕಾಂಗ್ರೆಸ್ ಬಿಜೆಪಿಗೆ ತಲೆ ನೋವು ಸೃಷ್ಟಿಯಾಗಿದೆ.ಆಗಸ್ಟ್ 5 ನಾಮ ಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಆಕಾಂಕ್ಷೆಗಳಿಗೆ ಎದೆ ಬಡೆತ ಇದ್ದೇ ಇರುತ್ತದೆ.ಈ ವಾರ್ಡ್‌ ಗೆ ಅವರಂತೆ,ಇವರಂತೆ ಎಂಬ ಸುದ್ದಿಗಳು ಹರಿದಾಡುತ್ತಿವೆ.
ಬಿಜೆಪಿಗೆ 1 ಮತ್ತು2 ನೇ ವಾರ್ಡ್‌ನಲ್ಲಿ ಗೊಂದಲವಿದ್ದರೆ ಕಾಂಗ್ರೆಸ್ ಗೆ 8 ಮತ್ತು 11 ವಾರ್ಡ್‌ನಲ್ಲಿ ಗೊಂದಲವಿದೆ.

ಹೀಗಾಗಿ ಕೆಲ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಆಗುತ್ತದೆ ಎಂದು ಹೇಳಲಾಗುತ್ತದೆ.

ಅಜ್ಜಂಪುರದ ರಾಜಕೀಯ ರೂವಾರಿಗಳೆಂದು ಕರೆಸಿ ಕೊಳ್ಳುತ್ತಿದ್ದ ದಿವಂಗತ ಕೃಷ್ಣೋಜಿ ರಾವ್ ಚವಾಣ್ ಮಗ ಗಿರೀಶ್ ಚವಾಣ್ ಗೆ ಸ್ಪರ್ಧೆ ಮಾಡುವ ಅವಕಾಶವಿದ್ದರೂ ಸ್ಪರ್ಧೆ ಮಾಡುತ್ತಿಲ್ಲ.

ದಿವಂಗತ ಏಕೋರಾಮಸ್ವಾಮಿ ಮಗ ರಾಜ್ ಕುಮಾರ್ ಗೆ 8ನೇ ವಾರ್ಡ್‌ ನಿಂದ ಸ್ಪರ್ಧೆ ಮಾಡುವ ಅವಕಾಶ ಗ್ಯಾರಂಟಿ ಇಲ್ಲ ಪ್ರಯತ್ನ ನಡೆದಿದೆ.

ಇನ್ನೂ ಎಸ್ ತಿಪ್ಪೇರುದ್ರಪ್ಪರ ಕುಟುಂಬದವರು ಕಾಂಗ್ರೆಸ್ ಗೆ ಗುಡ್ ಬೈ ಹೇಳುವುದು ಖಚಿತ ಎಂದು ವಿಶ್ಲೇಷಣೆ ನಡೆಯುತ್ತಿದೆ.ಕೊನೆ ಘಳಿಗೆಯಲ್ಲಿ ಬದಲಾವಣೆಯೊಂದಿಗೆ ಅಖಾಡಕ್ಕೆ ಇಳಿದರು ಆಶ್ಚರ್ಯವಿಲ್ಲ.

ಶಾಸಕರಿದ್ದು ಆಡಳಿತಾರೂಢ ಕಾಂಗ್ರೆಸ್ ನಲ್ಲೂ ಗೊಂದಲಗಳು ಇವೆ.ಬಿಜೆಪಿ ಯಲ್ಲೂ ತಲೆನೋವು ಇದೆ.ಐದನೇ ತಾರೀಖಿನ ತನಕ ರಾಜಕೀಯ ಗೊಂದಲ ಮುಂದುವರಿಯಲಿದೆ ಎಂದು ಎರಡು ಪಕ್ಷದವರು ಹೇಳುತ್ತಿದ್ದಾರೆ.
ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಗೆ ಪ್ರತಿಷ್ಠೆ ಆದರೆ ಮಾಜಿ ಶಾಸಕರುಗಳಾದ ಡಿ.ಎಸ್.ಸುರೇಶ್ ಮತ್ತು ಎಸ್.ಎಂ.ನಾಗರಾಜುಗೂ ಪ್ರತಿಷ್ಠೆಯಾಗಿದೆ.

Town Panchayat elections in Ajjampura

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...