Home Political News ಬಾಬಾಬುಡನ್ ಗಿರಿಯಲ್ಲಿರುವ ಗೋರಿಗಳನ್ನು ಮುಟ್ಟಿ ನೋಡೊಣ : ದೇವರಾಜ್ ಸವಾಲು
Political News

ಬಾಬಾಬುಡನ್ ಗಿರಿಯಲ್ಲಿರುವ ಗೋರಿಗಳನ್ನು ಮುಟ್ಟಿ ನೋಡೊಣ : ದೇವರಾಜ್ ಸವಾಲು

Share
Share

ಚಿಕ್ಕಮಗಳೂರು : ದತ್ತ ಜಯಂತಿ ವೇಳೆ ಗೋರಿ ಸ್ಥಳಾಂತರಿಸುವ ಹೇಳಿಕೆ ನೀಡಿರುವ ಸಿ.ಟಿ ರವಿಗೆ ಕೆಪಿಸಿಸಿ ವಕ್ತಾರ ಎಚ್.ಎಚ್ ದೇವರಾಜ್ ವಿವಾದಿತ ಸ್ಥಳದಲ್ಲಿರುವ ಗೋರಿಗಳನ್ನು ಮುಟ್ಟಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿ.ಟಿ ರವಿ ಏನು ಮಾತನಾಡುತ್ತಿದ್ದಾರೆ ಎಂಬುದರ ಬಗ್ಗೆ ಆತ್ಮ ವಿಮರ್ಶೆ ಮಾಡಿಕೊಳ್ಳಲಿ ಮುಸ್ಲಿಮರಿಂದ ಅಸಹಿಷ್ಣುತೆ ಮತ್ತು ಭಯೋತ್ಪಾದನೆ ಬಗ್ಗೆ ಮಾತನಾಡುವ ಮೊದಲು ಯೋಚನೆ ಮಾಡಿ ಮಾತನಾಡಿ ದತ್ತಪೀಠ ವಿವಾದವನ್ನು ಬಗೆಹರಿಸಲು ನೀವು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀರಿ ಎಂಬುದನ್ನು ಜನರಿಗೆ ಮೊದಲು ತಿಳಿಸಿ, ವಾಚಾಮ ಗೋಚಾರವಾಗಿ ರಾಜ್ಯ ಸರ್ಕಾರವನ್ನು ಬಯ್ಯುವುದು ಮಾತ್ರ ನಿಮ್ಮ ಕೆಲಸ ಎಂದು ಕಿಡಿ ಕಾರಿದರು.

ದತ್ತ ಜಯಂತಿ ವೇಳೆಯಲ್ಲಿ ನೀವು ಮಾಡುತ್ತಿರುವ ಆಚರಣೆಗಳು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದ್ದು, ನ್ಯಾಯಾಂಗ ನಿಂದನೆ ಮಾಡುತ್ತಿದ್ದೀರಿ ಈ ಬಗ್ಗೆ ಮುಂದಿನ ದಿನಗಳಲ್ಲಿ ಸಿಎಂ ಹಾಗೂ ಡಿಸಿಎಂ ಜೊತೆ ಚರ್ಚಿಸಿ ಕ್ರಮಕ್ಕೆ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಅವರು ಸಂಘ ಪರಿವಾರ ದಿನೇ ದಿನೇ ತನ್ನ ಶಕ್ತಿ ಕಳೆದುಕೊಳ್ಳುತ್ತಿದೆ, ದತ್ತ ಜಯಂತಿ ಉತ್ಸವ ಕ್ಷಿಣಿಸುತ್ತಿದ್ದು ಜನರು ನಿಮ್ಮ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ದತ್ತಪೀಠ ವ್ಯವಸ್ಥಾಪನ ಸಮಿತಿಯ ಸದಸ್ಯರನ್ನು ಬದಲಾವಣೆ ಮಾಡುತ್ತೇವೆ. ರಾಜ್ಯಮಟ್ಟದಲ್ಲಿ ಈ ಬಗ್ಗೆ ಮುಖಂಡರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದರು.

ಮತೀಯ ಶಕ್ತಿಗಳು ಸಮಾಜ ಹೊಡೆಯುವ ಕೆಲಸ ಮಾಡುತ್ತಿದ್ದು ನೀವು ಪ್ರತಿಪಾದಿಸುತ್ತಿರುವ ಹಿಂದೂ ಧರ್ಮವೇ ಬೇರೆ ನಾವು ಪ್ರತಿಪಾದಿಸುವ ಧರ್ಮ ಸಂವಿಧಾನ. ನಮ್ಮನ್ನು ಸಂವಿಧಾನ ರಕ್ಷಿಸುತ್ತದೆ ಹೊರತು, ಧರ್ಮವಲ್ಲ ಬಾಯಿಗೆ ಬಂದಂತೆ ಮಾತನಾಡ ಬೇಡಿ, ಬೊಗಳೆ ಬಿಡುವುದನ್ನು ಮೊದಲು ನಿಲ್ಲಿಸಿ ಜನರ ದಿಕ್ಕು ತಪ್ಪಿಸಬೇಡಿ. ಉದ್ರೇಕಕಾರಿ ಭಾಷಣ ನಿಲ್ಲಿಸಿ ಎಂದು ಚಕ್ರವರ್ತಿ ಸೂಲಿಬೆಲೆ ವಿರುದ್ಧ ವಾಗ್ದಾಳಿ ನಡೆಸಿದರು.

ಹೊರಗಿನಿಂದ ಬಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಂಕಿ ಹಚ್ಚುವುದನ್ನ ಬಿಡಿ ಇದೇ ರೀತಿ ಮುಂದುವರೆದರೆ ಪ್ರಮೋದ್ ಮುತಾಲಿಕ್ ಅಂಥವರನ್ನು ಬಂಧಿಸಲು ಮುಂದಿನ ದಿನಗಳಲ್ಲಿ ಒತ್ತಾಯಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟವಾದ ನೀತಿ ನಿಯಮ ಬದ್ಧತೆ ಇದೆ. ಧೈರ್ಯವಿದ್ದರೆ ಆರ್.ಎಸ್‌.ಎಸ್ ಹಾಗೂ ಹಿಂದೂ ಸಂಘಟನೆಗಳು ರಾಜ್ಯ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ 5 ಗ್ಯಾರಂಟಿಗಳನ್ನು ತಿರಸ್ಕರಿಸಿ ಹಾಗೂ ಅದನ್ನು ಬಹಿರಂಗಪಡಿಸಿ ಎಂದು ಸವಾಲು ಹಾಕಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...