Home ತುಂಬಿ ಹರಿಯುತ್ತಿರುವ ತುಂಗಾ, ಭದ್ರಾ – ಹೇಮಾವತಿ ನದಿಗಳು
HomechikamagalurLatest Newsnamma chikmagalur

ತುಂಬಿ ಹರಿಯುತ್ತಿರುವ ತುಂಗಾ, ಭದ್ರಾ – ಹೇಮಾವತಿ ನದಿಗಳು

Share
filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 38;
Share

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ನಾಲ್ಕು ತಾಲೂಕುಗಳು ಹೊರತುಪಡಿಸಿ ಇನ್ನುಳಿದ ಐದು ತಾಲೂಕುಗಳಲ್ಲಿ ಭಾನುವಾರ ಮಳೆಯ ಪ್ರಮಾಣ ಇಳಿಮುಖವಾಗಿತ್ತು. ಆದರೆ, ಗಾಳಿಯ ಅಬ್ಬರ ಜೋರಾಗಿದೆ. ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳುತ್ತಿರುವುದರಿಂದ ಮನೆಯಿಂದ ಹೊರ ಹೋಗಲು ಜನರು ಆತಂಕಪಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಶನಿವಾರ ಇಡೀ ರಾತ್ರಿಯಿಂದ ಭಾನುವಾರ ಮುಂಜಾನೆಯವರೆಗೆ ಮಲೆನಾಡಿನಲ್ಲಿ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ. ನದಿ ಪಾತ್ರಗಳಲ್ಲಿರುವ ತಗ್ಗಿನ ಪ್ರದೇಶಗಳಲ್ಲಿ ನೀರು ಆವರಿಸಿಕೊಂಡಿದೆ. ಶೃಂಗೇರಿ ಪಟ್ಟಣಕ್ಕೆ ಜಲ ದಿಗ್ಭಂಧನವಾಗುವ ಆತಂಕ ಎದುರಾಗಿದೆ. ಇಲ್ಲಿನ ಕುರುಬಗೇರಿ, ವಿದ್ಯಾರಣ್ಯಪುರ ರಸ್ತೆಗಳು ಜಲಾವ್ರತವಾಗಿವೆ. ಶೃಂಗೇರಿಯ ದೇಗುಲಕ್ಕೆ ಬರುವ ಭಕ್ತರು ವಾಹನಗಳು ಪಾರ್ಕಿಂಗ್‌ ಮಾಡುವ ಗಾಂಧಿ ಮೈದಾನವೂ ಸಹ ಜಲವ್ರತವಾಗಿದ್ದು, ರಾತ್ರಿ ಹೊತ್ತಿನಲ್ಲಿ ಕೆಲವು ಕಾರ್‌ಗಳು ನದಿ ನೀರಿನಲ್ಲಿದ್ದವು.

ಶೃಂಗೇರಿ ತಾಲೂಕಿನ ನೆಮ್ಮಾರ್‌ ಬಳಿ ಭೂ ಕುಸಿತ ಮುಂದುವರೆದಿತ್ತು. ಕೊಪ್ಪ ತಾಲೂಕಿನಲ್ಲೂ ಮಳೆ ಮುಂದುವರೆದಿದ್ದು, ನಾಗಲಾಪುರ ಗ್ರಾಮದಲ್ಲಿ ತುಂಗಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಸಮೀಪದ ಭತ್ತದ ಗದ್ದೆಗಳು ಜಲಾವ್ರತವಾಗಿದ್ದವು. ಹರಿಹರಪುರದ ಮಠದ ಮೆಟ್ಟಿಲು ಸಮೀಪಕ್ಕೆ ನೀರು ಬಂದಿತ್ತು. ಕಳಸ ತಾಲೂಕಿನಲ್ಲಿ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಹೀಗಾಗಿ ಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ.

ಮೂಡಿಗೆರೆ ತಾಲೂಕಿನಲ್ಲಿ ಮಳೆ ಮುಂದುವರೆದಿದೆ. ಆದರೆ, ಚಿಕ್ಕಮಗಳೂರು ತಾಲೂಕಿನಲ್ಲಿ ಬೆಳಿಗ್ಗೆಯಿಂದಲೇ ಬಿಸಿಲಿನ ವಾತಾವರಣ ಇದ್ದು, ಮಳೆ ಬಿಡುವು ನೀಡಿತ್ತು. ಎನ್‌.ಆರ್‌.ಪುರ ತಾಲೂಕಿನಲ್ಲಿ ಮಳೆ, ಬಿಸಿಲು, ಮೋಡ ಕವಿದ ವಾತಾವರಣ ಇತ್ತು. ಆದರೆ, ತರೀಕೆರೆ, ಕಡೂರು ಹಾಗೂ ಅಜ್ಜಂಪುರ ತಾಲೂಕುಗಳಲ್ಲಿ ಮಳೆ ಇಳಿಮುಖವಾಗಿತ್ತು.

ಜಿಲ್ಲೆಯಲ್ಲಿ ಮಳೆ ಇಳಿಮುಖವಾಗುತ್ತಿದ್ದಂತೆ ಗಾಳಿಯ ಆರ್ಭಟ ಜೋರಾಗಿದೆ. ಬಲವಾಗಿ ಗಾಳಿ ಬೀಸುತ್ತಿರುವುದರಿಂದ ವಿದ್ಯುತ್‌ ಕಂಬಗಳು, ಮರಗಳು ಬೀಳುತ್ತಿರುವುದರಿಂದ ಹಲವೆಡೆ ವಿದ್ಯುತ್‌ ಸಂಪರ್ಕ ಕಡಿದು ಹೋಗಿದೆ. ಶೃಂಗೇರಿ, ಕೊಪ್ಪ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಹಲವೆಡೆ ಕಳೆದ 3-4 ದಿನಗಳಿಂದ ವಿದ್ಯುತ್‌ ಸಂಪರ್ಕ ಸ್ಥಗಿತಗೊಂಡಿದೆ. ಚಾರ್ಜ್ ಮಾಡಿಕೊಳ್ಳಲು ವಿದ್ಯುತ್‌ ಇಲ್ಲದಿರುವುದರಿಂದ ಮೊಬೈಲ್‌ಗಳು ಸಹ ಸ್ವಿಚ್‌ ಆಫ್‌ ಆಗಿವೆ.

ಕೊಪ್ಪ ತಾಲಕಿನ ಲೋಕನಾಥಪುರ ಬಳಿ ಮರವೊಂದು ಬಿದ್ದ ಪರಿಣಾಮ, ಸಮೀಪದಲ್ಲೇ ಹಾದು ಹೋಗಿರುವ ವಿದ್ಯುತ್‌ ಕಬ್ಬವೂ ಸಹ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ಚಿಕ್ಕಮಗಳೂರು ನಗರದಿಂದ ಗಿರಿ ಪ್ರದೇಶಕ್ಕೆ ತೆರಳುವ ಮಾರ್ಗದಲ್ಲಿರುವ ಕೈಮರ ಚೆಕ್‌ ಪೋಸ್ಟ್‌ ಬಳಿ ಮರ ಹಾಗೂ ವಿದ್ಯುತ್‌ ಕಂಬ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದ ಕಡ್ಡಿಪುಡಿ ಎಸ್ಟೇಟ್‌ ಬಳಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ಕೆಲ ಸಮಯ ಅಡಚಣೆಯಾಗಿತ್ತು. ಒಟ್ಟಾರೆ ಮುಂಗಾರು ಮಳೆ ಮತ್ತು ಗಾಳಿಯಿಂದಾಗಿ ಅನಾಹುತಗಳು ಹೆಚ್ಚಾಗುತ್ತಿವೆ. ಹಲವೆಡೆ ಮನೆಗಳು ಸಹ ಬೀಳುತ್ತಿವೆ.

Tunga-Bhadra and Hemavati rivers overflowing due to heavy rains in the district

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ವಿದ್ಯಾರ್ಥಿಗಳು ದೃಢ ಆತ್ಮವಿಶ್ವಾಸ, ಉತ್ತಮ ನಡವಳಿಕೆಯನ್ನು ಮೈಗೂಡಿಸಿಕೊಳ್ಳ ಬೇಕೆಂದು ಜಿಲ್ಲಾಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ ತಿಳಿಸಿದರು. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಪ್ರತಿಭಾ ಪುರಸ್ಕಾರ...

ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ರೈತ ಹುತಾತ್ಮ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಪಕ್ಷ ಸಂಘಟನೆಗಳಿಂದ ನಗರದಲ್ಲಿ ಇಂದು ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಆಜಾದ್ ಪಾರ್ಕಿನಲ್ಲಿ ಹಸಿರು ಬಾವುಟದೊಂದಿಗೆ ಸಮಾವೇಶಗೊಂಡ ನೂರಾರು ರೈತರು, ವಿವಿಧ...

Related Articles

ಮೂಲಭೂತ ಸೌಲಭ್ಯ ಕಲ್ಪಿಸಲು ಜ್ಯೋತಿನಗರ ಬಡಾವಣೆ ನಿವಾಸಿಗಳ ಮನವಿ

ಚಿಕ್ಕಮಗಳೂರು: ನಗರದ ಜ್ಯೋತಿ ನಗರ ಬಡಾವಣೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು...

ಧರ್ಮಸ್ಥಳದ ಅಸಹಜ ಸಾವು ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಧರಣಿ

ಆಲ್ದೂರು: ‘ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿರುವುದು ರಾಜ್ಯ...

ಯುವಜನರಿಗೆ ಅಬ್ದುಲ್ ಕಲಾಂ ಸ್ಪೂರ್ತಿದಾಯಕ ವ್ಯಕ್ತಿ

ಚಿಕ್ಕಮಗಳೂರು:  ಬಾಹ್ಯಕಾಶದ ವಿಜ್ಞಾನಿ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ಅವರ ೧೦ನೇ ವರ್ಷದ ಪುಣ್ಮಸ್ಮರಣೆ ಅಂಗವಾಗಿ ನಗರದ...

ಹುಯಿಗೆರೆ ಗ್ರಾಮ ಬಳಿ ಕಾಡಾನೆ ದಾಳಿಗೆ ಕೃಷಿಕನ ಸಾವು

ಬಾಳೆಹೊನ್ನೂರು: ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡವಾನೆ ಜಾಗರ ಬಳಿ ಕೃಷಿಕ ಸಬ್ರಾಯಗೌಡ (65) ಎಂಬುವರ...