Home namma chikmagalur chikamagalur ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ
chikamagalurCrime NewsHomeLatest Newsnamma chikmagalur

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

Share
Share

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕುರಿಚಿಕ್ಕನಹಳ್ಳಿಯ ನಿಂಗೇಗೌಡ (60) ಎಂಬ ರೈತರು ತಾವು ಕಷ್ಟಪಟ್ಟು ಬೆಳೆದಿದ್ದ ಆಲೂಗಡ್ಡೆ ಮತ್ತು ಬೀನ್ಸ್ ಅನ್ನು ಎಪಿಎಂಸಿಯಲ್ಲಿ ಮಾರಿ ಬಂದ 50,000 ರೂಪಾಯಿ ನಗದಿನೊಂದಿಗೆ ಊರಿಗೆ ಮರಳಲು ಫೆಬ್ರವರಿ 16ರ ಬೆಳಿಗ್ಗೆ ಎಐಟಿ ಸರ್ಕಲ್‌ ಬಳಿ ಬಸ್‌ಗಾಗಿ ಕಾಯುತ್ತಿದ್ದರು.

ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು, “ನಾವು ಸಖರಾಯಪಟ್ಟಣದ ಕಡೆಗೇ ಹೋಗುತ್ತಿದ್ದೇವೆ. ಬನ್ನಿ ನಿಮ್ಮ ಊರಿಗೆ ಬಿಡುತ್ತೇವೆ” ಎಂದು ನಂಬಿಸಿ ವೃದ್ಧರನ್ನು ಬೈಕ್ ಹತ್ತಿಸಿಕೊಂಡಿದ್ದಾರೆ. ಆದರೆ ಕಣಿವೆ ದೇವಸ್ಥಾನದ ಬಳಿ ತಲುಪುತ್ತಿದ್ದಂತೆ ರೈತನ ಬಾಯಿ ಮುಚ್ಚಿ, ಎದೆ ಹಾಗೂ ಮುಖಕ್ಕೆ ಮನಸೋಇಚ್ಛೆ ಹಲ್ಲೆ ನಡೆಸಿ ಅವರ ಬಳಿಯಿದ್ದ ಸಂಪೂರ್ಣ ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.

ಘಟನೆ ನಡೆದ ತಕ್ಷಣ ಎಚ್ಚೆತ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ ಜಯಕುಮಾ‌ರ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ನಗರ ಪೊಲೀಸ್ ನಿರೀಕ್ಷಕ ಅಭಯ್ ಪ್ರಕಾಶ್ ಸೋಮನಾಳ್ ನೇತೃತ್ವದ ತಂಡವು ವೈಜ್ಞಾನಿಕ ಮತ್ತು ತಾಂತ್ರಿಕ ತನಿಖೆ ನಡೆಸಿ, ತುಮಕೂರು ಜಿಲ್ಲೆಯ ತುರುವೇಕೆರೆ ಮೂಲದ ಧನಪಾಲ (18) ಹಾಗೂ ಒಬ್ಬ ಅಪ್ರಾಪ್ತ ಬಾಲಕನನ್ನು ಬಂಧಿಸಿದೆ.

ಬಂಧಿತರಿಂದ ದೋಚಲಾದ ಹಣದಲ್ಲಿ 29,500 ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣವನ್ನು ಅತ್ಯಂತ ವೇಗವಾಗಿ ಭೇದಿಸಿದ ಪೊಲೀಸ್ ತಂಡದ ಕಾರ್ಯವೈಖರಿಯನ್ನು ಎಸ್‌ಪಿ ಶ್ಲಾಘಿಸಿದ್ದು, ಬಹುಮಾನ ಘೋಷಿಸಿದ್ದಾರೆ.

ಕಷ್ಟಪಟ್ಟು ಬೆಳೆದ ಫಸಲಿನ ಹಣವನ್ನು ದೋಚಿದ ಕಿರಾತಕರು ಈಗ ಕಾನೂನಿನ ಸುಳಿಗೆ ಸಿಲುಕಿದ್ದು, ಸಾರ್ವಜನಿಕರು ಅಪರಿಚಿತರ ವಾಹನ ಹತ್ತುವ ಮುನ್ನ ಇಂತಹ ಘಟನೆಗಳು ಎಚ್ಚರಿಕೆಯ ಘಂಟೆಯಾಗಿದೆ.

Two arrested for inter-district robbery after stealing money

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ಅಜ್ಜಂಪುರ: ರೈಲ್ವೆ ಹಳಿ ಮೇಲೆ ರೈಲಿಗೆ ಸಿಲುಕಿ ಸುಮಾರು 65 ರಿಂದ 70 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯು ಕೋಲು ಮುಖ, ಸದೃಢ ಮೈಕಟ್ಟು ಮತ್ತು ಎಣ್ಣೆ...

ಶಾಸಕ ತಮ್ಮಯ್ಯ ರಸ್ತೆ ಡಾಂಬರೀಕರಣ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರಸಭಾ ವ್ಯಾಪ್ತಿಯಲ್ಲಿ ವಿಶೇಷ ಅನುದಾನದಡಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಪೂರ್ಣಗೊಂಡ ಕಾಮಗಾರಿಗಳನ್ನು ಶಾಸಕ ಹೆಚ್.ಡಿ. ತಮ್ಮಯ್ಯ ಪರಿಶೀಲಿಸಿದರು. ಅವರು ಇಂದು ನಗರದ ವಿವಿಧ ವಾರ್ಡ್‌ಗಳಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು...

Related Articles

ಆಸ್ತಿ ವಿವಾದ – ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಆಸ್ತಿ ವಿವಾದವೊಂದು ಭೀಕರ ಸ್ವರೂಪ ಪಡೆದುಕೊಂಡಿದೆ. ತಂದೆ ತಾಯಿ ಹಾಗೂ ತಂಗಿಯನ್ನು ಕಳೆದುಕೊಂಡು ಅನಾಥನಾಗಿದ್ದ...

ಡಿ.ಸಿ.ಸಿ.ಬ್ಯಾಂಕ್ ನಲ್ಲಿ ಜಾತಿ ” ಘಾಟು” ಮತ್ತು “ಟ್ರಂಕ್” ಸೊಸೈಟಿಗಳ ಆರ್ಭಟ ?

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಲ್ಲಿ”ಜಾತಿ” ಗ್ರಹಣ ಮೊದಲಿನಿಂದಲೂ ಇದೆ ಆದರೆ...

ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಆನ್‌ಲೈನ್ ಉದ್ಯೋಗ ವಂಚನೆ

ಚಿಕ್ಕಮಗಳೂರು : ಇಂಜಿನಿಯರಿಂಗ್ ಪದವೀಧರೆ ಆನ್‌ಲೈನ್ ಉದ್ಯೋಗ ವಂಚನೆಗೆ ಬಲಿಯಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ನಗರದ...

ಆನ್‌ಲೈನ್ ಟ್ರೇಡಿಂಗ್ ಆಸೆಗೆ 4.36 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ

ಕಡೂರು : ಮಹಿಳೆಯೊಬ್ಬರು ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 4.36 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ...