Home namma chikmagalur chikamagalur ಮೂಡಿಗೆರೆಯಲ್ಲಿ ಖೋಟಾ ₹200 ನೋಟುಗಳೊಂದಿಗೆ ಇಬ್ಬರ ಬಂಧನ
chikamagalurHomeLatest Newsnamma chikmagalur

ಮೂಡಿಗೆರೆಯಲ್ಲಿ ಖೋಟಾ ₹200 ನೋಟುಗಳೊಂದಿಗೆ ಇಬ್ಬರ ಬಂಧನ

Share
Share

ಮೂಡಿಗೆರೆ:  ಖೋಟಾ ₹200 ಮುಖಬೆಲೆಯ ನೋಟುಗಳನ್ನು ಸ್ವಾಧೀನದಲ್ಲಿಟ್ಟುಕೊಂಡು ಚಲಾವಣೆಗೆ ಯತ್ನಿಸುತ್ತಿದ್ದ ಆರೋಪದಡಿ ಮೂಡಿಗೆರೆ ಪೊಲೀಸರು ಇಬ್ಬರನ್ನು ಬಂಧಿಸಿ ಒಟ್ಟು 90 ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಉಪನಿರೀಕ್ಷಕರು (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಸಿಬ್ಬಂದಿ, ಪಂಚರ ಸಮಕ್ಷಮ ಮೂಡಿಗೆರೆ ಎಂ.ಜಿ.ಎಂ. ಸರ್ಕಾರಿ ಆಸ್ಪತ್ರೆ ಸಮೀಪದ ಸುಬ್ರಾಯಗೌಡರ ಹೊಸ ಲೇಔಟ್‌ನಲ್ಲಿ ದಾಳಿ ನಡೆಸಿದರು. ಈ ವೇಳೆ ಅನುಮಾನಾಸ್ಪದವಾಗಿ ಕುಳಿತಿದ್ದ ಇಬ್ಬರನ್ನು ತಪಾಸಣೆ ಮಾಡಿದಾಗ, ಅವರ ಬಳಿ ₹200 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿವೆ.

ಬಂಧಿತರನ್ನು ಮೊಹಮ್ಮದ್ ಅಲಿ (36), ಈಶ್ವರಕಟ್ಟೆ ಗ್ರಾಮ, ಮೂಡು ಪೆರಾರು, ಮಂಗಳೂರು ತಾಲೂಕು ಹಾಗೂ ಹೆಚ್.ಎಸ್. ಮಹೇಶ್ (39), ನವಗ್ರಾಮ, ಹಂಡುಗುಳಿ ಗ್ರಾಮ, ಗೋಣಿಬೀಡು ಹೋಬಳಿ, ಮೂಡಿಗೆರೆ ತಾಲೂಕು ಎಂದು ಗುರುತಿಸಲಾಗಿದೆ.

ತಪಾಸಣೆಯಲ್ಲಿ ಇಬ್ಬರ ಬಳಿಯೂ ತಲಾ 45 ಖೋಟಾ ₹200 ನೋಟುಗಳು, ಒಟ್ಟು 90 ನೋಟುಗಳು (ಒಟ್ಟು ಮುಖಬೆಲೆ ₹18,000) ಪತ್ತೆಯಾಗಿವೆ. ನೋಟುಗಳನ್ನು ಪರಿಶೀಲಿಸಿದಾಗ, “Reserve Bank of India” ಎಂಬುದರ ಬದಲಿಗೆ “BESERVE RANK OF INDIA” ಎಂದು ಮುದ್ರಿತವಾಗಿರುವುದು ಕಂಡುಬಂದಿದ್ದು, ಅವು ಮೇಲ್ನೋಟಕ್ಕೆ ನಕಲಿ ನೋಟುಗಳೆಂದು ಪೊಲೀಸರು ತಿಳಿಸಿದ್ದಾರೆ.

ವಶಪಡಿಸಿಕೊಂಡ ನೋಟುಗಳನ್ನು ಪಂಚರ ಸಮಕ್ಷಮ ಸೀಜ್ ಮಾಡಿ, ಆರೋಪಿಗಳನ್ನು ಬಂಧಿಸಿ ಮೂಡಿಗೆರೆ ಪೊಲೀಸ್ ಠಾಣೆಗೆ ಕರೆತರಲಾಗಿದೆ.

ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 125/2026ರಡಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 179 ಮತ್ತು 180 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಖೋಟಾ ನೋಟುಗಳ ಮೂಲ ಹಾಗೂ ಅವುಗಳನ್ನು ಎಲ್ಲಿಂದ ಪಡೆದುಕೊಂಡಿದ್ದರು ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Two arrested with fake ₹200 notes in Mudigere

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾ ಆಸ್ಪತ್ರೆಯ ಸರ್ಜನ್ ಆಗಿ ಡಾ.ದೇವರಾಜ್

ಚಿಕ್ಕಮಗಳೂರು; ಮಲ್ಲೇಗೌಡ ಜನರಲ್ ಆಸ್ಪತ್ರೆಯ ಸರ್ಜನ್ ಆಗಿ ಡಾ.ಟಿ.ಎಂ.ದೇವರಾಜ್ ನೇಮಕವಾಗಿದ್ದು ಇಂದು ಮಧ್ಯಾಹ್ನ. ಅಧಿಕಾರ ಸ್ಪೀಕಾರ ಮಾಡಲಿದ್ದಾರೆ. ಮೂಳೆ ತಜ್ಞರಾಗಿ ಹಲವಾರು ಊರುಗಳಲ್ಲಿ ಸೇವೆ ಸಲ್ಲಿಸಿದರವರು.ತರೀಕೆರೆ ದೇವರಾಜ್ ತರೀಕೆರೆಯಲ್ಲಿ ಹೆಚ್ಚು ವರ್ಷಗಳ...

ಭದ್ರಾ ಹುಲಿ ಸಂರಕ್ಷಿತ ಸಿಬ್ಬಂದಿಗಳಿಂದಲೇ ಮದ್ಯಪಾನ ಮೋಜು ಮಸ್ತಿ

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ವ್ಯಾಪ್ತಿಯ ತಣಿಗೆಬೈಲು ವಲಯದ, ವಿರೂಪಾಕ್ಷ ಖಾನ್ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಗಳು ಆಗಲು ರಾತ್ರಿ ಎನ್ನದೆ ಮದ್ಯಪಾನ ಮಾಡಿ ಮೋಜು ಮಸ್ತಿಯಲ್ಲಿ ತೊಡಗಿರುವುದು ಕಂಡುಬಂದಿದೆ , ಚೆಕ್...

Related Articles

ಮೇಡಿಕಲ್ ಅಂಗಡಿಯಲ್ಲಿ ನಗದು ಕಳವು ಆರೋಪಿ ಬಂದನ

ಶೃಂಗೇರಿ: ಪಟ್ಟಣದ ಭಾರತೀ ಬೀದಿಯಲ್ಲಿರುವ ಭಗವಾನ್ ಮೇಡಿಕಲ್ ಅಂಗಡಿಯಲ್ಲಿ ಜು.೭ರಂದು ಬೀಗ ಒಡೆದು ಬಾಗಿಲು ತೆರೆದು...

ನೀಟ್ ವಿದ್ಯಾರ್ಥಿಗಳ ಹಲ್ಲೆ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಚಿಕ್ಕಮಗಳೂರು:  ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು...

ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಆತಂಕಗೊಂಡಿರುವ ಕಡೂರು ತಾಲೂಕಿನ ಅಯ್ಯನಕೆರೆ ಹಾಗೂ ಮದಗದಕೆರೆ ತಪ್ಪಲಿನ ಗ್ರಾಮಸ್ಥರು ಉತ್ತಮ...

ತೆಂಗಿನಕಾಯಿ ಕದ್ದ ಆರೋಪ: ಮಹಿಳೆ ಮೇಲೆ ಮೂವರಿಂದ ಹಲ್ಲೆ

ಕಡೂರು: ತೆಂಗಿನಕಾಯಿ ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಮೂವರು ಪುರುಷರು ಹಲ್ಲೆ ನಡೆಸಿದ ಘಟನೆ...