Home namma chikmagalur chikamagalur ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು
chikamagalurCrime NewsHomeLatest Newsnamma chikmagalur

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

Share
Share

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಶೈಲಾ (57) ಎಂಬುವರ ಜಾನುವಾರುಗಳು ಮೃತಪಟ್ಟಿದ್ದು, ಈ ಸಂಬಂಧ ಅವರು ನರಸಿಂಹರಾಜಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶೈಲಾ ಅವರು ತಮ್ಮ ತೋಟದಲ್ಲಿ ಗೊಬ್ಬರ ಹಾಗೂ ಹಾಲಿನ ಉದ್ದೇಶಕ್ಕಾಗಿ ಆರು ಜಾನುವಾರುಗಳನ್ನು ಸಾಕುತ್ತಿದ್ದು, ಪ್ರತಿದಿನ ಜಾನುವಾರುಗಳನ್ನು ಮೇಯಲು ಕಾಡಿಗೆ ಬಿಡುತ್ತಿದ್ದರು. ಆಗಸ್ಟ್ 11ರಂದು ಬೆಳಿಗ್ಗೆ 8 ಗಂಟೆಗೆ ಎಂದಿನಂತೆ ಜಾನುವಾರುಗಳನ್ನು ಮೇಯಲು ಕಾಡಿಗೆ ಬಿಟ್ಟ ಬಳಿಕ ಅವರು ಶಾಲೆಯಲ್ಲಿ ಬಿಸಿಯೂಟ ತಯಾರಿಸಲು ತೆರಳಿದ್ದರು.

ಮಧ್ಯಾಹ್ನ 12.15ರ ಸುಮಾರಿಗೆ ಗ್ರಾಮದ ನಾಗರಾಜ್ ಎಂಬುವರು ಕರೆ ಮಾಡಿ, ಶ್ರವಣ್ ಕುಮಾರ್ ಎಂಬುವರ ಜಮೀನಿನ ಐಬೆಕ್ಸ್ ತಂತಿ ಬೇಲಿಗೆ ಸಿಲುಕಿ ಎರಡು ಜಾನುವಾರುಗಳು ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ. ಬಳಿಕ ಶಾಲೆಯ ಕೆಲಸ ಮುಗಿಸಿ ಮಧ್ಯಾಹ್ನ 2.30ರ ಸುಮಾರಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ತಮ್ಮ ಮನೆಯ ಒಂದು ಹೋರಿಕರು ಹಾಗೂ ಒಂದು ದನ ಮೃತಪಟ್ಟಿರುವುದು ಕಂಡುಬಂದಿದೆ.

ಐಬೆಕ್ಸ್ ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಶೈಲಾ ಅವರು ಕೆಇಬಿ ಲೈನ್‌ಮ್ಯಾನ್ ಸುನೀಲ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಲೈನ್‌ಮ್ಯಾನ್ ತಂತಿಯನ್ನು ಪರಿಶೀಲಿಸಿದಾಗ, ಬೇಲಿಗೆ ಮನೆಯ ವಿದ್ಯುತ್ ಸಂಪರ್ಕದಿಂದ ವಿದ್ಯುತ್ ಹರಿಸಲಾಗಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಜಾನುವಾರುಗಳು ಜಮೀನಿಗೆ ಪ್ರವೇಶಿಸದಂತೆ ಶ್ರವಣ್ ಕುಮಾರ್ ಅವರು ಐಬೆಕ್ಸ್ ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದು, ಇದರಿಂದ ತಲಾ ಸುಮಾರು ₹15 ಸಾವಿರ ಮೌಲ್ಯದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಶೈಲಾ ಆರೋಪಿಸಿದ್ದಾರೆ.

ಘಟನೆ ಕುರಿತು ಲೈನ್‌ಮ್ಯಾನ್ 112 ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರವಣ್ ಕುಮಾರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶೈಲಾ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

Two cattle die due to electric shock

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ...