ಮೂಡಿಗೆರೆ: ಇಲ್ಲಿನ ಕಾಡು ಪ್ರದೇಶದಲ್ಲಿ ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆ ಕಾಡಾನೆ ದಾಳಿ ನಡೆಸಿ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡವರಲ್ಲಿ ಇಟಿಎಫ್ ಬೀಟ್ ಫಾರೆಸ್ಟರ್ ರಮೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೊರಗುತ್ತಿಗೆ ಸಿಬ್ಬಂದಿ ವಿಶ್ವ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆಯ ನಂತರ ಇಬ್ಬರನ್ನೂ ತಕ್ಷಣ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಮೇಶ್ ಅವರ ಸ್ಥಿತಿ ಗಂಭೀರವಾಗಿದ್ದು, ವಿಶ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಚಿಕಿತ್ಸೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಈ ಘಟನೆ ಹಿನ್ನೆಲೆ, ಪ್ರದೇಶದಲ್ಲಿ ಕಾಡಾನೆಗಳ ಚಲನವಲನ ಹೆಚ್ಚಿರುವುದರಿಂದ ಸಾರ್ವಜನಿಕರು ಹಾಗೂ ಸಿಬ್ಬಂದಿ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
Two forest department personnel injured in wild elephant attack
Leave a comment