Home Crime News ಸರಣಿ ಕಳ್ಳತನ ಮಾಡಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರ ಬಂಧನ
Crime News

ಸರಣಿ ಕಳ್ಳತನ ಮಾಡಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರ ಬಂಧನ

Share
Share

ಚಿಕ್ಕಮಗಳೂರು: ಸರಣಿ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಖದೀಮರನ್ನು ಬಾಳೆಹೊನ್ನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸೆಂಬರ್ 18ರ ರಾತ್ರಿ ಬಾಳೆಹೊನ್ನೂರು ಪಟ್ಟಣದ ಮುಬಾರಕ್ ಹುಸೇನ್ ಎಂಬುವವರ ಅಂಗಡಿಯ ಬೀಗ ಮುರಿದು 20 ಸಾವಿರ ನಗದು ಎರಡು ದುಬಾರಿ ಮೌಲ್ಯದ ವಾಚ್ ಹಾಗೂ ಸಿಸಿ ಕ್ಯಾಮರದ ಡಿವಿಆರ್ ಅನ್ನು ಕಳ್ಳರು ಎಗರಿಸಿದ್ದರು. ಅಲ್ಲದೇ ಎದುರುಗಡೆ ಇದ್ದ ಕಲ್ಮಕ್ಕಿ ವೈನ್ ಶಾಪ್ ಬೀಗ ಒಡೆದು ಮೂರು ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ಕಳವು ಮಾಡಿ, ಮತ್ತೊಂದು ದಿನಸಿ ಅಂಗಡಿಯ ರೋಲಿಂಗ್ ಶೆಟರ್ ಮುರಿದು ಎರಡು ಸಾವಿರ ನಗದು ಎಗರಿಸಿ ಕಳ್ಳರು ಕೈಚಳಕ ತೋರಿದ್ದರು.

ಈ ಕುರಿತು ಅಂಗಡಿ ಮಾಲೀಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಬಾಳೆಹೊನ್ನೂರು ಪಿಎಸ್ಐ ರವೀಶ್ ಹಾಗೂ ಸಿಬ್ಬಂದಿಗಳು, ಚಿತ್ರದುರ್ಗ ಮೂಲದ ಕರುಣ ಹಾಗೂ ಹಸೈನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ 3.50 ಲಕ್ಷ ನಗದು, 4.10 ಲಕ್ಷ ಮೌಲ್ಯದ ವಸ್ತುಗಳು ಸೇರಿದಂತೆ ಮಾರುತಿ ಸ್ವಿಫ್ಟ್ ಕಾರನ್ನು ಆರೋಪಿಗಳಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...