Home namma chikmagalur chikamagalur ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
chikamagalurCrime NewsHomeLatest Newsnamma chikmagalur

ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು

Share
Share

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೂಡಿಗೆರೆ ಠಾಣಾ ವ್ಯಾಪ್ತಿಯ ಕುನ್ನಳ್ಳಿ ಗ್ರಾಮದ ವಿನೋದ್ (28) ಅವರು ಕೂಲಿ ಕೆಲಸ ಮುಗಿಸಿಕೊಂಡು ಸ್ನೇಹಿತ ರಮೇಶ್ ಜೊತೆ ಬೈಕ್‌ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹಳಸೆ ದಿಕ್ಕಿನಿಂದ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಮತ್ತೊಂದು ಬೈಕ್ ವಿನೋದ್ ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ವಿನೋದ್ ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿ, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರನ್ನು ಮೃತರಾಗಿದ್ದಾರೆಂದು ಘೋಷಿಸಿದ್ದಾರೆ. ಈ ಸಂಬಂಧ ಮೃತರ ತಂದೆ ಹರಿಶ್ಚಂದ್ರ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನೊಂದು ಘಟನೆ ಸಕ್ಕರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿಳ್ಳೇನಹಳ್ಳಿಯ ತಿಮ್ಮಯ್ಯ ಅವರು ಸಕ್ಕರಾಯಪಟ್ಟಣದ ಪ್ಲೇಗಿನಮ್ಮ ದೇವಾಲಯದ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಚಿಕ್ಕಮಗಳೂರು ದಿಕ್ಕಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.

ಗಂಭೀರವಾಗಿ ಗಾಯಗೊಂಡ ತಿಮ್ಮಯ್ಯ ಅವರನ್ನು ಮೊದಲಿಗೆ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಂಗಳೂರು ಮತ್ತು ಹಾಸನ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರ ಭಾವ ಸುರೇಶ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Two killed in separate accidents

Share

Leave a comment

Leave a Reply

Your email address will not be published. Required fields are marked *

Don't Miss

ಪ್ರಚೋದಕಾರಿ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷರ ಬಂಧನಕ್ಕೆ ಮನವಿ

ಚಿಕ್ಕಮಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂಘಟನೆ ಬಗ್ಗೆ ಪ್ರಚೋದಕಾರಿ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಕಾನೂನು ಕ್ರಮ ಕೈಗೊಂಡು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡರುಗಳು...

ಕೃತಕಬುದ್ದಿ ಮತ್ತೆ ಮನುಷ್ಯನಿಗೆ ದೊಡ್ಡ ಸವಾಲಾಗಿದೆ

ಚಿಕ್ಕಮಗಳೂರು: ಆಧುನಿಕ ಜೀವನ ಪದ್ಧತಿಯಲ್ಲಿ ಕೃತಕಬುದ್ದಿ ಮತ್ತೆ ಮನುಷ್ಯನಿಗೆ ದೊ ಡ್ಡ ಸವಾಲಾಗಿ ಪರಿಣಾಮಿಸಿದೆ. ಪ್ರಸ್ತುತ ಕಾಲಕ್ಕೆ ಬೇಡವಾದರೂ, ಜನಿಸಿದ ನಂತರ ಅನುಸರಿಸಿಕೊಂಡು ಸೂ ಕ್ತ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ಶ್ರೀ...

Related Articles

ಮಿಥುನ್ ವಿರುದ್ಧ ಸಮಗ್ರ ತನಿಖೆ ಆಗ್ರಹ

ಚಿಕ್ಕಮಗಳೂರು : ಔಷಧ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ಸ್ಥಳೀಯ ಮೆಡಿಕಲ್...

ಜಿಲ್ಲಾ ಆಸ್ಪತ್ರೆ ರಾಷ್ಟ್ರೀಯ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಸಮಿತಿ ಭೇಟಿ

ಚಿಕ್ಕಮಗಳೂರು:  ಕೇಂದ್ರ ಸರ್ಕಾರದ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ವಾಹಕ ಆಶ್ರಿತ ರೋಗಗಳ ನಿರ್ಮೂಲನಾ...

ಮರದ ದಾಸ್ತಾನು ಮಾಡಿದ್ದ ಅಂಗಡಿಗೆ ಬೆಂಕಿ

ಚಿಕ್ಕಮಗಳೂರು: ಮರದ ದಾಸ್ತಾನು ಮಾಡಿದ್ದ ಅಂಗಡಿಯೊಂದರಲ್ಲಿ ಬುಧವಾರ ಮಧ್ಯರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ...

ಚಿಕ್ಕಮಗಳೂರು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆ ಇಲಾಖೆಯು ಚಿಕ್ಕಮಗಳೂರು ಮತ್ತು ಯಶವಂತಪುರ ನಡುವೆ ಸಂಚರಿಸುವ ರೈಲುಗಳ ವೇಳಾಪಟ್ಟಿಯಲ್ಲಿ ಮಹತ್ವದ...