ಚಿಕ್ಕಮಗಳೂರು: ಜಿಲ್ಲೆಯ ಎರಡು ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಯರೇಹಳ್ಳಿ ಗ್ರಾಮದಿಂದ ಧರ್ಮಸ್ದಳಕ್ಕೆ ಪಾದಯಾತ್ರೆ ತೆರಳುತ್ತಿದ್ದಾಗ ಲಕ್ಷ್ಮಿಪುರ ಗ್ರಾಮದ ಬಿಸಲೇಹಳ್ಳಿ ಗೇಟಿನ ನಡೆದು ಹೋಗುತ್ತಿದ್ದವರಿಗೆ ಹಿಂದಿನಿಂದ ಬಂದು ಬೈಕ್ ಅಪ್ಪಳಿಸಿದೆ.
ನಿಯಂತ್ರಣ ತಪ್ಪಿ ಬೈಕ್ ಸಮೇತ ಕೆಳಕ್ಕೆ ಬಿದ್ದ ಚಾಲಕ ಲಕ್ಷ್ಮಿಪುರದ ಮಂಜುನಾಥಗೆ ತೀವ್ರ ಗಾಯವಾಗಿ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು ಅಲ್ಲಿ ಮೃತಪಟ್ಟಿದ್ದಾನೆ.
ಶಶಾಂಕ್ ಬಾಣಾವರದಿಂದ ಕೆಲಸ ಮುಗಿಸಿಕೊಂಡು ವಾಪಾಸ್ ಮನೆಗೆ ಬರುತ್ತಿದ್ದ ವೇಳೆ ಮತಿಘಟ್ಟ-ಮಾಡಾಳು ರಸ್ತೆಯಲ್ಲಿ ಹಠಾತ್ತನೆ ಹಸು ಅಡ್ಡ ಬಂದು ನಿಯಂತ್ರಣ ತಪ್ಪಿ ಬೈಕ್ ಕೆಳಗೆ ಬಿದ್ದಿದೆ.
ಬೈಕ್ ಬಿದ್ದ ಹಿನ್ನೆಲೆ ತೀವ್ರ ಗಾಯವಾಗಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು ಅಲ್ಲಿ ಗುಣಮುಖ ಆದ ಹಿನ್ನೆಲೆಯಲ್ಲಿ ಕಡೂರಿನ ಖಾಸಗಿ ಆಸ್ಪತ್ರೆಗೆ ತಂದು ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶಶಾಂಕ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Two people die in separate accidents
Leave a comment