ಕಡೂರು: ಟಿವಿಎಸ್ ಎಕ್ಸ್ ಹಾಗೂ ಪಿಕಪ್ ವಾಹನದ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ನಾಗಗೊಂಡನಹಳ್ಳಿ ಗೇಟ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಂದ್ರಪ್ಪ (41) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನಾಗಗೊಂಡನಹಳ್ಳಿ ನಿವಾಸಿ ಚಂದ್ರಪ್ಪ ಹಾಗೂ ಅಭಿಷೇಕ್ ಎನ್.ಎಸ್. ಅವರು ತಮ್ಮ ಟಿವಿಎಸ್ ಎಕ್ಸ್ಎಲ್ ಮೊಪೇಡ್ ನಲ್ಲಿ ಜಕ್ಕನಹಳ್ಳಿ ಕ್ರಾಸ್ನಲ್ಲಿದ್ದ ಜಮೀನಿಗೆ ಹೋಗುತ್ತಿದ್ದಾಗ, ಬಿಸಲೆರೆ ಗೇಟ್ ಕಡೆಯಿಂದ ಬಂದ ಬೊಲೆರೋ ಪಿಕಪ್ (KA-19-AC-9641) ವಾಹನದ ಚಾಲಕ ಜಾರ್ಖಂಡ್ ಮೂಲದ ಬಿರೇಂದ್ರ ಎಂಬಾತ ಅತಿವೇಗವಾಗಿ ಬಂದು ಡಿಕ್ಕಿ ಹೊಡೆಸಿದ್ದಾನೆ.
ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಚಂದ್ರಪ್ಪ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಯಗಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Two-wheeler rider dies on the spot in road accident
Leave a comment