ಚಿಕ್ಕಮಗಳೂರು: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಸಮೀಪದ ಹಾಗಲ ಗ್ರಾಮದಲ್ಲಿ ಸಂಭವಿಸಿದೆ.
27 ವರ್ಷದ ರಮೇಶ್ ಹಾಗೂ 36 ವರ್ಷದ ಮಹೇಶ್ ಮೃತ ದುರ್ದೈವಿಗಳು. ಇವರಿಬ್ಬರೂ ಶನಿವಾರ ಸಂಜೆ ಮೀನು ಹಿಡಿಯಲೆಂದು ಕೆರೆಗೆ ತೆರಳಿದ್ದು, ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಇಂದು ಬೆಳಿಗ್ಗೆ ಕೆರೆಯ ಬಳಿ ಶೋಧ ನಡೆಸಿದಾಗ ಅವರು ಕೆರೆಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿತ್ತು.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಮೀನು ಹಿಡಿಯುವ ವೇಳೆ ಕಾಲು ಜಾರಿ ಕೆರೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಕುರಿತು ಅಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ನೀರಿನಲ್ಲಿ ಮುಳುಗಿ ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು,
ನರಸಿಂಹರಾಜಪುರ ತಾಲೂಕಿನ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ತೆರಳಿದ್ದ ನಿತಿನ್ ಎಂಬುವವರು ಸಾವನ್ನಪ್ಪಿದ ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಒಟ್ಟು ಮೂವರು ನೀರು ಪಾಲಾಗಿದ್ದಾರೆ.
Two young men who had gone fishing fell into the water.
Leave a comment