ಚಿಕ್ಕಮಗಳೂರು: ನಗರ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿ ೨೦೧೨ರಲ್ಲಿ ಆರಂಭಗೊಂಡಿದ್ದು ೧೩ ವ?ವಾದರೂ ಪೂರ್ಣಗೊಂಡಿಲ್ಲ. ಹಾಗೆಯೇ ಅಮೃತ್ ಯೋಜನೆಯ ಕಾಮಗಾರಿಗಳು ೨೦೧೫ರಲ್ಲಿ ಆರಂಭಗೊಂಡಿದ್ದು ೧೦ ವ?ವಾದರೂ ಮುಕ್ತಾಯಗೊಂಡಿಲ್ಲ. ಶೀಘ್ರವೇ ಈ ಎರಡು ಕಾಮಗಾರಿಗಳನ್ನು ಪೂರ್ಣಗೊಳಿಸುವುದಾಗಿ ಶಾಸಕ ಎಚ್. ಡಿ.ತಮ್ಮಯ್ಯ ಭರವಸೆ ನೀಡಿದರು.
ನಗರದ ಗಾಂಧಿನಗರ ಆಟೋ ನಿಲ್ದಾಣದ ಬಳಿ ನಗರದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ನೆರವೇರಿಸಿ ಮಾತನಾಡಿದ ಅವರು, ಈ ಎರಡು ಕಾಮಗಾರಿಗಳನ್ನು ಆರಂಭಿಸಿದವರು ಯಾರು? ಯಾವ ಕಾರಣಕ್ಕೆ ಇದುವರೆಗೂ ಕಾಮಗಾರಿಗಳು ಮುಗಿದಿಲ್ಲ ಎಂಬ ಬಗ್ಗೆ ನಾನು ಮಾತನಾಡುವುದಿಲ್ಲ. ಬೇರೆಯವರನ್ನು ದೂರುವ ಬದಲು ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳುತ್ತೇನೆ ಎಂದರು.
ಯುಜಿಡಿ ಕಾಮಗಾರಿ ಹಾಗೂ ಅಮೃತ್ ಯೋಜನೆಯ ಕಾಮಗಾರಿಗಳು ನಡೆಯುತ್ತಿರುವ ಕಾರಣದಿಂದಾಗಿ ನಗರ ವ್ಯಾಪ್ತಿಯ ರಸ್ತೆಗಳು ಹಾಳಾಗಿದ್ದವು. ವಿವಿಧ ಈ ಎರಡು ಯೋಜನೆಗಳ ಕಾಮಗಾರಿಗಳು ಮುಕ್ತಾಯಗೊಳ್ಳುವ ಹಂತಕ್ಕೆ ಬಂದಿವೆ. ಹೀಗಾಗಿ ಶೀಘ್ರವೇ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ನಗರದ ಪ್ರತಿಯೊಂದು ರಸ್ತೆಯನ್ನು ಅಭಿವೃದ್ಧಿಗೊಳಿಸುವ ಸಂಬಂಧ ಕ್ರಮ ಕೈಗೊಳ್ಳಲಾಗಿದೆ. ನಗರದ ರಸ್ತೆಗಳ ಅಭಿವೃದ್ಧಿಗಾಗಿ ಸಿಎಂ ೧೦ ಕೋಟಿ ರೂ. ವಿಶೇಷ ಅನುದಾನ ನೀಡಿದ್ದಾರೆ. ಇದಲ್ಲದೆ ವಿಧಾನಸಭಾ ಕ್ಷೇತ್ರಕ್ಕೆ ನೀಡ ಸರ್ಕಾರದ ವಿಶೇ? ಅನುದಾನದಡಿಯಲ್ಲಿ ನೀಡಲಾಗಿದ್ದ ೫೦ ಕೋಟಿ ರೂ. ಅನುದಾನದಲ್ಲಿ ೧೦ ಕೋಟಿ ರೂ. ನಗರದ ರಸ್ತೆಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತದೆ. ಜೊತೆಗೆ ಲೋಕೋಪಯೋಗಿ ಇಲಾಖೆಯಿಂದ ೨.೫೦ ಕೋಟಿ ರೂ. ಬಿಡುಗಡೆಯಾಗಿದ್ದು, ಈ ಅನುದಾನಗಳಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ನವೆಂಬರ್ ತಿಂಗಳ ಅಂತ್ಯದೊಳಗಾಗಿ ನಗರದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುತ್ತೇವೆ. ಡಿ. ೧ರಿಂದಲೇ ಕಾಮಗಾರಿ ಆರಂಭಿಸುತ್ತೇವೆ. ಮುಂದಿನ ಮಾರ್ಚ್ ತಿಂಗಳು ಮುಗಿಯುವುದರ ಒಳಗಾಗಿ ಎಲ್ಲಾ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ ಪ್ರತಿಯೊಂದು ರಸ್ತೆ ಉದ್ಘಾಟನೆ ಕಾರ್ಯ ನೆರವೇರಿಸುತ್ತೇವೆ ಎಂದರು.
ನಗರ ಸಭೆ ವ್ಯಾಪ್ತಿಯ ಟಿಪ್ಪು ನಗರ ಬಡಾವಣೆ ವ್ಯಾಪ್ತಿಯಲ್ಲಿ ಸುಮಾರು ೭೦ ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಇದಲ್ಲದೆ ನಗರದ ಪ್ರತಿಯೊಂದು ಬಡಾವಣೆಯಲ್ಲಿಯೂ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇವೆ ಎಂದರು.
ಹಿಂದೆ ಕ್ಷೇತ್ರದ ಶಾಸಕರಾದವರು ಸ್ಲಂ ಬೋರ್ಡ್ ನಿಂದ ೮೦೦ ಮನೆಗಳ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ಕೊಡಿಸಿದ್ದರು. ಆದರೆ ಸೂಕ್ತ ಅನುದಾನ ಬಿಡುಗಡೆಯಾಗಿರಲಿಲ್ಲ. ಹೀಗಾಗಿ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಇದರಿಂದ ಅನಿವಾರ್ಯವಾಗಿ ಸ್ಲಂ ನಿವಾಸಿಗಳು ಬಾಡಿಗೆ ಮನೆಯಲ್ಲಿ ವಾಸಿಸುವಂತಾಗಿತ್ತು. ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದೇನೆ. ಶೀಘ್ರವೇ ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಸತಿ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯನ್ನು ಚಿಕ್ಕಮಗಳೂರಿನಲ್ಲಿಯೇ ನಡೆಸಿ ಶೀಘ್ರವೇ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ರಸ್ತೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪಡೆದಿರುವ ಗುತ್ತಿಗೆದಾರರು ನಿಗದಿತ ಅವಧಿಯ ಒಳಗಾಗಿ ಗುಣಮಟ್ಟದ ರಸ್ತೆ ಕಾಮಗಾರಿ ನಡೆಸಿ ಜನರಿಗೆ ಅನುಕೂಲ ಒದಗಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಲಲಿತಾ ರವಿ ನಾಯಕ್, ಸದಸ್ಯರಾದ ರೂಪ ಕುಮಾರ್, ಎ.ಸಿ.ಕುಮಾರ್, ಗೋಪಿ, ಪರಮೇಶ್ ರಾಜ್ ಅರಸ್, ಲಕ್ಷ್ಮಣ್, ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಸಿಡಿಎ ಅಧ್ಯಕ್ಷ ನಯಾಜ್ ಅಹಮದ್, ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಶ್ ಸ್ವಾಮಿ, ಕಾಂಗ್ರೆಸ್ ಮುಖಂಡರಾದ ಲಾಕೇಶ್, ಬೆಟ್ಟಗೆರೆ ಪ್ರವೀಣ್, ಶ್ರೀಕಾಂತ್
UGD-Amrit work to be completed soon in city area
Leave a comment