Home namma chikmagalur chikamagalur ಜಿಲ್ಲಾಸ್ಪತ್ರೆ ನಿರ್ಲಕ್ಷ್ಯತನ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
chikamagalurHomeLatest Newsnamma chikmagalur

ಜಿಲ್ಲಾಸ್ಪತ್ರೆ ನಿರ್ಲಕ್ಷ್ಯತನ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಜಿಲ್ಲಾಸ್ಪತ್ರೆಯಲ್ಲಿ ನಿರ್ಲಕ್ಷ್ಯತನದಿಂದ ಬಡ ರೋಗಿಗಳ ಸಾವಿಗೆ ಕಾರ ಣರಾದ ಸರ್ಜನ್, ಡೀನ್ ಮತ್ತು ವೈದ್ಯಾಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊ ಳ್ಳಬೇಕು ಎಂದು ಆಗ್ರಹಿಸಿ ಭೀಮ್‌ಆರ್ಮಿ, ರಾಜ್ಯ ರೈತ ಹಸಿರುಸೇನೆ, ಕನ್ನಡಸೇನೆ ಹಾಗೂ ವಿವಿಧ ಸಂಘಟ ನೆಗಳ ನೇತೃತ್ವದಲ್ಲಿ ಶುಕ್ರವಾರ ಆಜಾದ್‌ಪಾರ್ಕ್ ವೃತ್ತದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ಭೀಮ್‌ಆರ್ಮಿ ಜಿಲ್ಲಾಧ್ಯಕ್ಷ ಹೊನ್ನೇಶ್ ಹೊಸವರ್ಷದ ದಿನದಂದು ಜಿಲ್ಲಾ ಸ್ಪತ್ರೆಯಲ್ಲಿ ರೋಗಿಗಳು ನರಳಾಡುತ್ತಿದ್ದರೂ ವೈದ್ಯಕೀಯ ಸಿಬ್ಬಂದಿಗಳು ಕುಣಿದುಕುಪ್ಪಳಿಸುವ ವೀಡಿಯೋ ಎಲ್ಲೆಡೆ ವೈರಲ್‌ಆಗಿದೆ. ದಾದಿಯರ ಸಂಭ್ರಮದಲ್ಲಿ ಅಮಾಯಕ ರೋಗಿಗಳು ಸಾವಿಗೀಡಾಗಿ ಅವರ ಕುಟುಂ ಬವು ಬೀದಿಪಾಲಾಗಿದೆ ಎಂದರು.

ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾದ ವೈದ್ಯರು, ಖಾಸಗೀ ಕ್ಲೀನಿಕ್ ತೆರೆದು ಜಿಲ್ಲಾಸ್ಪತ್ರೆಯನ್ನು ಮರೆ ತಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಖಾಸಗೀ ಕ್ಲೀನಿಕ್‌ನಲ್ಲೇ ಚಿಕಿತ್ಸೆ ನೀಡುತ್ತೇವೆ ಎಂದು ಸರ್ಕಾ ರಿ ವೈದ್ಯರು ತಮ್ಮ ವೈಯಕ್ತಿಕ ಲಾಭವನ್ನು ಹೆಚ್ಚಿಸಿಕೊಂಡು, ಸರ್ಕಾರಿ ಕೆಲಸವನ್ನು ಸರಿಯಾಗಿ ನಿರ್ವಹಿಸು ತ್ತಿಲ್ಲ ಎಂದು ದೂರಿದರು.

ಜಿಲ್ಲಾಸ್ಪತ್ರೆ ಸುತ್ತಮುತ್ತ, ರೋಗಿಗಳ ಕೊಠಡಿ ಹಾಗೂ ಮೆಡಿಕಲ್ ಕಾಲೇಜು ಸಮೀಪ ಸ್ವಚ್ಚತೆ ಕಾಪಾ ಡುತ್ತಿಲ್ಲ. ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮೆಡಿಕಾಲ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ಬಳಿಕ, ಚಳಿಗಾಲದ ಅಧಿವೇಶನದಲ್ಲಿ ಧ್ವನಿಗೂಡಿಸಿದರೂ ಇಂದಿಗೂ ರಾಜ್ಯಸರ್ಕಾರ ಯಾವುದೇ ಕ್ರಮ ಜರು ಗಿಸದಿರುವುದು ದುರ್ದೈವ ಎಂದು ಹೇಳಿದರು.

ರಾಜ್ಯ ರೈತ ಹಸಿರುಸೇನೆ ಅಧ್ಯಕ್ಷ ಫಯಾಜ್ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ಸಾವಪ್ಪಿನದ ಬಡ ರೋಗಿಗ ಗಳ ಕುಟುಂಬಕ್ಕೆ ಸರ್ಕಾರ ತಲಾ ೫೦ ಲಕ್ಷ ರೂ. ಪರಿಹಾರ ಘೋಷಿಸಬೇಕು. ಬಡವರ ರೋದನೆಗೆ ಸರ್ಕಾ ರ ಸ್ಪಂದಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಮೀಪ ಎಲ್ಲಾ ಸಂಘಟನೆಗಳು ಒಟ್ಟಾಗಿ ಬೃಹತ್ ಪ್ರತಿಭಟನೆ ನಡೆ ಸಲಾಗುವುದು ಎಂದು ಎಚ್ಚರಿಸಿದರು.

ಕನ್ನಡಸೇನೆ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್ ಮಾತನಾಡಿ ಬಡ ರೋಗಿಗಳು ಕಾಯಿಲೆಗಳಿಂದ ನರಳಾಡಿ ಸಾವಪ್ಪಿದ್ದು ಇದಕ್ಕೆ ಮೂಲ ಕಾರಣರಾದ ಜಿಲ್ಲಾಸ್ಪತ್ರೆ ಸರ್ಜನ್, ಮೆಡಿಕಲ್ ಕಾಲೇಜು ಡೀನ್ ಮತ್ತು ವೈದ್ಯರುಗಳ ವಿರುದ್ಧ ಕ್ರಮ ವಹಿಸಬೇಕು. ನೊಂದವರ ಪಾಲಿಗೆ ಸೂಕ್ತ ಪರಿಹಾರ ಒದಗಿಸುವ ಮೂಲಕ ನ್ಯಾಯ ಒದಗಿಸಿಕೊಡಬೇಕು ಎಂದರು.

ಪ್ರತಿಭಟನೆಯಲ್ಲಿ ಭೀಮ್ ಆರ್ಮಿ ತಾಲ್ಲೂಕು ರಮೇಶ್, ಪ್ರಧಾನ ಕಾರ್ಯದರ್ಶಿ ಲೋಕೇಶ್, ಟಿಪ್ಪು ಸುಲ್ತಾನ್ ವೇದಿಕೆ ಅಧ್ಯಕ್ಷ ಜಂಶೀದ್‌ಖಾನ್, ಕನ್ನಡಸೇನೆ ನಗರಾಧ್ಯಕ್ಷ ಸತೀಶ್, ಹಸಿರುಸೇನೆ ಹಾಸನ ಜಿಲ್ಲಾ ಧ್ಯಕ್ಷೆ ಶರತ್, ಮುಖಂಡರುಗಳಾದ ಸುಧೀರ್, ಅಕ್ರಮ್, ಸೈಯದ್ ಅಬ್ದುಲ್, ರಂಗಸ್ವಾಮಿ ಉಪಸ್ಥಿತರಿದ್ದರು.

Various organizations protest against negligence at the district hospital

Share

Leave a comment

Leave a Reply

Your email address will not be published. Required fields are marked *

Don't Miss

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ...

ಕಾಫಿ ಕಳ್ಳತನ : ಆರೋಪಿಗಳ ಸೆರೆ- 2 ಕಾರು ವಶ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸಮೀಪ ರಂಗಸ್ವಾಮಿ ಅವರ ಕಾಫಿ ತೋಟದಲ್ಲಿ ಕಾಫಿ ಕಳ್ಳತನ ಮಾಡಿದ್ದ ೬ ಮಂದಿ ಆರೋಪಿಗಳನ್ನು ಗೋಣಿಬೀಡು ಪೊಲೀಸರು ಬಂಧಿಸಿ, ಸುಮಾರು ೩.೫೦ ಲಕ್ಷ ರೂ ಮೌಲ್ಯದ ಕಾಫಿ...

Related Articles

ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು,...

ಜಿಎಸ್‌ಬಿ ಯಿಂದ ಸಂಕ್ರಾಂತಿ ಸಂಭ್ರಮ

ಚಿಕ್ಕಮಗಳೂರು: ಸಂಕ್ರಾಂತಿ ಹಿನ್ನೆಲೆಯಲ್ಲಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದಿಂದ ನಡೆಯುವ ಕೇಳ್ ಮೇಳ್ ಸಾಂಸ್ಕೃತಿಕ ಕಾರ್ಯಕ್ರಮ ನಗರದಲ್ಲಿ...

ಗಾಳಿಪಟ ಹಾರಾಟಕ್ಕೆ ಮನಸೋತ ಜನ

ಚಿಕ್ಕಮಗಳೂರು: ಆಕಾಶದಲ್ಲಿ ಹಾರುತ್ತಿದ್ದ ಹುಲಿ, ಜಿಂಕೆ, ಆನೆ, ಸಿಂಹ, ಚಿಟ್ಟೆಗಳು, ಪಕ್ಷಿಗಳು, ಗಿಡಮರಗಳು ಸೇರಿದಂತೆ ವಿವಿಧ...