Home namma chikmagalur chikamagalur ‘ವಿಬಿ-ಜಿ ರಾಮ್ ಜಿ’ ಗ್ರಾ.ಪಂ. ವಿಕೇಂದ್ರಿಕರಣಕ್ಕೆ ಮಾರಕ
chikamagalurHomeLatest Newsnamma chikmagalur

‘ವಿಬಿ-ಜಿ ರಾಮ್ ಜಿ’ ಗ್ರಾ.ಪಂ. ವಿಕೇಂದ್ರಿಕರಣಕ್ಕೆ ಮಾರಕ

Share
Oplus_16908288
Share

ಚಿಕ್ಕಮಗಳೂರು: ಗ್ರಾಮೀಣ ಜನರ ಬದುಕು ಹಸನಾಗಬೇಕೆಂಬ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಜಾರಿಗೆ ತಂದಿದ್ದ ಮನ್ ರೇಗಾ ಯೋಜನೆಗೆ ಕೆಲವು ತಿದ್ದುಪಡಿ ತರುವ ಮೂಲಕ ‘ವಿಬಿ ಜಿ ರಾಮ್ ಜಿ’ ಹೆಸರು ಬದಲಾಯಿಸಿ ಕೇಂದ್ರದ ಬಿಜೆಪಿ ಸರ್ಕಾರ ಕೂಲಿ ಕಾರ್ಮಿಕರು, ರೈತರಿಗೆ ಅನ್ಯಾಯ ಮಾಡಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹೊಂದಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌ ದೂರಿದ್ದಾರೆ.

“ಗ್ರಾಮೀಣ ಜನರ ಜೀವನ ಮಟ್ಟ ಸುಧಾರಣೆಯಾಗಬೇಕು. ಸ್ಥಳೀಯವಾಗಿ ಎಲ್ಲಾ ಕಾಲದಲ್ಲೂ ಅವರಿಗೆ ಕೂಲಿ ಕೆಲಸ ಸಿಗಬೇಕು. ಅವರ ಶ್ರಮವನ್ನು ಸ್ಥಳೀಯ ಅಭಿವೃದ್ಧಿ ಕೆಲಸಕ್ಕೆ ಬಳಕೆ ಮಾಡಬೇಕೆಂಬ ಉದ್ದೇಶದಿಂದ ಗ್ರಾಮ ಪಂಚಾಯ್ತಿಗಳ ಮೂಲಕ ಮನ್ ರೇಗಾ ಯೋಜನೆಯನ್ನು 2005 ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿತು ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.

“ಎರಡು ದಶಕಗಳ ಬಳಿಕ ಬಿಜೆಪಿ ಈ ಯೋಜನೆಯ ಹೆಸರು ಬದಲಾಯಿಸಿ ಕಾರ್ಯಕ್ರಮದ ಸ್ವರೂಪವನ್ನು ಬದಲಾವಣೆ ಮಾಡುವ ಮೂಲಕ ಗ್ರಾಮ ಸ್ವರಾಜ್ಯದ ಪರಿಕಲ್ಪನೆಗೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಗ್ರಾಮ ಪಂಚಾಯ್ತಿಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಅಧಿಕಾರವನ್ನು ಕೇಂದ್ರಿಕರಣ ಮಾಡಲು ಹೊರಟಿದೆ,” ಎಂದು ಸಚಿವರು ಆರೋಪಿಸಿದರು.

“ಮನ್ ರೇಗಾ ಯೋಜನೆ ಈ ದೇಶದ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಅನ್ವಯವಾಗಲಿದೆ. ಉದ್ಯೋಗವು ಸಂವಿಧಾನಿಕ ಹಕ್ಕು, ನಿರಂತರವಾಗಿ ಲಭ್ಯವಿರಬೇಕು. ಆದರೆ, ಕೇಂದ್ರ ಸರ್ಕಾರ ವಿಬಿ ‌ ಜಿ ರಾಮ್ ಜಿ ಮೂಲಕ ತನ್ನ ಅಣತಿಯಂತೆ ದೇಶವನ್ನು ನಡೆಸಿಕೊಳ್ಳಲಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಸ್ಥಳೀಯ ಅಗತ್ಯಕ್ಕೆ ಅನುಗುಣವಾಗಿ ಗ್ರಾಮಸಭೆ ಮತ್ತು ಗ್ರಾಮ ಪಂಚಾಯ್ತಿಗಳಿಗೆ ಯೋಜನೆ ರೂಪಿಸುವ ಸಂಪೂರ್ಣ ಸ್ವಾತಂತ್ರ್ಯ ಇರುತ್ತದೆ. ಆದರೆ, ಕೇಂದ್ರ ಸರ್ಕಾರ ರಾಷ್ಟ್ರಾದ್ಯಂತ ರೂಪಿಸಿರುವ ಏಕ ರೂಪ ಮಾದರಿಯನ್ವಯ ಮಾತ್ರವೇ ಗ್ರಾಮ ಪಂಚಾಯ್ತಿಗಳು ಕೆಲಸಗಳನ್ನು ಮಾಡಬೇಕು. ಆದರೆ, ವಿಬಿ ‌ ಜಿ ರಾಮ್ ಜಿಯಿಂದಾಗಿ ಗ್ರಾಮ ಸಭೆ ಹಾಗೂ ಪಂಚಾಯ್ತಿಗಳಿಗೆ ಅವಶ್ಯಕವಿರುವ ಕೆಲಸಗಳನ್ನು ಕೈಗೆತ್ತಿಕೊಳ್ಳುವ ಅಧಿಕಾರ ಮೊಟಕುಗೊಳ್ಳಲಿದೆ,” ಎಂದು ಆರೋಪಿಸಿದರು.

“ವರ್ಷದ 365 ದಿನ ಯಾವ ಸಮಯದಲ್ಲಾದರೂ ಕೆಲಸ ಕೇಳಬಹುದು. ಯಾರ ಮುಲಾಜಿಗೂ ಬೀಳದಂತೆ ಬಡ ಜನರು ವರ್ಷ ಪೂರ್ತಿ ಬೇಡಿಕೆಯ ಅಧಾರದ ಮೇಲೆ ಉದ್ಯೋಗ ಮಾಡುವ ವ್ಯವಸ್ಥೆ ಇತ್ತು. ವಿಬಿ ಜಿ ಗ್ರಾಮ್‌ ಜಿ ಪ್ರಕಾರ ಪೂರ್ವ ನಿರ್ಧಾರಿತ 60 ದಿನ ಕೆಲಸಕ್ಕೆ ನಿರ್ಬಂಧ ಹೇರಲಾಗಿದೆ. ಈ ಸಂದರ್ಭದಲ್ಲಿ ಕಾರ್ಮಿಕರು ಕೆಲಸದ ಬೇಡಿಕೆ ಸಲ್ಲಿಸಲು ಅವಕಾಶ ಇಲ್ಲ. ಗುತ್ತಿಗೆದಾರರು ಪರೋಕ್ಷವಾಗಿ ಒಳ ಬರಲು ಅವಕಾಶ ಇದೆ. ಜಟಿಲವಾದ ತಾಂತ್ರಿಕ ವ್ಯವಸ್ಥೆಗಳ ಹೇರಿಕೆಯ ಮೂಲಕ ಯೋಜನೆಯಡಿ ಉದ್ಯೋಗದ ಅವಕಾಶ ವಂಚಿಸುವ ಯತ್ನ ಮಾಡಲಾಗಿದೆ,” ಎಂದು ಹೇಳಿದರು.

“ಕೆಲಸ ಕೇಳುವ ಪ್ರತಿಯೊಬ್ಬರಿಗೂ ಕೆಲಸ ಮತ್ತು ನ್ಯಾಯಬದ್ಧ ಕೂಲಿ ಸಿಗಬೇಕು ಎಂಬುದು ಕಾನೂನಾತ್ಮಕ ಹಕ್ಕು. ಜನರ ಬೇಡಿಕೆಯ ಆಧಾರದಲ್ಲಿ ಅನುದಾನದ ಪ್ರಮಾಣ ತೀರ್ಮಾನ ಹಾಗೂ ವೆಚ್ಚ ನಿರ್ಧಾರವಾಗುತ್ತಿತ್ತು. ಆದರೆ, ಹೊಸ ಕಾಯ್ದೆಯಿಂದ ಕೇಂದ್ರ ಸರ್ಕಾರ ತಾನು ಪೂರ್ವ ನಿಗದಿಪಡಿಸಿದ ಯೋಜನೆ ಹಣ ವೆಚ್ಚವಾದ ತಕ್ಷಣ ಕೆಲಸ ನಿಲ್ಲುತ್ತದೆ. ಜನರ ಕೆಲಸದ ಬೇಡಿಕೆಗೆ ಯಾವುದೇ ಬೆಲೆ ಇರುವುದಿಲ್ಲ,” ಎಂದರು.

“ಮನ್ ರೇಗಾ ಯೋಜನೆಯನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಹೋರಾಟ ನಡೆಸಲು ಕಾಂಗ್ರೆಸ್‌ ಪಕ್ಷ ಉದ್ದೇಶಿಸಿದ್ದು, ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದು,” ಎಂದು ಹೇಳಿದರು.

ಸುದ್ಧಿಗೋಷ್ಠಿಯಲ್ಲಿ ಶಾಸಕರು ಹಾಗೂ ಕ್ರೆಡಲ್ ಅಧ್ಯಕ್ಷ ಟಿ.ಡಿ. ರಾಜೇಗೌಡ, ಶಾಸಕರಾದ ಎಚ್‌.ಡಿ. ತಮ್ಮಯ್ಯ, ನಯನಾ ಮೋಟಮ್ಮ, ಆನಂದ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ. ಅಂಶುಮಂತ್‌, ವಿಧಾನಪರಿಷತ್‌ ಮಾಜಿ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ, ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಪಕ್ಷದ ಜಿಲ್ಲಾ ವಕ್ತಾರ ರೂಬಿನ್‌ ಮೋಸಸ್‌ ಉಪಸ್ಥಿತರಿದ್ದರು.

‘VB-G Ram Ji’ Gram Panchayat is fatal to decentralization

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...