Home namma chikmagalur chikamagalur ವಿಬಿ-ಜಿ ರಾಮ್‌ಜೀ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಕುತಂತ್ರ
chikamagalurHomeLatest Newsnamma chikmagalur

ವಿಬಿ-ಜಿ ರಾಮ್‌ಜೀ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಕುತಂತ್ರ

Share
Share

ಚಿಕ್ಕಮಗಳೂರು:  ಕೇಂದ್ರ ಸರ್ಕಾರದ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಪಕ್ಷ ಹ ಲವಾರು ಕುತಂತ್ರ ನಡೆಸಿ ಅಪಪ್ರಚಾರ ಮಾಡುತ್ತಿದೆ. ಕೇಂದ್ರ ಸರ್ಕಾರದ ಸತ್ಯ ದರ್ಶನ ಮಾಡಿಸಲು ರಾಜ್ಯಾ ದ್ಯಂತ ಜನಜಾಗೃತಿ ನಡೆಸಿ ಅರಿವು ಮೂಡಿಸಲಾಗುತ್ತಿದೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ಧ ವಿಬಿ-ಜಿ ರಾಮ್‌ಜೀ ಕಾರ್ಯಾ ಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ ಗಾಂಧೀಜಿ ಅಪ್ಪಟ ಶ್ರೀರಾಮ ಭಕ್ತರಾಗಿದ್ದರು. ಅವರು ಜೀವಂ ತವಾಗಿದ್ದರೆ ಹೊಸ ಕಾಯ್ದೆಗೆ ವಿಬಿ-ಜಿರಾಮ್ ಜಿ ಹೆಸರಿಡಲು ಬಹಳಷ್ಟು ಹೆಮ್ಮೆಪಡುತ್ತಿದ್ದರು ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ಕಾಯ್ದೆಗೆ ೧೦೦ ದಿನಗಳ ಕೆಲಸವಿತ್ತು. ಹೊಸ ಕಾಯ್ದೆಯಲ್ಲಿ ೧೨೦ ದಿನಗಳ ಕೆಲ ಸವಿದೆ. ಹಿಂದೆ ಕಾಯ್ದೆಯಲ್ಲಿ ಕೋಟ್ಯಾಂತರ ರೂ.ಗಳ ಭಾರೀ ಭ್ರಷ್ಟಚಾರ ನಡೆಯುತ್ತಿತ್ತು. ಇದನ್ನು ತಡೆಗಟ್ಟ ಲು ಮೋದಿ ಸರ್ಕಾರ ಯಾವುದೇ ಬಲಾಡ್ಯ ನಾಯಕರ ಹೆಸರಿಡದೇ ರಾಮ್‌ಜಿ ಹೆಸರಿನಲ್ಲಿ ನಾಮಕರಣ ಗೊಳಿಸಲು ಮುಂದಾಗಿದ್ದಾರೆ ಎಂದರು.

ಗಾಂಧೀಜಿಯವರ ಬಗ್ಗೆ ಬಿಜೆಪಿಯಲ್ಲಿ ಬಹಳಷ್ಟು ಅಭಿಮಾನವಿದೆ. ದೇಶದ ಬಹುತೇಕ ಕಡೆಗಳಲ್ಲಿ ಗಾ ಂಧಿಜೀಯವರ ಹೆಸರಿನ ಯಾವುದೇ ಸಂಸ್ಥೆಗಳನ್ನು ಬದಲಿಸುತ್ತಿಲ್ಲ. ಹೊಸ ಸರ್ಕಾರ ರಚನೆಗೊಂಡಾಗ ಆಳ್ವಿ ಕೆ ನಡೆಸುವ ಸರ್ಕಾರ ಕಾಯ್ದೆಗೆ ಹೊಸ ಹೆಸರಿಡುವುದು ಸಾಮಾನ್ಯ. ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ ಅನೇಕ ಕಾಯ್ದೆಯನ್ನು ಬದಲಿಸಿ ಮರುಹೆಸರಿಟ್ಟಿದೆ ಎಂದು ಹೇಳಿದರು.

ಮನರೇಗಾ ಹೆಸರಿನಲ್ಲಿ ಹಿಂದೆ ಪಶ್ಚಿಮ ಬಂಗಾಳ ಮತ್ತು ಕರ್ನಾಟಕ ಸೇರಿದಂತೆ ಹಲವೆಡೆ ಸಾವಿರಾರು ಕೋಟಿ ರೂ. ಹಗರಣ ನಡೆದಿದೆ ಎಂಬುದು ಆಡಿಟ್ ವರದಿಯಲ್ಲಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜನತೆಗೆ ದ್ರೋಹವಾಗದಂತೆ ಕೆಲವು ಲೋಪದೋಷಗಳನ್ನು ಸರಿಪಡಿಸಿ, ಭ್ರಷ್ಟಚಾರಕ್ಕೆ ಅವಕಾಶ ಕಲ್ಪಿಸಬಾರದೆಂಬ ದೃ ಷ್ಟಿಯಿಂಧ ಹೊಸ ಹೆಸರಿನಲ್ಲಿ ಅನುಮೋದನೆಗೆ ಮುಂದಾಗಿದೆ ಎಂದರು.

ವಿಬಿ-ಜಿರಾಮ್‌ಜಿ ವಿರುದ್ಧ ರಾಜ್ಯದ ಕಾಂಗ್ರೆಸ್ ಸರ್ಕಾರಗಳು ವಿಚಲೀತರಾಗಿದ್ದಾರೆ. ಕನಿಷ್ಟ ಮೆದುಳಿನ ಶಕ್ತಿಯಿಲ್ಲದಂತೆ ವರ್ತಿಸುತ್ತಿದ್ದಾರೆ. ಸಾರ್ವತ್ರಿಕವಾಗಿ ಅರ್ಥ ಮೂಡಿಸಲು ಭಾಜಪ ಕಾರ್ಯಕರ್ತರು ಒಟ್ಟಾಗಿ ಬೂತ್, ಮಂಡಲ ಹಾಗೂ ವಾರ್ಡ್‌ಗಳಲ್ಲಿ ಕಾಲ್ನಡಿಗೆ ಜಾಥಾ ಅಥವಾ ಸಭೆಗಳ ಮೂಲಕ ಕೇಂದ್ರದ ಹೊಸ ಕಾಯ್ದೆಯ ಸತ್ಯಾಂಶ ಮನವರಿಕೆ ಮಾಡಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ನೂರಾರು ಗ್ರಾ.ಪಂ.ಗಳಿಗೆ ೧೦ ಲಕ್ಷದಂತೆ ಅನುದಾನ ಮೀಸಲಿಟ್ಟಿರುವ ರಾಜ್ಯ ಸರ್ಕಾರ. ಪಂ ಚಾಯಿತಿ ಉಪಯೋಗಿಸಿಕೊಳ್ಳದಂತೆ ಮಾಡುತ್ತಿದೆ. ಬಲಗೈನಲ್ಲಿ ಅನುದಾನ ಬಿಡುಗಡೆಗೊಳಿಸಿ, ಎಡಕೈಯ ನಲ್ಲಿ ತಾನೇ ಕಸಿದುಕೊಳ್ಳುವ ಕೆಲಸ ಮಾಡುವ ಮೂಲಕ ಗ್ರಾ.ಪಂ.ಗೆ ದ್ರೋಹವೆಸಗುತ್ತಿದೆ ಎಂದರು.

ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಹೆಚ್.ಸಿ.ಕಲ್ಮರುಡಪ್ಪ ಮಾತನಾಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿರಾಮ್‌ಜಿ ಯೋಜನೆ ಬಗ್ಗೆ ಜಿಲ್ಲೆಯ ಪ್ರತಿ ಮಂಡಳಗಳಲ್ಲಿ ಸಭೆ ನಡೆಸಿ ಸತ್ಯ ಸಂಗತಿಗ ಳನ್ನು ಜನಸಾಮಾನ್ಯರಿಗೆ ತಿಳಿಸಬೇಕು ಎಂದು ಸಲಹೆ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾಂಗ್ರೆಸ್ ಅಪಪ್ರಚಾರ ವಿ ರುದ್ಧ ಜಿಲ್ಲಾ ಪದಾಧಿಕಾರಿಗಳು, ನಗರ ಅಧ್ಯಕ್ಷರು, ಗ್ರಾಮಾಂತರ ಮಂಡಲ ಮತ್ತು ಬೂತ್ ಅಧ್ಯಕ್ಷರು ಒಟ್ಟಾ ಗಿ ವಿಬಿ-ಜಿರಾಮ್‌ಜಿ ಬಗ್ಗೆ ಕಾಂಗ್ರೆಸ್ ಹಬ್ಬಿಸುತ್ತಿರುವ ಸುಳ್ಳು ವದಂತಿ ತಕ್ಕ ಉತ್ತರ ನೀಡಲು ಸಭೆ ನಡೆಸಿ ಜನರಿಗೆ ಮನವರಿಕೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ|| ನರೇಂದ್ರ, ಪುಣ್ಯಪಾಲ್, ಬೆಳವಾಡಿ ರವೀಂದ್ರ ಹಾಗೂ ಪಕ್ಷದ ವಿವಿಧ ಮುಖಂಡರುಗಳು ಉಪಸ್ಥಿತರಿದ್ದರು.

VB-G Ramji: Congress’s ploy to sabotage new law

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...