Home namma chikmagalur ಬಳಲಿಕ್ಕಮ್ಮ – ಮಲ್ಲಿಗೆಮ್ಮನವರ ಜಾತ್ರಾ ಮಹೋತ್ಸವಕ್ಕೆ ಚಾಲನೆ
namma chikmagalurchikamagalurHomeLatest News

ಬಳಲಿಕ್ಕಮ್ಮ – ಮಲ್ಲಿಗೆಮ್ಮನವರ ಜಾತ್ರಾ ಮಹೋತ್ಸವಕ್ಕೆ ಚಾಲನೆ

Share
Share

ಚಿಕ್ಕಮಗಳೂರು: ದೇವರ ಬಗ್ಗೆ ನಂಬಿಕೆ, ಆಧ್ಯಾತ್ಮದ ಚಿಂತನೆಯಿಂದಾಗಿ ಭಾರತ ದೇಶ ಮತ್ತು ಕನ್ನಡ ನಾಡು ಶಾಂತಿಯಿಂದ ಇವೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅಭಿಪ್ರಾಯಿಸಿದರು.

ಅವರು ಇಂದು ಹಿರೇಗೌಜ ಗ್ರಾಮದಲ್ಲಿ ೧೦ ದಿನಗಳ ಕಾಲ ನಡೆಯುವ ಹಗರಣದ ಹಬ್ಬ ಹಾಗೂ ಬಳಲಿಕ್ಕಮ್ಮ ಮತ್ತು ಮಲ್ಲಿಗೆಮ್ಮನವರ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ ಆಧ್ಯಾತ್ಮದ ನಂಬಿಕೆಯಿಂದ ಧಾರ್ಮಿಕತೆಯಲ್ಲಿ ಧರ್ಮ, ಸಂಸ್ಕಾರ, ಸಂಸ್ಕೃತಿ ಇವುಗಳಿಂದಾಗಿ ಪ್ರಪಂಚದಲ್ಲೇ ಭಾರತ ಮುಂಚೂಣಿಯಲ್ಲಿದೆ. ಜಾತ್ಯಾತೀತ ರಾಷ್ಟ್ರದಲ್ಲಿ ಹಲವಾರು ಧರ್ಮಗಳಿದ್ದು, ಧರ್ಮದಲ್ಲಿ ಹಲವಾರು ಉಪಜಾತಿಗಳಿವೆ. ಅದನ್ನೆಲ್ಲ ಮೆಟ್ಟಿನಿಂತು ಆಧ್ಯಾತ್ಮಿಕವಾಗಿ ದೇಶವಾಸಿಗಳು ಗಟ್ಟಿಯಾದ ನಿಲುವು ತಾಳಿರುವುದು ಹೆಮ್ಮೆಯ ಸಂಗತಿ ಎಂದರು.

ಎಲ್ಲಾ ನಾಗರೀಕರು ಜನ್ಮ ನೀಡಿದ ಭಾರತಾಂಭೆಗೆ ಜೈ ಎನ್ನುತ್ತೇವೆ. ನೀರಿಗೆ ಗಂಗೆ, ದೇಶಕ್ಕೆ ಭಾರತ ಮಾತಾ, ರಾಜ್ಯದಲ್ಲಿ ಜೈ ಭುವನೇಶ್ವರಿ ದೇವಿ ಎನ್ನುತ್ತೇವೆ. ಈ ರೀತಿ ಧರ್ಮದ ಲೇಪನ ನೀಡುವುದೇ ಭಾರತದ ಸಂಸ್ಕೃತಿ ಎಂದು ಹೇಳಿದರು.

ಇದು ಹಗರಣದ ಹಬ್ಬ. ೭ ಹಳ್ಳಿಗಳು ಸೇರಿ ಮಾಡುವ ಸಂಭ್ರಮದ ಹಬ್ಬ ಅಲ್ಲ. ಇದೊಂದು ಸೂತಕದ ಹಬ್ಬ. ಊರಿಗಾಗಿ, ನಾಡಿಗಾಗಿ ಮಲಿಗೆಮ್ಮನ ಮಕ್ಕಳಾದ ಹುಲಿಬೀರಯ್ಯ ಮತ್ತು ಕಲಿಬೀರಯ್ಯ ಎಂಬ ಇಬ್ಬರು ಯುವಕರು ಬಲಿದಾನ ಮಾಡಿದ ಕಾರಣಕ್ಕೆ ಹಬ್ಬ ಆಚರಣೆ ಮಾಡಲಾಗುತ್ತಿದೆ. ೭ ಹಳ್ಳಿಗಳಾದ ಹಿರೇಗೌಜ, ಚಿಕ್ಕಗೌಜ, ಸಾದರಹಳ್ಳಿ, ಕುರಿಚಿಕ್ಕನಹಳ್ಳಿ, ಕರಿಸಿದ್ದನಹಳ್ಳಿ, ಕೆಂಗೇನಹಳ್ಳಿ, ಕಾರೇಹಳ್ಳಿ ಈ ಗ್ರಾಮಸ್ಥರು ಒಂದು ವಾರ ಕೃಷಿ ಚಟುವಟಿಕೆಗಳಿಗೆ ವಿರಾಮ ನೀಡಿ ಈ ಹಬ್ಬದಲ್ಲಿ ಭಾಗಿಯಾಗುತ್ತಾರೆ. ಜೊತೆಗೆ ಈ ಹಬ್ಬ ಶಿಸ್ತನ್ನು ಪಾಲಿಸುವ ಮೂಲಕ ವಿವಿಧ ಹಬ್ಬದ ಖಾದ್ಯಗಳಿಗೆ ನಿಷೇಧವಿರುತ್ತದೆ ಎಂದರು.

ಹಿರಿಯರ ಜೊತೆ ಹಬ್ಬದ ಆಚಾರ-ವಿಚಾರಗಳು ಧರ್ಮ ಮತ್ತು ಆಧ್ಯಾತ್ಮದ ಕುರಿತು ಯುವಜನರಲ್ಲಿ ಅರಿವು ಮೂಡಿಸಿದಾಗ ಮಾತ್ರ ಧಾರ್ಮಿಕತೆ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಶ್ರದ್ಧಾಭಕ್ತಿಯಿಂದ ಹಬ್ಬದ ಆಚರಣೆಗಳು ನಡೆಯಬೇಕೆಂದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಗತಕಾಲದ ವೈಭವದ ನೆನಪು ಮಾಡಿಕೊಂಡು ಗ್ರಾಮಸ್ಥರಲ್ಲಿ ಒಗ್ಗಟ್ಟು ಮೂಡಿಸಿ ಸಾಂಸ್ಕೃತಿಕ ಶ್ರೀಮಂತಿಕೆ ಇರುವುದರಿಂದ ಭಾರತದಲ್ಲಿ ಹಬ್ಬಗಳು ಇರುವುದು ಜಗತ್ತಿನೆಲ್ಲೆಡೆ ಎಲ್ಲೂ ಕಾಣಲು ಸಾಧ್ಯವಿಲ್ಲ. ಸಮೃದ್ಧಿ ಇದ್ದಲ್ಲಿ ಸಂಸ್ಕೃತಿ ಬೆಳೆಯುತ್ತದೆ ಎಂದರು.

ಬಲಿದಾನ ಮಾಡಿದವರ ನೆನಪಿನಲ್ಲಿ ಈ ಹಗರಣದ ಹಬ್ಬ ಆಚರಣೆ ಮಾಡುವುದನ್ನು ಪೂರ್ವಿಕರು ಮಾಡಿದ್ದಾರೆ. ದೇವನೊಬ್ಬ ನಾಮ ಹಲವು, ದಯವೇ ಧರ್ಮದ ಮೂಲವಯ್ಯ, ಸಕಲ ಜೀವಾತ್ಮಗಳಿಗೂ ಲೇಸನ್ನೇ ಬಯಸುವ ಎಂಬ ಅರ್ಥದಲ್ಲಿ ಪಂಚಭೂತಗಳನ್ನು ಪೂಜಿಸಲಾಗುತ್ತಿದೆ ಎಂದರು.

ಗ್ರಾ.ಪಂ ಸದಸ್ಯ ಶಿವಕುಮಾರ್ ಮಾತನಾಡಿ, ವಿಜಯನಗರ ಸಾಮ್ರಾಜ್ಯದ ಆಳ್ವಿಕೆಯ ಕಾಲದಲ್ಲಿ ಸಾಮಂತ ದೊರೆಯ ಆಳ್ವಿಕೆಯಲ್ಲಿ ಸಖರಾಯಪಟ್ಟಣಕ್ಕೆ ಬಂದ ಬಳಿಲಿಕ್ಕವ್ವ ಮತ್ತು ಮಲ್ಲಿಗೆಮ್ಮ ಇವರು ಅಕ್ಕ-ತಂಗಿಯರಾಗಿದ್ದು ಇವರ ಮಕ್ಕಳಾದ ಹುಲಿಬೀರಯ್ಯ, ಕಲಿಬೀರಯ್ಯ ಸೀಗೆ ನಾಡಿನಿಂದ ಹೊಂಬಳ್ಳಿ ಕರಿ ಹರಿದು ತರುವ ಸಂದರ್ಭದಲ್ಲಿ ಬಲಿಯಾಗುತ್ತಾರೆ. ಅದರ ನೆನಪಿನಲ್ಲೇ ಹಗರಣದ ಹಬ್ಬ ಆಚರಿಸುತ್ತಾರೆಂದು ವಿವರಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಗ್ರಾ.ಪಂ ಅಧ್ಯಕ್ಷೆ ಮಂಜುಳ, ಉಪಾಧ್ಯಕ್ಷೆ ಶಶಿಕಲಾ, ಹಬ್ಬದ ಆಚರಣೆ ಸಮಿತಿ ಅಧ್ಯಕ್ಷ ಹೆಚ್.ಎಸ್. ಗಾಂಧಿ, ಯೋಗೀಶ್‌ಗೌಡ, ಸಿ.ಸಿ. ಬಸವೇಗೌಡ, ಚಂದ್ರೇಗೌಡ, ದೇವೇಗೌಡ, ಓಂಕಾರೇಗೌಡ, ರಾಮೇಗೌಡ, ವಿಜಯ್‌ಕುಮಾರ್, ಶೋಭಾರಾಣಿ, ಗೀತಾ, ಹಾಲಪ್ಪ, ಸುರೇಶ್, ಬೀರೇಗೌಡ, ವಿಶಾಲಾಕ್ಷಿ, ಗುರುಮೂರ್ತಿ, ಮಮತ ಉಪಸ್ಥಿತರಿದ್ದರು.

Veeraikkamma – Malligamma’s fair festival kicks off

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...