Home ನಾಯಿ-ಹಾವು ನಡುವಿನ ಕಾಳಗದ ವೀಡಿಯೋ ವೈರಲ್
HomeLatest Newsnamma chikmagalurTarikere

ನಾಯಿ-ಹಾವು ನಡುವಿನ ಕಾಳಗದ ವೀಡಿಯೋ ವೈರಲ್

Share
Share

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ರಾಟ್‌ವೀಲರ್ ತಳಿಯ ನಾಯಿಯೊಂದಕ್ಕೂ ನಾಗರಹಾವಿನ ನಡುವೆ ನಡೆದ ಭೀಕರ ಕಾಳಗದ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು ಕೊನೆಗೆ ಎರಡೂ ಪ್ರಾಣಿಗಳು ಜೀವ ಕಳೆದುಕೊಂಡಿವೆ.

ಸುಮಾರು ಒಂದು ಗಂಟೆಗಳ ಕಾಲ ನಡೆದ ಈ ಪೈಪೋಟಿ ಗ್ರಾಮಸ್ಥರಲ್ಲಿ ಆತಂಕ ಮತ್ತು ಅಚ್ಚರಿಯನ್ನು ಮೂಡಿಸಿದೆ.ಗ್ರಾಮದ ನಿವಾಸಿಯೊಬ್ಬರ ಮನೆಯ ಆವರಣದಲ್ಲಿ ಈ ಘಟನೆ ನಡೆದಿದೆ.

ಏಕಾಏಕಿ ಎದುರಾದ ನಾಗರಹಾವನ್ನು ಕಂಡ ನಾಯಿ, ತನ್ನ ಸ್ವಭಾವದಂತೆ ಹಾವಿನ ಮೇಲೆ ದಾಳಿ ನಡೆಸಿದೆ. ಇದರಿಂದ ಹಾವು ಕೂಡ ಪ್ರತಿದಾಳಿ ನಡೆಸಿ ನಾಯಿಯನ್ನು ಹಲವು ಬಾರಿ ಕಚ್ಚಿತು.

ಕಾಳಗದ ಅಂತ್ಯದಲ್ಲಿ ನಾಯಿ ತನ್ನ ಬಲಿಷ್ಠ ದವಡೆಹಲ್ಲುಗಳಿಂದ ನಾಗರಹಾವನ್ನು ಸಂಪೂರ್ಣವಾಗಿ ಕಚ್ಚಿ ಕೊಂದಿದೆ. ಆದರೆ ನಾಗರಹಾವಿನ ವಿಷಕಾರಿ ಕಡಿತದಿಂದ ನಾಯಿ ಕೂಡ ತೀವ್ರವಾಗಿ ಗಾಯಗೊಂಡಿತ್ತು.

ಹಾವನ್ನು ಸಾಯಿಸಿದ ಬಳಿಕ ನಾಯಿ ತನ್ನ ಬೋನಿಗೆ ತೆರಳಿ ಮಲಗಿಕೊಂಡಿದ್ದು, ಸ್ವಲ್ಪ ಸಮಯದ ಬಳಿಕ ಅಲ್ಲಿಯೇ ಉಸಿರು ಚೆಲ್ಲಿದೆ. ಹಾವಿನ ವಿಷ ನಾಯಿಯ ದೇಹದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಚಿಕಿತ್ಸೆ ದೊರಕುವ ಮುನ್ನವೇ ನಾಯಿ ಮೃತಪಟ್ಟಿದೆ.

ಘಟನೆಯ ಬಳಿಕ ಮನೆಯವರು ನಾಗರಹಾವಿಗೆ ಶಾಸ್ರೋಕ್ತವಾಗಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ನಾಯಿ ತನ್ನ ಮಾಲೀಕರನ್ನು ಹಾಗೂ ಮನೆ ಆವರಣವನ್ನು ರಕ್ಷಿಸುವ ಪ್ರಯತ್ನದಲ್ಲಿ ಪ್ರಾಣ ತ್ಯಾಗ ಮಾಡಿದೆ.

ಹಾವು ತನ್ನ ಪ್ರಾಣ ಉಳಿಸಿಕೊಳ್ಳಲು ಹೋರಾಟ ಮಾಡಿದ್ದು, ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ಸಂಭವಿಸಿದ್ದು, ನಾಯಿ-ಹಾವು ನಡುವಿನ ದುಃಖಕರ ಕಾಳಗದ ವೀಡಿಯೋ ವೈರಲ್ ಆಗಿದೆ.

Video of dog-snake fight goes viral

Share

Leave a comment

Leave a Reply

Your email address will not be published. Required fields are marked *

Don't Miss

ಮತದಾರ ಪಟ್ಟಿಗೆ ಮತದಾರರನ್ನು ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಲು

ಚಿಕ್ಕಮಗಳೂರು: ಕಾಂಗ್ರೆಸ್ ಸಾಂಪ್ರದಾಯಿಕ ಮತದಾರರನ್ನು ಮತದಾರ ಪಟ್ಟಿಗೆ ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಿದಲ್ಲಿಮಾತ್ರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಟ್ಟಿಯಾಗಿ ಎದುರಿಸಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ...

ನೂತನ ತಂತ್ರಜ್ಞಾನವನ್ನು ಯುವಜನತೆ ಮಿತಿಯಲ್ಲಿ ಬಳಸಬೇಕು

ಚಿಕ್ಕಮಗಳೂರು: ಎ ಐ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಯುವಜನತೆ ಇತಿ ಮಿತಿಯಲ್ಲಿ ಬಳಸಬೇಕು ಎಂದು ಎ ಐ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಸಲಹೆ ಮಾಡಿದರು....

Related Articles

ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಜೋಳದಾಳು ಗ್ರಾಮದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಜೋಳದಾಳು ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಮೈಲಿಮನೆ ಗ್ರಾಮ...

ರಕ್ತದಾನದಿಂದ ಜೀವ ಉಳಿಸುವವರು ಜೀವಸಂರಕ್ಷಕರೇ

ಚಿಕ್ಕಮಗಳೂರು: – ರಕ್ತದಾನಕ್ಕೆ ಜಾತಿ ತಾರತಮ್ಯವಿಲ್ಲ. ಜೀವ ಉಳಿಸುವ ಪ್ರತಿಯೊಬ್ಬ ವ್ಯಕ್ತಿಯು ಜೀವಸಂರಕ್ಷಕರೇ. ಶ್ರೀಮಂತಿಕೆ ಎಷ್ಟೇ...

ಯುದ್ಧ ನಿಲ್ಲಿಸಬೇಕಾದವರು ಮೌನವಾಗಿರುವುದು ಮಾನವತೆಯ ಸೋಲು

ಚಿಕ್ಕಮಗಳೂರು: ಯುದ್ಧದ ಬೆಂಕಿ ವಿಶ್ವವನ್ನು ಸುಡುತ್ತಿರುವಾಗ, ಶಾಂತಿಯ ಮಾತುಗಳನ್ನು ಹೇಳಬೇಕಾದ ಸಂಘಟನೆಗಳು ರಾಜಕೀಯ ಲಾಭ-ನ?ದ ಲೆಕ್ಕಾಚಾರದಲ್ಲಿ...

ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು

ಚಿಕ್ಕಮಗಳೂರು: ಚಿನ್ನದ ಬೆಲೆ ಹೆಚ್ಚಳದಿಂದಾಗಿ ಶೇ.೮೦ ರಷ್ಟು ಗೋಲ್ಡ್‌ಸ್ಮಿತ್ ಕೆಲಸಗಾರರು ಕೆಲಸವಿಲ್ಲದೆ ಪೇಚಾಡುವಂತಾಗಿರುವ ಹಿನ್ನೆಲೆಯಲ್ಲಿ ಸರ್ಕಾರ...