Home ನಾಯಿ-ಹಾವು ನಡುವಿನ ಕಾಳಗದ ವೀಡಿಯೋ ವೈರಲ್
HomeLatest Newsnamma chikmagalurTarikere

ನಾಯಿ-ಹಾವು ನಡುವಿನ ಕಾಳಗದ ವೀಡಿಯೋ ವೈರಲ್

Share
Share

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ರಾಟ್‌ವೀಲರ್ ತಳಿಯ ನಾಯಿಯೊಂದಕ್ಕೂ ನಾಗರಹಾವಿನ ನಡುವೆ ನಡೆದ ಭೀಕರ ಕಾಳಗದ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು ಕೊನೆಗೆ ಎರಡೂ ಪ್ರಾಣಿಗಳು ಜೀವ ಕಳೆದುಕೊಂಡಿವೆ.

ಸುಮಾರು ಒಂದು ಗಂಟೆಗಳ ಕಾಲ ನಡೆದ ಈ ಪೈಪೋಟಿ ಗ್ರಾಮಸ್ಥರಲ್ಲಿ ಆತಂಕ ಮತ್ತು ಅಚ್ಚರಿಯನ್ನು ಮೂಡಿಸಿದೆ.ಗ್ರಾಮದ ನಿವಾಸಿಯೊಬ್ಬರ ಮನೆಯ ಆವರಣದಲ್ಲಿ ಈ ಘಟನೆ ನಡೆದಿದೆ.

ಏಕಾಏಕಿ ಎದುರಾದ ನಾಗರಹಾವನ್ನು ಕಂಡ ನಾಯಿ, ತನ್ನ ಸ್ವಭಾವದಂತೆ ಹಾವಿನ ಮೇಲೆ ದಾಳಿ ನಡೆಸಿದೆ. ಇದರಿಂದ ಹಾವು ಕೂಡ ಪ್ರತಿದಾಳಿ ನಡೆಸಿ ನಾಯಿಯನ್ನು ಹಲವು ಬಾರಿ ಕಚ್ಚಿತು.

ಕಾಳಗದ ಅಂತ್ಯದಲ್ಲಿ ನಾಯಿ ತನ್ನ ಬಲಿಷ್ಠ ದವಡೆಹಲ್ಲುಗಳಿಂದ ನಾಗರಹಾವನ್ನು ಸಂಪೂರ್ಣವಾಗಿ ಕಚ್ಚಿ ಕೊಂದಿದೆ. ಆದರೆ ನಾಗರಹಾವಿನ ವಿಷಕಾರಿ ಕಡಿತದಿಂದ ನಾಯಿ ಕೂಡ ತೀವ್ರವಾಗಿ ಗಾಯಗೊಂಡಿತ್ತು.

ಹಾವನ್ನು ಸಾಯಿಸಿದ ಬಳಿಕ ನಾಯಿ ತನ್ನ ಬೋನಿಗೆ ತೆರಳಿ ಮಲಗಿಕೊಂಡಿದ್ದು, ಸ್ವಲ್ಪ ಸಮಯದ ಬಳಿಕ ಅಲ್ಲಿಯೇ ಉಸಿರು ಚೆಲ್ಲಿದೆ. ಹಾವಿನ ವಿಷ ನಾಯಿಯ ದೇಹದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಚಿಕಿತ್ಸೆ ದೊರಕುವ ಮುನ್ನವೇ ನಾಯಿ ಮೃತಪಟ್ಟಿದೆ.

ಘಟನೆಯ ಬಳಿಕ ಮನೆಯವರು ನಾಗರಹಾವಿಗೆ ಶಾಸ್ರೋಕ್ತವಾಗಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ನಾಯಿ ತನ್ನ ಮಾಲೀಕರನ್ನು ಹಾಗೂ ಮನೆ ಆವರಣವನ್ನು ರಕ್ಷಿಸುವ ಪ್ರಯತ್ನದಲ್ಲಿ ಪ್ರಾಣ ತ್ಯಾಗ ಮಾಡಿದೆ.

ಹಾವು ತನ್ನ ಪ್ರಾಣ ಉಳಿಸಿಕೊಳ್ಳಲು ಹೋರಾಟ ಮಾಡಿದ್ದು, ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ಸಂಭವಿಸಿದ್ದು, ನಾಯಿ-ಹಾವು ನಡುವಿನ ದುಃಖಕರ ಕಾಳಗದ ವೀಡಿಯೋ ವೈರಲ್ ಆಗಿದೆ.

Video of dog-snake fight goes viral

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...