Home namma chikmagalur chikamagalur ಗ್ರಾಮಲೆಕ್ಕಿಗನಿಗೆ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚನೆ
chikamagalurCrime NewsHomeLatest Newsnamma chikmagalur

ಗ್ರಾಮಲೆಕ್ಕಿಗನಿಗೆ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚನೆ

Share
Share

ಚಿಕ್ಕಮಗಳೂರು : ಗ್ರಾಮಲೆಕ್ಕಿಗರೊಬ್ಬರಿಗೆ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ ಲಾಭಮಾಡಿಕೊಡುವ ಆಮಿಷವೊಡ್ಡಿದ ಬ್ಯಾಂಕ್ ಉದ್ಯೋಗಿಯೊಬ್ಬ ೪೫.೨೦ ಲಕ್ಷ ಹಣಕ್ಕೆ ೫೦ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚಿಸಿರುವ ಬಗ್ಗೆ ಇಂದು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯಲ್ಲಿ ನಗರದ ಕಲ್ಯಾಣ ನಗರದ ನಿವಾಸಿ ವೈ.ಡಿ.ರಮೇಶ್ ಗ್ರಾಮ ಲೆಕ್ಕಿಗನಾಗಿ ಕೆಲಸ ಮಾಡುತ್ತಿದ್ದಾಗ ವೈ.ಡಿ.ರಮೇಶ್‌ಗೆ ಖಾಸಗಿ ಬ್ಯಾಂಕ್ ಉದ್ಯೋಗಿ ಶಿವಪ್ರಸಾದ್ ಪರಿಚಯವಾಗಿತ್ತು.

೨೦೨೪ರಲ್ಲಿ ರಮೇಶ್ ಪತ್ನಿ ಪುಷ್ಪ ಅವರಿಗೆ ಸೇರಿದ ಕಡೂರಿನ ಮನೆ ಮಾರಾಟದ ಹಣವನ್ನು ಆ ಹಣವನ್ನು ಚಿನ್ನ, ಬೆಳ್ಳಿ ಹೂಡಿಕೆ ಮಾಡಿದರೆ ಭಾರೀ ಲಾಭ ಗಳಿಸಬಹುದೆಂದು ಶಿವ ಪ್ರಸಾದ್ ಬಣಕಲ್‌ನ ಬ್ರಾಮರಿ ಜ್ಯುಯಲ್ಲರ್ ವರ್ಕ್ಸ್‌ನ ನಾಗರಾಜ್ ಎಂಬ ಅಕ್ಕಸಾಲಿಗನ ಕರೆದುಕೊಂಡು ಬಂದು ಪರಿಚಯ ಮಾಡಿಸಿದ್ದ. ೫೦.೮೩೦ ಕೆಜಿ ಬೆಳ್ಳಿಗೆ, ೪೫.೨೩ ಲಕ್ಷ ರು. ಮಾತುಕತೆ ಮಾಡಿ ಬೆಳ್ಳಿಗಟ್ಟಿ ಕೊಡುವುದಾಗಿ ನಂಬಿಸಿದ್ದಾರೆ.
ಆ ಹಿನ್ನಲೆಯಲ್ಲಿ ಹಂತ ಹಂತವಾಗಿ ೪೫.೨೩ ಲಕ್ಷ ಹಣ ನೀಡಿ ಬೆಳ್ಳಿ ಗಟ್ಟಿಗಳನ್ನುರಮೇಶ್ ಪಡೆದಿದ್ದರು.

ಹಣದ ಅವಶ್ಯಕತೆ ಬಂದ ಹಿನ್ನೆಲೆಯಲ್ಲಿ ಮತ್ತು ಬೆಳ್ಳಿಯ ಬೆಲೆ ಹಚ್ಚಾದ ಹಿನ್ನೆಲೆಯಲ್ಲಿ ೨೦೨೫ರ ಮೇ ತಿಂಗಳಿನಲ್ಲಿಯೇ ೨೦ ಕೆ.ಜಿ. ಬೆಳ್ಳಿ ಮಾರಾಟಕ್ಕೆ ಹೋದಾಗ ೧೬ ಕೆ.ಜಿ. ಬೆಳ್ಳಿ ನಕಲಿ ಎಂದು ತಿಳಿದು ಬಂದಿತ್ತು. ಈ ಬಗ್ಗೆ ಶಿವಪ್ರಸಾದ್ ಹಾಗೂ ನಾಗರಾಜ್ ವಿಚಾರಿಸಿ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದಾಗ, ಆ ಬೆಳ್ಳಿಯನ್ನು ನಾವೇ ಮಾರಾಟ ಮಾಡಿ, ನಿಮಗೆ ಹಣ ಕೊಡುತ್ತೇವೆ ಎಂದು ಹೇಳಿ ಕಳೆದ ಏಪ್ರಿಲ್ ೮ ರಂದು ಎಲ್ಲ ೫೦ ಕೆ.ಜಿ ಬೆಳ್ಳಿಯನ್ನು ತೆಗೆದುಕೊಂಡು ಹೋದವರು ಫೋನ್ ಕೂಡಾ ಎತ್ತದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Village accountant cheated by giving fake kg silver bars

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...