Home namma chikmagalur ಸಿಡಿಎ ವಂಚನೆ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ
namma chikmagalurchikamagalurHomeLatest News

ಸಿಡಿಎ ವಂಚನೆ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ

Share
????????????????????????????????????
Share

ಚಿಕ್ಕಮಗಳೂರು:  ಇಂದಾವರ ಗ್ರಾಮಸ್ಥರ ಜಮೀನನ್ನು ನಿವೇಶನಗಳನ್ನಾಗಿ ಪರಿವ ರ್ತಿಸುವಂತೆ ಸಿಡಿಎ ಇಲಾಖೆ ಒಡಂಬಡಿಕೆಯಲ್ಲಿ ಜಮೀನನ್ನು ಪಡೆದುಕೊಂಡು ರೈತರಿಗೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ಸಿಡಿಎ ಕಚೇರಿ ಎದುರು ಇಂದಾವರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ಗ್ರಾಮಸ್ಥ ಯತೀಶ್ ಗ್ರಾಮದ ಸುಮಾರು ೨೦೮ ಎಕರೆ ಪ್ರದೇಶವನ್ನು ಸಿಡಿ ಎ ಇಲಾಖೆ ಪರಸ್ಪರ ಒಪ್ಪಂದ ಮೇರೆಗೆ ಪಡೆದುಕೊಂಡು ಸುಮಾರು ಮೂರ್‍ನಾಲ್ಕು ವರ್ಷಗಳೇ ಕಳೆದರೂ ಇಂದಿಗೂ ಲೇಔಟ್ ನಿರ್ಮಾಣಗೊಂಡಿಲ್ಲ. ಇನ್ನೊಂದೆಡೆ ರೈತರ ಜಮೀನನ್ನು ಹಿಂತಿರುಗಿಸುತ್ತಿಲ್ಲ ಎಂದು ಆರೋಪಿಸಿದರು.

ಗ್ರಾಮದ ಜಮೀನನ್ನು ಸರಿಯಾಗಿ ನಿವೇಶನಗಳನ್ನಾಗಿ ಮಾರ್ಪಡಿಸದೇ ಸಿಡಿಎ ಇಲಾಖೆ, ಇದೀಗ ಮ ತ್ತೊಂದು ಸ್ಥಳದಲ್ಲಿ ರೈತರಿಂದ ಜಮೀನು ಪಡೆದುಕೊಂಡು ಲೇಔಟ್ ಮಾಡುವುದಾಗಿ ಹೇಳುತ್ತಿದೆ. ಇದರಿಂ ದ ಗ್ರಾಮದ ಬಹುತೇಕ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು.

ಬೃಹತ್ ಮಟ್ಟದಲ್ಲಿ ಗ್ರಾಮದಲ್ಲಿ ಲೇಔಟ್ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಬೆರಳಣಿಕೆ ಸಂಖ್ಯೆಯ ಲ್ಲಿ ಸಿಬ್ಬಂದಿಗಳು ನಿಯೋಜಿಸಿ ಕೆಲಸ ಮಾಡಿಸಲಾಗುತ್ತಿದೆ. ಅಲ್ಲದೇ ವರ್ಷಗಟ್ಟಲೇ ಸಮಯ ಸಾಗುತ್ತಿರುವ ಕಾರಣ ನಿವೇಶನದ ಜಾಗದಲ್ಲಿ ಹುಲ್ಲು ಬೆಳೆದುಕೊಂಡು ನಿವೇಶನ ಸ್ಪಷ್ಟವಾಗಿ ಕಾಣಿಸುತ್ತಿಲ್ಲ. ಜೊತೆಗೆ ರೈತರಿ ಗೂ ತಮ್ಮ ಜಮೀನು ಯಾವುದೆಂದು ತಿಳಿಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮದ ರೈತರ ಪ್ರತಿ ಎಕರೆಗೆ ಶೇ.೫೫ ರಂತೆ ೧೨ ಸಾವಿರ ಚದರಡಿ ಮೀಸಲಿಡಬೇಕು. ಈ ಲೇಔಟ್ ಸಂಪೂರ್ಣವಾಗಿ ಪೂರೈಸುವ ಮೊದಲೇ, ಹೊಸ ಸ್ಥಳದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರವು ಕಾಯ್ದೆಗಳ ಬೆದ ರಿಕೆವೊಡ್ಡಿ ರೈತರಿಂದ ಜಮೀನನ್ನು ಕಬಳಿಸಲು ಯತ್ನಿಸುತ್ತಿದೆ ಎಂದರು.

ರೈತರು ಬೆಳೆ ಭೂಮಿಯನ್ನು ಪ್ರಾಧಿಕಾರಕ್ಕೆ ಹಸ್ತಾಂತರಿಸಿ ನಾಲ್ಕೈದು ವರ್ಷಗಳೇ ಕಳೆದಿವೆ. ಇಂದಿಗೂ ಲೇಔಟ್ ಪೂರೈಸದೇ ಉಡಾಫೆ ಉತ್ತರ ನೀಡಿ ರೈತರನ್ನು ವಂಚಿಸಲಾಗುತ್ತಿದೆ. ರೈತರಿಗೆ ನಿವೇಶನ ಹಂಚಿಲ್ಲ, ಲೇಔಟ್‌ನಲ್ಲಿ ಚರಂಡಿ, ರಸ್ತೆ ಕಾಮಗಾರಿ ಕಳಪೆಯಾಗಿದೆ. ಇಲಾಖೆ ರೈತರ ಬೆಳೆ ಬೆಳೆಯುವ ಭೂಮಿ ಪಡೆದು ವಂಚಿಸುತ್ತಿದ್ದಾರೆ ಎಂದರು.

ಕೂಡಲೇ ಲೇಔಟ್ ಬಗ್ಗೆ ಸಿಡಿಎ ಇಲಾಖೆ ಡಿಸೆಂಬರ್ ಅಂತ್ಯದೊಳಗೆ ಸಮರ್ಪಕ ಉತ್ತರ ನೀಡಿ, ರೈತ ರಿಗೆ ನಿವೇಶನ ಹಂಚಿಕೆ ಮಾಡದಿದ್ದಲ್ಲಿ ಜಮೀನಿನಲ್ಲಿ ರೈತರು ಉಳುಮೆ ಆರಂಭಿಸುವ ಜೊತೆಗೆ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಇಂದಾವರ ಗ್ರಾ.ಪಂ. ಅಧ್ಯಕ್ಷ ಸುಭಾಶ್, ಗ್ರಾಮಸ್ಥರಾದ ಸುರೇಶ್, ದಿನೇಶ್, ಲವ ಕುಮಾರ್, ರೇವಣ್ಣ, ಐ.ಡಿ.ಚಂದ್ರು, ಪ್ರೇಮ್‌ಕುಮಾರ್, ದಿಣೇಶ್, ಮಲ್ಲೇಶ್, ಚೇತನ್, ನಿರಂಜನ್ ಇದ್ದರು.

Villagers protest against CDA fraud

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...