Home namma chikmagalur ಮುಗುಳುವಳ್ಳಿಯಲ್ಲಿ ಬಸ್ ನಿಲುಗಡೆ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
namma chikmagalurchikamagalurHomeLatest News

ಮುಗುಳುವಳ್ಳಿಯಲ್ಲಿ ಬಸ್ ನಿಲುಗಡೆ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Share
Share

ಚಿಕ್ಕಮಗಳೂರು:  ತಾಲೂಕಿನ ಮುಗುಳುವಳ್ಳಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಇಂದು ರಸ್ತೆತಡೆ ನಡೆಸಿದ್ದಾರೆ.

ಗ್ರಾಮದ ಮೂಲಕ ಚಿಕ್ಕಮಗಳೂರಿಗೆ ಹಾಸನ, ಬೆಂಗಳೂರು, ಮೈಸೂರಿನಿಂದ ಪ್ರತಿನಿತ್ಯ ನೂರಾರು ಬಸ್‌ಗಳು ಸಂಚಾರ ನಡೆಸುತ್ತವೆ. ಆದರೆ, ಗ್ರಾಮದಲ್ಲಿ ಬಸ್ ನಿಲುಗಡೆ ಇಲ್ಲದಿರುವುದರಿಂದ ಪ್ರತಿನಿತ್ಯ ಕೆಲಸಕ್ಕೆ ತೆರಳುವವರಿಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಅಲ್ಲದೇ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿದೆ, ಇದರಿಂದ ಗ್ರಾಮದ ಮಹಿಳೆಯರಿಗೆ ಯಾವುದೇ ಪ್ರಯೋಜನ ಆಗುತ್ತಿಲ್ಲವೆಂದು ರಸ್ತೆತಡೆ ನಡೆಸಿ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪಟ್ಟು ಹಿಡಿದು ಕೂತರು, ಹೀಗಾಗಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು.

ಗ್ರಾ.ಪಂ ಮಾಜಿ ಅಧ್ಯಕ್ಷ ರಘುನಂದನ್ ಮಾತನಾಡಿ, ಕಳೆದ ೧೫ ದಿನಗಳಿಂದ ಇಲ್ಲಿ ಬಸ್ ನಿಲುಗಡೆ ಮಾಡುವಂತೆ ಕೋರಿ ಮನವಿ ಸಲ್ಲಿಸಿದ್ದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು.

ಗ್ರಾಮಕ್ಕೆ ಬರುವ ಬಸ್ ಸರಿಯಾಗಿ ನಿಗದಿತ ಸಮಯಕ್ಕೆ ಬರುತ್ತಿಲ್ಲ, ಈ ಬಗ್ಗೆ ಪ್ರಶ್ನಿಸಿದರೆ ಬಸ್ ಕೆಟ್ಟು ಹೋಗಿದೆ, ಪರ್ಯಾಯ ಬಸ್ ಇಲ್ಲ ಎಂಬ ಸಬೂಬುಗಳು ಹೇಳುತ್ತಾರೆ, ಬೆಂಗಳೂರು, ಮೈಸೂರು ಕಡೆಯಿಂದ ರಾತ್ರಿ ಸಮಯದಲ್ಲಿ ಬರುವ ಪ್ರಯಾಣಿಕರಿಗೆ ಇಲ್ಲಿ ಬಸ್ ನಿಲುಗಡೆ ಇಲ್ಲದಿರುವುದರಿಂದ ತೊಂದರೆಯಾಗುತ್ತಿದೆ. ಈ ಸಂಬಂಧ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಾಣಾಧಿಕಾರಿಗಳಿಗೆ, ಗ್ರಾಮಾಂತರ ಠಾಣೆಗೆ ಮತ್ತು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದೇವೆ ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಪರಮೇಶ್ವರಪ್ಪ ಮಾತನಾಡಿ ಕಾಂಗ್ರೆಸ್ ಸರ್ಕಾರ ಗ್ರಾಮಗಳಿಗೆ ಸರ್ಕಾರಿ ಬಸ್ಸುಗಳನ್ನು ಬಿಡದೆ ಗ್ರಾಮಸ್ಥರಿಗೆ ಬಹಳ ತೊಂದರೆಯಾಗಿದೆ, ಶಕ್ತಿ ಯೋಜನೆಯಿಂದ ನಮ್ಮ ಗ್ರಾಮಕ್ಕೆ ಸರ್ಕಾರಿ ಬಸ್ಸುಗಳು ಇಲ್ಲದೆ ಶಕ್ತಿ ಯೋಜನೆ ಎಲ್ಲಿ ಜಾರಿ ಬಂದಿದೆ, ಗ್ರಾಮಕ್ಕೆ ಸರ್ಕಾರಿ ಬಸ್ಸುಗಳನ್ನು ಬಿಡುವುದರ ಜೊತೆಗೆ ವೇಗದೂತ ಬಸ್ಸುಗಳನ್ನು ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ರೈತ ಸಂಘದ ಮಾಜಿ ಅಧ್ಯಕ್ಷ ಗುರುಶಾಂತಪ್ಪ ಮಾತನಾಡಿ, ವೇಗದೂತ ಬಸ್‌ಗಳನ್ನು ಗ್ರಾಮದಲ್ಲಿ ನಿಲುಗಡೆ ಮಾಡುವಂತೆ ಕೆಎಸ್‌ಆರ್‌ಟಿಸಿ ವಿಭಾಗೀಯ ಅಧಿಕಾರಿಗಳು ಆದೇಶಿಸಿದ್ದರೂ ಚಾಲಕ ಹಾಗೂ ನಿರ್ವಾಹಕರು ಇದನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿದರು.
ಈ ನಿಲ್ದಾಣದಲ್ಲಿ ಬಸ್ ನಿಲ್ಲಿಸದೇ ಹೋಗುವ ನಿರ್ವಾಹಕರು ಮತ್ತು ಚಾಲಕರ ವಿರುದ್ಧ ದೂರು ಬಂದರೆ ನೋಟೀಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಗ್ರಾಮಸ್ಥರಾದ ದಿನೇಶ್ ಮಾತನಾಡಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಿರಿಯ ನಾಗರೀಕರಿಗೆ ಹಾಗೂ ಮಹಿಳೆಯರಿಗೆ ಬಸ್ಸ್ ನಿಲ್ಲಿಸದೆ ಹೋಗುತ್ತಿರುವ ಕಾರಣ ಮನವಿ ನೀಡಲಾಗಿತ್ತು, ಹಿರಿಯ ಅಧಿಕಾರಗಳ ಬಸ್ ನಿಲ್ಲಿಸುವಂತೆ ಆದೇಶ ಹೋರಡಿಸಿದರು ಸಹ ಬಸ್ ಸಿಬ್ಬಂದಿಗಳು ಬಸ್ ನಿಲ್ಲಿಸದ ಕಾರಣ ರಸ್ತೆ ತಡೆ ನೆಡೆಸಿ ಮುಷ್ಕರವನ್ನು ನಡೆಸಲಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯೆ ನಳಿನಾಕ್ಷಿ ಮಾತನಾಡಿ ಮಹಿಳೆಯರಿಗೆ ಅನುಕೂಲವಾಗುವಂತೆ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದರು ಇಲ್ಲಿ ಅದರ ಸದುಪಯೋಗವಾಗುತ್ತಿಲ್ಲ, ಇಂತಹ ಯೋಜನೆಗಳ ಆಮಿಷವನ್ನು ತೊರಿಸಿ ಜನರಿಂದ ಮತಗಳನ್ನು ಪಡೆದ ಸರ್ಕಾರ ಇದರತ್ತ ಗಮನ ಅರಿಸಬೇಕಾಗಿದೆ ಎಂದರು.

ವಿದ್ಯಾರ್ಥಿ ಪುಣ್ಯ ಮಾತನಾಡಿ ಸರ್ಕಾರಿ ಬಸ್ ವ್ಯವಸ್ಥೆ ಇಲ್ಲದ ಕಾರಣ ಸರಿಯಾದ ಸಮಯಕ್ಕೆ ಶಾಲೆಗೆ ಹೊಗಲು ಸಾದ್ಯವಾಗುತ್ತಿಲ್ಲ, ಪ್ರತಿ ನಿತ್ಯ ಆಟೋದಲ್ಲಿ ಹೋಗುವಷ್ಟು ಅನುಕೂಲತೆಯು ಇಲ್ಲ, ಇದು ಒಂದು ದಿನದ ಸಮಸ್ಯೆಯಲ್ಲ, ಪ್ರತಿ ದಿನದ ಸಮಸ್ಯೆಯಾಗಿದೆ, ಹಲವು ಬಾರಿ ಮನವಿ ಮಾಡಿದರು ಸಹ ಯಾವುದೇ ರೀತಿಯ ಸ್ಪಂದನೆ ದೊರೆಯದೆ ಇರುವುದರಿಂದ ಇಂದು ಗ್ರಾಮಸ್ಥರೆಲ್ಲರೂ ಒಟ್ಟುಗೂಡಿ ಹೋರಾಟ ಮಾಡಲಾಗುತ್ತಿದೆ ಎಂದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಚಿಕ್ಕಮಗಳೂರು ತಹಶೀಲ್ದಾರ್ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಿ ಬಸ್ ನಿಲುಗಡೆಯ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ರಸ್ತೆತಡೆ ಕೈಬಿಟ್ಟಿದ್ದಾರೆ.

Villagers protest demanding bus parking in Muguluvalli

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...