Home namma chikmagalur chikamagalur ಹಗ್ಗದಿಂದ ಕಟ್ಟಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: ಇಬ್ಬರ ಬಂಧನ
chikamagalurCrime NewsHomeLatest Newsnamma chikmagalur

ಹಗ್ಗದಿಂದ ಕಟ್ಟಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: ಇಬ್ಬರ ಬಂಧನ

Share
Share

ಕೊಪ್ಪ: ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪದ ಮೇರೆಗೆ ಕೊಪ್ಪ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ನಾಲ್ಕು ಜಾನುವಾರುಗಳು ಹಾಗೂ ಸಾಗಾಟಕ್ಕೆ ಬಳಸಿದ್ದ ಮಿನಿ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಆ.10ರಂದು ಬೆಳಿಗ್ಗೆ ಕೊಪ್ಪ ಠಾಣೆ ಪೊಲೀಸರು ವಿಶೇಷ ಗಸ್ತಿನಲ್ಲಿದ್ದ ವೇಳೆ, ಎನ್‌.ಆರ್‌.ಪುರ ಕಡೆಯಿಂದ ಮಿನಿ ಗೂಡ್ಸ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಾಳಗಡಿ ಫೈರಿಂಗ್ ರೇಂಜ್ ಬಳಿ KA-36-C-0100 ನೋಂದಣಿ ಸಂಖ್ಯೆಯ ಮಾರುತಿ ಸುಜುಕಿ ಸೂಪರ್ ಕ್ಯಾರಿ ಮಿನಿ ಗೂಡ್ಸ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ.

ವಾಹನದಲ್ಲಿ ಎರಡು ಹೆಣ್ಣು ದನಗಳು ಹಾಗೂ ಎರಡು ಗಂಡು ದನಗಳು ಪತ್ತೆಯಾಗಿವೆ. ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನದಲ್ಲಿದ್ದ ಎನ್‌.ಆರ್‌.ಪುರ ತಾಲ್ಲೂಕಿನ ಕಡುಹಿನಬೈಲು ಗ್ರಾಮದ ಬದ್ರುದ್ದೀನ್ ಬಿನ್ ಅಹಮ್ಮದ್ ಬ್ಯಾರಿ (35) ಹಾಗೂ ಹನೀಫ್.ಐ ಬಿನ್ ಇಬ್ರಾಹಿಂ (35) ಅವರನ್ನು ವಿಚಾರಿಸಿದಾಗ, ಜಾನುವಾರುಗಳನ್ನು ಶೃಂಗೇರಿ ತಾಲ್ಲೂಕಿನ ಕುಂಚೇಬೈಲು ಗ್ರಾಮದ ಉಮೇಶ್ ಎಂಬುವವರಿಂದ ಖರೀದಿಸಿ ಶೆಟ್ಟಿಕೊಪ್ಪಕ್ಕೆ ಕೊಂಡೊಯ್ಯುತ್ತಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಜಾನುವಾರುಗಳ ಸಾಗಾಟಕ್ಕೆ ಯಾವುದೇ ಪರವಾನಗಿ ಇಲ್ಲದಿರುವುದು ಹಾಗೂ ಅವುಗಳನ್ನು ಯಾವ ಉದ್ದೇಶಕ್ಕಾಗಿ ಕೊಂಡೊಯ್ಯಲಾಗುತ್ತಿದೆ ಎಂಬುದಕ್ಕೆ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನು ಹಾಗೂ ವಾಹನ ಮತ್ತು ನಾಲ್ಕು ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Violent transportation of cattle tied with ropes

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...