Home namma chikmagalur chikamagalur ಪ್ರಜಾಪ್ರಭುತ್ವ ಬಲವರ್ಧನೆಗೆ ಮತದಾನ ಅನಿವಾರ್ಯ
chikamagalurHomeLatest Newsnamma chikmagalur

ಪ್ರಜಾಪ್ರಭುತ್ವ ಬಲವರ್ಧನೆಗೆ ಮತದಾನ ಅನಿವಾರ್ಯ

Share
Share

ಚಿಕ್ಕಮಗಳೂರು: ಚುನಾವಣೆ ಎನ್ನುವುದು ಕೇವಲ ಪ್ರಕ್ರಿಯೆಯಲ್ಲ. ಅದು ದೇಶದ ಭವಿಷ್ಯ ನಿರ್ಧರಿಸುವ ಪವಿತ್ರ ಕಾರ್ಯ. ಯಾವುದೇ ಜಾತಿ, ಮತ, ಧರ್ಮ ಅಥವಾ ಹಣದ ಆಮಿಷಗಳಿಗೆ ಬಲಿಯಾಗದೇ ನಿಸ್ವಾರ್ಥ ಸೇವೆ ಮಾಡುವ ನಾಯಕರನ್ನು ಆಯ್ಕೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಭಾನುವಾರ ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನೇ ನಿಜವಾದ ಪ್ರಭು. ನೈತಿಕತೆಯಿಂದ ಮತ ಚಲಾಯಿಸಿದಾಗ ಮಾತ್ರ ಸಮರ್ಥ ನಾಯಕರನ್ನು ಆಯ್ಕೆ ಮಾಡಲು ಮತ್ತು ದೇಶದ ಭವಿಷ್ಯ ಉಜ್ವಲಗೊಳಿಸಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಭಾರತೀಯ ಚುನಾವಣಾ ಆಯೋಗವು ೧೯೫೦ರ ಜನವರಿ ೨೫ರಂದು ಜಾರಿಗೆ ಬಂದಿತು. ಈ ದಿನದ ಸವಿ ನೆನಪಿಗಾಗಿ ೨೦೧೧ ರಿಂದ ಪ್ರತಿ ವರ್ಷ ಜನವರಿ ೨೫ ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದ ಅವರು, ೧೮ ವರ್ಷ ತುಂಬಿದ ಪ್ರತಿಯೊಬ್ಬ ಯುವಕ-ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಮಾತನಾಡಿ, ಮತದಾನ ಎನ್ನುವುದು ಪ್ರಜಾಪ್ರಭುತ್ವದ ಆಸ್ತಿತ್ವ ಉಳಿಸುವ ವಜ್ರಾಯುಧ. ಆಮಿಷಗಳಿಗೆ ಬಲಿಯಾಗಿ ಮತ ಮಾರಿಕೊಳ್ಳುವುದು ತಾಯಿಯನ್ನು ಮಾರಿಕೊಂಡಂತೆ. ಮತದಾನದ ಸಮಯದಲ್ಲಿ ಹಂಚಲಾಗುವ ಹಣ, ಮದ್ಯ ಅಥವಾ ಸೀರೆಯಂತಹ ಊಡುಗೊರೆಗಳಿಗೆ ಮತದಾರರು ಮಾರು ಹೋಗಬಾರದು. ಇದು ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾದುದು ಎಂದು ಕಿವಿಮಾತು ಹೇಳಿದರು.

ಯಾವುದೇ ಜಾತಿ, ಧರ್ಮ, ಪ್ರಭಾವಕ್ಕೆ ಒಳಗಾಗದೇ ದೇಶದ ಸರ್ವತೋಮುಖ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಪ್ರಾಮಾಣಿಕವಾಗಿ ಯೋಚಿಸಿ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಎಂ.ನಾಗರಾಜ್ ಮಾತನಾಡಿ, ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಅರ್ಹ ಮತದಾರರು ಜವಾಬ್ದಾರಿಯುತವಾಗಿ ಚಲಾಯಿಸಬೇಕು. ಯಾವುದೇ ಹಣ, ಉಡುಗೊರೆ ಅಥವಾ ಆಮಿಷಗಳಿಗೆ ಒಳಗಾಗದೇ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಯುವ ಜನತೆಯನ್ನು ಮತದಾನದ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಲು ರಾಷ್ಟ್ರೀಯ ಮತದಾರರ ದಿನಾಚರಣೆ ಮಹತ್ವದ ಪಾತ್ರ ವಹಿಸಲಿದ್ದು, ೧೮ ವರ್ಷ ತುಂಬಿದ ಯುವಕ-ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಇದೇ ಸಂದರ್ಭದಲ್ಲಿ ಮತದಾರರ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಉಪವಿಭಾಗಾಧಿಕಾರಿ ಬಿ.ಕೆ.ಸುದರ್ಶನ್ ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಇದ್ದರು. ತಹಸೀಲ್ದಾರ್ ರೇಷ್ಮಾ ಶೆಟ್ಟಿ ಸ್ವಾಗತಿಸಿದರು.

Voting is essential to strengthen democracy

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...