Home namma chikmagalur chikamagalur ಆರೋಗ್ಯಪೂರ್ಣ ಶರೀರ ಸಂಪಾದಿಸಲು ನಡಿಗೆ ಅವಶ್ಯಕ
chikamagalurHomeLatest Newsnamma chikmagalur

ಆರೋಗ್ಯಪೂರ್ಣ ಶರೀರ ಸಂಪಾದಿಸಲು ನಡಿಗೆ ಅವಶ್ಯಕ

Share
Share

ಚಿಕ್ಕಮಗಳೂರು: ಆರೋಗ್ಯಪೂರ್ಣ ಶರೀರ ಸಂಪಾದಿಸಲು ನಡಿಗೆ ಅತ್ಯವಶ್ಯಕ. ಈ ಹಾ ದಿಯಲ್ಲಿ ಪ್ರತಿಯೊಬ್ಬರು ಹೆಚ್ಚು ತೊಡಗಿಸಿಕೊಂಡು ದೇಹ ದಂಡಿಸುವ ಜೊತೆಗೆ ನಡಿಗೆಯ ಹವ್ಯಾಸ ಬೆಳೆಸಿ ಕೊಂಡಲ್ಲಿ ಬಹುಕಾಲ ಜೀವಿಸಬಹುದು ಎಂದು ಹೆಡ್‌ಕಾನ್ಸ್ಟೇಬಲ್ ಗಿರೀಶ್ ಹೇಳಿದರು.

ನಗರದ ಸುಭಾಶ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಶನಿವಾರ ಮುಂಜಾನೆ ವಂದೇ ಮಾತರಂ ಟ್ರಸ್ಟ್ ವತಿಯಿಂದ ತ್ರಿಲೋಕ ಸಂಚಾರಿ ನಾರದ ಮುನಿಗಳ ಜಯಂತಿ ಪ್ರಯುಕ್ತ ಆಯೋಜಿಸಿದ್ದ ೬೦ ವರ್ಷ ಮೇಲ್ಪಟ್ಟವರಿಗೆ ನಡಿಗೆ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾನವ ಜೀವನದಲ್ಲಿ ನಡಿದಷ್ಟು ದೀರ್ಘಾಯುಷ್ಯಿಯಾಗಿ ಜೀವಿಸಬಲ್ಲನು. ಆ ಹಿನ್ನೆಲೆ ಸರ್.ಎಂ.ವಿಶ್ವೇ ಶ್ವರಯ್ಯ ನಡಿಗೆಯಿಂದಲೇ ಹೆಚ್ಚು ಕಾಲ ಜೀವಿಸಿ ಸಾಧನೆ ಮಾಡಿದ್ದಾರೆ. ಆ ಮಹಾಸಾಧಕರು ಪ್ರತಿದಿನ ೪ ಗಂಟೆಗೆ ಎಚ್ಚರಗೊಂಡು ನಡಿಗೆ ಆರಂಭಿಸುತ್ತಿದ್ದು. ನಾವುಗಳು ಈ ಆದರ್ಶಗಳನ್ನು ಮೈಗೂಡಿಸಿಕೊಂಡು ಮುನ್ನೆಡೆದರೆ ಆರೋಗ್ಯಭರಿತ ಜೀವನ ಪಡೆದುಕೊಳ್ಳಬಹುದು ಎಂದರು.

ಪ್ರಸ್ತುತ ಗ್ರಾಮೀಣ ಭಾಗದಲ್ಲಿ ರೈತರು ತೋಟ ಅಥವಾ ಜಮೀನುಗಳಿಗೆ ತೆರಳಲು ಕಾಲ್ನಡಿಗೆಯಲ್ಲಿ ತೆರ ಳುತ್ತಾರೆ. ಹಾಗಾಗಿಯೇ ಹಳ್ಳಿಜನರ ಆರೋಗ್ಯ ಸದೃಢವಾಗಿದೆ. ಆದರೆ ಇತ್ತೀಚಿನ ಆಧುನಿಕ ಕಾಲದಲ್ಲಿ ಅನಾ ರೋಗ್ಯದ ಹಿನ್ನೆಲೆ ನಡಿಗೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಮಕ್ಕಳಿಗೆ ಪಾಲಕರು ಬಾಲ್ಯದಿಂದಲೇ ಈ ರೀತಿ ಆರೋಗ್ಯ ಚಟುವಟಿಕೆಗೆ ಪ್ರೋತ್ಸಾಹಿಸಬೇಕು ಎಂದರು.

ಹಿರಿಯರು, ಯುವಜನತೆ ಹಾಗೂ ಮಕ್ಕಳಿಗೆ ಸ್ಪೂರ್ತಿ ನೀಡುವಂಥ ಕಾರ್ಯಕ್ರಮ ವಂದೇ ಮಾತರಂ ಟ್ರಸ್ಟ್ ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ. ಅಲ್ಲದೇ ನಾರದ ಜಯಂತಿ ಪ್ರಯುಕ್ತ ಹಿರಿಯ ನಾಗರೀಕರಿಗೆ ನಡಿಗೆ ಸ್ಪರ್ಧೆ ನಡೆಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.

ವಂದೇ ಮಾತರಂ ಟ್ರಸ್ಟ್ ಅಧ್ಯಕ್ಷ ಪ್ರೀತೇಶ್ ಮಾತನಾಡಿ ತ್ರಿಲೋಕ ಸಂಚಾರಿ ನಾದರ ಮುನಿಗಳು ಲೋ ಕ ಕಲ್ಯಾಣಗಾಗಿ ನಾಮಸ್ಮರಣೆ ಹಾಗೂ ನಡಿಗೆಯಿಂದ ಹಲವು ಲೋಕಗಳಲ್ಲಿ ಸಂಚರಿಸುತ್ತಿದ್ದರು. ಈ ಉದ್ದೇ ಶದಿಂದ ಸಾರ್ವಜನಿಕರು ನಾರದ ಮಹಾತ್ಮೆ ಮೂಡಿಸಲು ನಡಿಗೆ ಸ್ಫರ್ಧೆ ಆಯೋಜಿಸಿ ಸರ್ವರಿಗೂ ಉಚಿ ತವಾಗಿ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರು.

ಸ್ಪರ್ಧೆ ವಿಜೇತರು : ಪುರುಷರ ವಿಭಾಗ :- ಸಿ.ನಿಂಗಪ್ಪ ಪ್ರಥಮ, ಶಾಂತಕುಮಾರ್ ದ್ವೀತಿಯ, ಸಿ.ಆರ್. ಸುಧಾಕರ್ ತೃತೀಯ. ಮಹಿಳಾ ವಿಭಾಗ :- ಟಿ.ಮಂಜುಳಾ ಪ್ರಥಮ, ಎಸ್.ತಾರಾ ದ್ವೀತಿಯ, ಹೆಚ್.ಎಂ. ಪುಷ್ಪಲತಾ ತೃತೀಯ ಪಡೆದಿದ್ದು ಪ್ರಮಾಣ ಪತ್ರ ಹಾಗೂ ನಗದು ಪುರಸ್ಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಕ್ರೀಡಾಪಟು ಶಂಕರ್, ಸ್ಥಳಿಯರಾದ ಶ್ರೀಧರ್, ಮಂಜುನಾಥ್, ವಂ ದೇ ಮಾತರಂ ಟ್ರಸ್ಟ್ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Walking is essential for a healthy body.

Share

Leave a comment

Leave a Reply

Your email address will not be published. Required fields are marked *

Don't Miss

ಲವ್ ಜಿಹಾದ್ ಖಂಡಿಸಿ ನಗರದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಹಾಗೂ ದೇಶದ ಹಲವೆಡೆ ನಡೆಯುತ್ತಿರುವ ಲವ್ ಜಿಹಾದ್ ಹಾಗೂ ಕಾರ್ಪೊರೇಟ್ ಜಿಹಾದ್‌ನಂತಹ ಕೃತ್ಯಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್-ಬಜರಂಗದಳ ಹಾಗೂ ಮಾತೃಶಕ್ತಿ ದುರ್ಗಾ ವಾಹಿನಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು....

ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

ಚಿಕ್ಕಮಗಳೂರು : ಸರ್ವ ಜನರ ಉತ್ಸವವಾಗಿ ಜನೋತ್ಸವದ ರೀತಿ ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತಿಯನ್ನು ವೈಚಾರಿಕಾ ಕಾರ್ಯಕ್ರಮವಾಗಿ ಏ.೨೭ ರಂದು ಸೋಮವಾರ ಬೆಳಿಗ್ಗೆ ೧೦.೩೦ ಕ್ಕೆ...

Related Articles

ಇಳೆಹೊಳೆ ಗ್ರಾಮದಲ್ಲಿ ನಮ್ಮೂರ ಶಾಲೆ ಪ್ರತಿರೋಧ ಚಳವಳಿಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲೆಯ ಇಳೆಹೊಳೆ ಗ್ರಾಮದಲ್ಲಿ “ನಮ್ಮೂರ ಶಾಲೆ ನಮ್ಮಯ ಕಣ್ಮಣಿ” ಎಂದು ಹೆಸರಿರುವಬ್ಯಾನರ್ ಅನ್ನು ಶಾಲಾಭಿವೃದ್ಧಿ...

ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ

ಚಿಕ್ಕಮಗಳೂರು: ಅತ್ಯಂತ ಕುತೂಹಲ ಮೂಡಿಸಿದ್ದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ...

ಮತ ಎಣಿಕೆ ವಿಳಂಬ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಚಿಕ್ಕಮಗಳುರು: ರಾಜ್ಯ ಸರ್ಕಾರ ತಮ್ಮ ಶಾಸಕನ ಸೋಲಿನ ಭಯದಲ್ಲಿ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಸ್ಥಗಿತ...

ಕಗ್ಗಂಟಾಗಿ ಉಳಿದ ಅಂಚೆ ಮತಗಳ ಎಣಿಕೆ ಕಾರ್ಯ

ಚಿಕ್ಕಮಗಳೂರು: ಹೈಕೋರ್ಟ್ ನಿರ್ದೇಶನದಂತೆ ಶನಿವಾರ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಕಾರ್ಯ...