Home Latest News ನಿಷೇಧಿತ ಪಟಾಕಿ ದಾಸ್ತಾನು ಇದ್ದಲ್ಲಿ ಗೋದಾಮು ಮುಟ್ಟುಗೋಲು
Latest NewschikamagalurHomenamma chikmagalur

ನಿಷೇಧಿತ ಪಟಾಕಿ ದಾಸ್ತಾನು ಇದ್ದಲ್ಲಿ ಗೋದಾಮು ಮುಟ್ಟುಗೋಲು

Share
????????????????????????????????????
Share

ಚಿಕ್ಕಮಗಳೂರು:  ದೀಪಾವಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಪಟಾಕಿಗಳನ್ನು ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ನಿರ್ದೇಶಿಸಿರುವ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಎಲ್ಲ್ಲ ಪಟಾಕಿ ಮಾರಾಟಗಾರರ ಗೋದಾಮುಗಳಲ್ಲಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ಮಾಡುತ್ತಿದ್ದಲ್ಲಿ, ಈ ಕೂಡಲೇ ಅದನ್ನು ಪರಿಶೀಲಿಸಿ, ಅಲ್ಲಿ ಹಸಿರು ಪಟಾಕಿಯಲ್ಲದೇ ಇನ್ನಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಹಾಗೂ ಉಲ್ಲಂಘಿಸಿದವರ ವಿರುದ್ಧ ಕಾನೂನು ಪ್ರಕಾರ ತೀವ್ರವಾದ ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ. ಈ ಬಾರಿಯ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಾಗೂ ಇನ್ನಾವುದೇ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿ ಹೊರತುಪಡಿಸಿ, ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟ ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಪಟಾಕಿ ಸಿಡಿಸುವುದು ವಾಡಿಕೆಯಾಗಿದ್ದರೂ ಪಟಾಕಿ ತಯಾರಿಕೆಯಲ್ಲಿ ಅನೇಕ ರಾಸಾಯನಿಕಗಳನ್ನು ಬಳಕೆ ಮಾಡಲಾಗುತ್ತಿದೆ. ಪಟಾಕಿ ಸಿಡಿಸಿದ ಮೇಲೆ ಅದರಿಂದ ಬಿಡುಗಡೆಯಾಗುವ ರಾಸಾಯನಿಕ ವಸ್ತುಗಳು ವಾತಾವರಣದಲ್ಲಿ ಬಿಡುಗಡೆಗೊಂಡು ವಾಯುಮಾಲಿನ್ಯಕ್ಕೆ ಕಾರಣವಾಗುತ್ತಿದೆ.

ಈ ನಿಟ್ಟಿನಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿಗಳಿಗೆ ಸಂಬಂಧಿಸಿದಂತೆ, ರಿಟ್ ಪಿಟಿಷನ್(ಸಿ) ನಂ.೭೨೮/೨೦೧೫ ರಲ್ಲಿ ದಿನಾಂಕ:೨೩/೧೦/೨೦೧೮ ಮತ್ತು ದಿನಾಂಕ:೩೧/೧೦/೨೦೧೮ ಹಾಗೂ ತದನಂತರ ಹಲವಾರು ನಿರ್ದೇಶನಗಳನ್ನು ನೀಡಿದ್ದು, ಈ ಆದೇಶದಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸಮಯ ರಾತ್ರಿ ೮ ಗಂಟೆಯಿಂದ ರಾತ್ರಿ ೧೦ ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ. ಇದಲ್ಲದೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ತನ್ನ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿದೆ.

ಹಸಿರು ಪಟಾಕಿ ಕುರಿತು ಸರ್ಕಾರದ ಆದೇಶ ಸಂಖ್ಯೆ: ಆರ್ಡಿ ೪೬೫ ಟಿಎನ್‌ಆರ್ ೨೦೨೦ ದಿನಾಂಕ:೧೨/೧೧/೨೦೨೦ರಲ್ಲಿ ವಿವರಣೆಯನ್ನು ನೀಡಲಾಗಿದ್ದು, ರಾಜ್ಯ ಪರಿಸರ ಮತ್ತು ಜೀವಿ ಪರಿಸ್ಥಿತಿ ಇಲಾಖೆಯು ತನ್ನ ಆದೇಶ ಸಂಖ್ಯೆ ಎಫ್‌ಇಇ:೪೬ ಇಎನ್‌ವಿ:೨೦೦೦, ಬೆಂಗಳೂರು ದಿನಾಂಕ :೨೯.೦೧.೨೦೦೪ ರಂತೆ ಪ್ರತಿ ಜಿಲ್ಲೆಯಲ್ಲಿ ಈಗಾಗಲೇ ಸ್ಥಾಪಿತಗೊಂಡಿರುವ ಜಿಲ್ಲಾ ಪರಿಸರ ಸಂರಕ್ಷಣಾ ಪ್ರಾಧಿಕಾರಕ್ಕೆ ಶಬ್ದ ಮಾಲಿನ್ಯ ನಿಯಂತ್ರಣ ಕಾರ್ಯವನ್ನು ವಹಿಸಲಾಗಿದೆ ಎಂದು ಈ ಸಂಬಂಧದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Warehouses may be seized if there is a stockpile of banned fireworks.

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸರು ಕಿರುಕುಳ ಖಂಡಿಸಿ ಬೀರೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಬೀರೂರು:  ಪ್ರೇಮಿಗಳು ನಾಪತ್ತೆಯಾಗಲು ಸಹಕಾರ ನೀಡಿದ್ದ ಎಂಬ ಆರೋಪದ ಮೇಲೆ ಯುವಕನನ್ನು ಠಾಣೆಗೆ ಕರೆಸಿ ಪೊಲೀಸರು ಕಿರುಕುಳ ನೀಡಿದ್ದರಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ಯುವಕನ ಸಂಬಂಧಿಕರು ಹಾಗೂ ದಲಿತ...

ಮಹಮದ್ ಅನ್ವರ್ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಚಿಕ್ಕಮಗಳೂರು : ಕಳೆದ ಎಂಟು ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸಿದ್ದ ಕೇಬಲ್ ನೆಟ್‌ವರ್ಕ್ ಉದ್ಯಮಿ ಉಪ್ಪಳ್ಳಿಯ ಮಹಮದ್ ಅನ್ವರ್ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವ ಮೂಲಕ ಆರೋಪಿಗಳನ್ನು ಪತ್ತೆ...

Related Articles

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...