Home State News ‘Boys V/S Girls’ on Maja Talkies:‘ಬಾಯ್ಸ್ V/S ಗರ್ಲ್ಸ್’ ಮಜಾ ಟಾಕೀಸ್ ಕಲರ್‌ಫುಲ್‌ ಕಲರವ ಕಲರ್ಸ್‌ನಲ್ಲಿ ನೋಡಿ
State News

‘Boys V/S Girls’ on Maja Talkies:‘ಬಾಯ್ಸ್ V/S ಗರ್ಲ್ಸ್’ ಮಜಾ ಟಾಕೀಸ್ ಕಲರ್‌ಫುಲ್‌ ಕಲರವ ಕಲರ್ಸ್‌ನಲ್ಲಿ ನೋಡಿ

Share
‘ಬಾಯ್ಸ್ V/S ಗರ್ಲ್ಸ್’ ಮಜಾ ಟಾಕೀಸ್
‘ಬಾಯ್ಸ್ V/S ಗರ್ಲ್ಸ್’ ಮಜಾ ಟಾಕೀಸ್
Share

ಜನಪ್ರಿಯ ಟಿವಿ ಚಾನೆಲ್ ಕಲರ್ಸ್ ಕನ್ನಡವು ಎರಡು ಹೊಸ ರಿಯಾಲಿಟಿ ಶೋಗಳನ್ನು ಶುರುಮಾಡುತ್ತಿದೆ. ‘ಬಾಯ್ಸ್ V/S ಗರ್ಲ್ಸ್’ ಎಂಬ ಗೇಮ್ ಶೋ ಮತ್ತು ಕಚಗುಳಿಯಿಟ್ಟು ನಗಿಸುವ ‘ಮಜಾ ಟಾಕೀಸ್’ ಶೋಗಳು ಫೆಬ್ರವರಿ 1ರಿಂದ ಪ್ರಸಾರ ಆರಂಭಿಸಲಿವೆ. ಪ್ರತಿ ಶನಿವಾರ ಮತ್ತು ಭಾನುವಾರ ಏಳೂವರೆಗೆ ‘ಬಾಯ್ಸ್ V/S ಗರ್ಲ್ಸ್’ ಹಾಗೂ 9 ಗಂಟೆಗೆ ʼಮಜಾ ಟಾಕೀಸ್ʼ ಕಾರ್ಯಕ್ರಮಗಳು ನಿಮ್ಮನ್ನು ರಂಜಿಸಲಿವೆ.

‘ಬಾಯ್ಸ್ V/S ಗರ್ಲ್ಸ್’

ಹೊಸ ರೀತಿಯ ರಿಯಾಲಿಟಿ ಶೋಗಳಿಗೆ ಹೆಸರಾಗಿರುವ ಕಲರ್ಸ್ ಕನ್ನಡ ಶುರುಮಾಡುತ್ತಿರುವ ‘ಬಾಯ್ಸ್ V/S ಗರ್ಲ್ಸ್’ ಒಂದು ರೋಮಾಂಚಕ ಗೇಮ್ ಶೋ. ಹುಡುಗ ಮತ್ತು ಹುಡುಗಿಯರ ಗುಂಪುಗಳು ಜಿದ್ದಾಜಿದ್ದಿಗೆ ಬಿದ್ದು ನೋಡುಗರ ಬಿಸಿ ಏರಿಸುವ ಆಟದ ಶೋ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಕನ್ನಡ ಕಿರುತೆರೆಗೆ ಹೊಸದೆನಿಸುವ ಥ್ರಿಲ್ ಅನ್ನು ಹೊತ್ತು ತರಲಿದೆ.

ಬಾಯ್ಸ್ ತಂಡವನ್ನು ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮುನ್ನಡೆಸಿದರೆ, ಹುಡುಗಿಯರ ಗುಂಪಿನ ನಾಯಕಿ ನಟಿ ಶುಭಾ ಪೂಂಜಾ. ಇನ್ನು ಸ್ಪರ್ಧಿಗಳ ಪಟ್ಟಿಯೂ ಅಷ್ಟೇ ರೋಚಕವಾಗಿದೆ. ಈಗಷ್ಟೇ ಬಿಗ್ ಬಾಸ್ ಗೆದ್ದಿರುವ ಹನುಮಂತ ಲಮಾಣಿ, ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆಯುವಂಥ ಆಟವಾಡಿದ ಧನರಾಜ್ ಆಚಾರ್, ಐಶ್ವರ್ಯಾ ಶಿಂದೊಗಿ, ಶೋಭಾ ಶೆಟ್ಟಿ, ಚೈತ್ರಾ ಕುಂದಾಪುರ ಮತ್ತು ರಜತ್ ಕೂಡ ಇಲ್ಲಿ ನಿಮಗೆ ಸಿಗುತ್ತಾರೆ. ಜೊತೆಗೆ ಕಿರುತೆರೆಯ ಜನಪ್ರಿಯ ಮುಖಗಳಾದ ಪ್ರಶಾಂತ್, ಮಂಜು ಪಾವಗಡ, ನಿವೇದಿತಾ ಗೌಡ, ಸೂರಜ್, ವಿಶ್ವಾಸ್, ಸ್ನೇಹಿತ್, ವಿವೇಕ್ ಸಿಂಹ, ರಕ್ಷಿತ್, ಚಂದನ, ರಮ್ಯ, ಪ್ರಿಯಾ ಸವಡಿ, ಸ್ಪಂದನಾ ಮತ್ತು ಐಶ್ವರ್ಯಾ ವಿನಯ್ ಕೂಡ ಆಟಕ್ಕೆ ಕಿಚ್ಚು ಹಚ್ಚಲಿದ್ದಾರೆ. ಈ ಪಟ್ಟಿಯನ್ನೊಮ್ಮೆ ನೋಡಿದರೂ ಸಾಕು, ಆಟದ ಬಿಸಿ ಎಷ್ಟಿರುತ್ತೆ ಎಂಬುದನ್ನು ಊಹಿಸಬಹುದು.

ಶೋನ ಉದ್ದಕ್ಕೂ ಸ್ಪರ್ಧಿಗಳಿಗೆ ರೋಚಕ ಸವಾಲುಗಳಿರುತ್ತವೆ. ಹುಡುಗ ಹುಡುಗಿಯರು ತಮ್ಮ ಚಾಕಚಕ್ಯತೆ, ಸೃಜನಶೀಲತೆ ಮತ್ತು ಒಟ್ಟಾಗಿ ಆಡುವ ಮನೋಭಾವದಿಂದ ಈ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಗೇಮುಗಳ ಜೊತೆಗೆ ನೃತ್ಯ ಸೇರಿದಂತೆ ಉಳಿದ ಟಾಸ್ಕುಗಳೂ ಇಲ್ಲಿರುತ್ತವೆ.
ಇವೆಲ್ಲದರ ಜೊತೆಗೆ ಹಳ್ಳಿ ಸೆಟಪ್, ಕಾಲೇಜ್ ಸೆಟಪ್ ನಂಥ ಮೋಜಿನ ಥೀಮುಗಳೂ ನಿಮ್ಮನ್ನು ಈ ಶೋನಲ್ಲಿ ರಂಜಿಸಲಿವೆ. ಚುರುಕು ಬುದ್ಧಿ ಹಾಗೂ ದೈಹಿಕ ಶಕ್ತಿಗಳೆರಡನ್ನೂ ಒಟ್ಟಿಗೆ ಪರೀಕ್ಷೆಗೊಳಪಡಿಸುವ ‘ಬಾಯ್ಸ್ V/S ಗರ್ಲ್ಸ್’ ನ ಪ್ರತಿ ಸಂಚಿಕೆಯನ್ನೂ ವೀಕ್ಷಕರನ್ನು ತುದಿಗಾಲಲ್ಲಿ ಕೂರಿಸಲು ತಕ್ಕಂತೆ ರೂಪಿಸಲಾಗಿದೆ.

‘ಬಾಯ್ಸ್ V/S ಗರ್ಲ್ಸ್’ ಶೋನ ನಿರೂಪಣೆಯ ಹೊಣೆ ಹೊತ್ತಿರುವುದು ಚೈತನ್ಯದ ಚಿಲುಮೆ ಅನುಪಮಾ ಗೌಡ. ವಿನೂತನ ಫಾರ್ಮ್ಯಾಟ್ ಮತ್ತು ವಿಭಿನ್ನ ಸವಾಲುಗಳಿಂದ ಸಿದ್ಧಗೊಂಡಿರುವ ‘ಬಾಯ್ಸ್ V/S ಗರ್ಲ್ಸ್’ ನೋಡಲು ಮರೆಯಬೇಡಿ.

ಮಜಾ ಟಾಕೀಸ್

ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಸಾರಥ್ಯದಲ್ಲಿ ಈಗಾಗಲೇ ಮೂರು ಯಶಸ್ವೀ ಸೀಸನ್ನುಗಳನ್ನು ಮುಗಿಸಿರುವ ‘ಮಜಾ ಟಾಕೀಸ್’ ಇದೀಗ ಮತ್ತೊಂದು ಹೊಸ ಸೀಸನ್ ಗೆ ತಯಾರಾಗಿದೆ. ಎಲ್ಲ ವಯಸ್ಸಿನ ವೀಕ್ಷಕರನ್ನೂ ಮರುಳು ಮಾಡುವ ಮಾತುಗಾರ ಸೃಜನ್ ಈ ಹೊಸ ಸೀಸನ್ನಿಗೆ ಹಲವು ಹೊಸ ಸಂಗತಿಗಳನ್ನು ಸೇರಿಸಿರುವುದು ಅಭಿಮಾನಿಗಳ ಕುತೂಹಲ ಕೆರಳಿಸಿದೆ.

ಮಜಾ ಮನೆಗೆ ಈ ಸಲ ಹೊಸ ಅತಿಥಿಗಳ ದಂಡೇ ಬಂದಿಳಿದಿದೆ. ವಿಶೇಷ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿರುವ ನಿರ್ದೇಶಕ ಯೋಗರಾಜ ಭಟ್ರು ತಮ್ಮದೇ ಶೈಲಿಯ ಹುಡುಗಾಟಿಕೆಯನ್ನು ತಂದಿದ್ದಾರೆ. ಮಜಾ ಟಾಕೀಸಿನ ಹಳೇ ಹುಲಿಗಳಾದ ಕುರಿ ಪ್ರತಾಪ್ ಮತ್ತು ವಿಶ್ವ ತಮ್ಮ ಎಂದಿನ ತಮಾಷೆ ಮಾತುಗಳೊಂದಿಗೆ ತಯಾರಾಗಿದ್ದಾರೆ. ಅವರ ಪಂಚ್ ತುಂಬಿದ ಡೈಲಾಗುಗಳು ಮತ್ತು ಆಂಗಿಕ ಅಭಿನಯ ನಿಮ್ಮನ್ನು ಎಂದೂ ನಿರಾಸೆಗೊಳಿಸುವುದಿಲ್ಲ.
ಈ ಸಲದ ಮಜಾ ಟಾಕೀಸಿನಲ್ಲಿ ಹಲವು ಹೊಸ ಪಾತ್ರಗಳು ನಿಮ್ಮನ್ನು ಎದುರಾಗಲಿವೆ. ತಲೆ ತಿನ್ನುವ ಸೆಕ್ಯುರಿಟಿ ಗಾರ್ಡ್ ಆಗಿ ತುಕಾಲಿ ಸಂತೋಷ್, ವೈರಲ್ ಸೋಶಿಯಲ್ ಮೀಡಿಯಾ ಸೆನ್ಸೇಶನ್ ಆಗಿ ಪಿಕೆ ನಿಮ್ಮನ್ನು ರಂಜಿಸಿದರೆ, ಎದುರು ಮನೆಯ ಕಿರಿಕ್ ಅಜ್ಜಿಯಾಗಿ ಚಂದ್ರಪ್ರಭಾ ಎಲ್ಲರನ್ನೂ ಕಾಡಲಿದ್ದಾರೆ. ಕಲರ್ಸ್ ನ ಮತ್ತೊಂದು ಸುಪರ್ ಹಿಟ್ ಶೋ ‘ಗಿಚ್ಚಿಗಿಚ್ಚಿ ಗಿಲಿಗಿಲಿ’ಯ ಪ್ರತಿಭೆಗಳಾದ ಶಿವು, ವಿನೋದ್ ಗೊಬ್ಬರಗಾಲ, ಸೌಮ್ಯ ಮತ್ತು ಪ್ರಿಯಾಂಕಾ ಕಾಮತ್ ನಿಮ್ಮನ್ನು ಎಡೆಬಿಡದೆ ನಗಿಸಲಿದ್ದಾರೆ.

ಇವರಷ್ಟೇ ಅಲ್ಲದೆ, ದೀಪಾ ಭಾಸ್ಕರ್, ಮಿಮಿಕ್ರಿ ಗೋಪಿ, ಶ್ರೀ ಭವ್ಯ ಮತ್ತು ಅಗ್ನಿಸಾಕ್ಷಿ ಖ್ಯಾತಿಯ ಪ್ರಿಯಾಂಕ ಕೂಡ ನಿಮ್ಮ ಖುಷಿಯನ್ನು ದುಪ್ಪಟ್ಟು ಮಾಡಲು ಕಾದಿದ್ದಾರೆ. ಇಷ್ಟೊಂದು ಹೊಸ ಮುಖಗಳನ್ನು ಸ್ವಾಗತಿಸಲು ಮಜಾ ಮನೆ ಕೂಡ ಹೊಸ ರೂಪದಲ್ಲಿ ನವೀಕರಣಗೊಂಡು ಮಧುಮಗಳಂತೆ ಸಿಂಗರಿಸಿಕೊಂಡು ಸಜ್ಜಾಗಿದೆ.

ಬರೀ ಮನೆಯೊಳಗಿನ ಪಾತ್ರಗಳಷ್ಟೇ ಅಲ್ಲ, ಈ ಸೀಸನ್ನಿನಲ್ಲಿ ಮಜಾ ಮನೆಗೆ ಬರಲಿರುವ ಅತಿಥಿಗಳ ಪಟ್ಟಿಯೂ ಹೊಸ ರೀತಿ ಇರಲಿದೆ. ಚಿತ್ರ ತಾರೆಗಳಷ್ಟೇ ಅಲ್ಲದೆ, ಈ ಸಲ ಮಜಾ ಮನೆಗೆ ವಿವಿಧ ಕ್ಷೇತ್ರಗಳ ಜನಪ್ರಿಯ ಸಾಧಕರು ಅತಿಥಿಗಳಾಗಿ ಬರಲಿದ್ದಾರೆ. ಕ್ರೀಡಾ ತಾರೆಗಳು, ರಾಜಕಾರಣಿ, ಉದ್ಯಮಿಗಳನ್ನು ಸಹ ನೀವಿಲ್ಲಿ ಎದುರು ನೋಡಬಹುದು. ಅವರ ಜೀವನಾನುಭವದ ಮಾತುಗಳನ್ನು ಕಚಗುಳಿಯಿಡುವ ಮಾತುಕತೆಯ ಮುಖಾಂತರ ಹೊರ ಹಾಕಲಿದ್ದಾರೆ ನಿರೂಪಕ ಸೃಜನ್ ಲೋಕೇಶ್.

ಈಗಾಗಲೇ ಬಿಡುಗಡೆಯಾಗಿರುವ ಮಜಾಟಾಕೀಸ್ ನ ಪ್ರೊಮೊ ಜನರ ಮೆಚ್ಚುಗೆ ಗಳಿಸಿ, ಅವರ ಕುತೂಹಲ ಕೆರಳಿಸಿ ತುದಿಗಾಲಲ್ಲಿ ನಿಲ್ಲಿಸಿದೆ. ಇನ್ನು ನಿಮ್ಮ ವಾರಾಂತ್ಯಗಳಿಗೆ ನಗುವಿನ ಬಣ್ಣ ಬರುವುದರಲ್ಲಿ ಸಂಶಯವೇ ಇಲ್ಲ.

Watch ‘Boys V/S Girls’ on Maja Talkies’ Colorful Kalarava Colors

Share

Leave a comment

Leave a Reply

Your email address will not be published. Required fields are marked *

Don't Miss

ನರಹಂತಕ ಆನೆ ಸೆರೆಗೆ ಸಾಕಾನೆಗಳ ತಂಡ ಆಗಮನ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಕಾರ್ಮಿಕ ಬಲಿ; ಸೆರೆಗೆ ಸಾಕಾನೆಗಳ ತಂಡ ಆಗಮನ ಚಿಕ್ಕಮಗಳೂರು ತಾಲ್ಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಕೂಲಿ ಕಾರ್ಮಿಕ...

ನೈತಿಕ ಪೊಲೀಸ್ ಗಿರಿ ಪ್ರಕರಣ – ಗಂಭೀರವಾಗಿ ಪರಿಗಣನೆ

ಚಿಕ್ಕಮಗಳೂರು: ಕಾಫಿನಾಡಿನ ಸಂತೇ ಮೈದಾನದ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್...

Related Articles

ಕಿಸಿಂಗ್, ಕಿಸಿಂಗ್ ರಾಮಚಂದ್ರ -ಸ್ಮಗ್ಲಿಂಗ್, ಸ್ಮಗ್ಲಿಂಗ್ ರನ್ಯಾ ರಾವ್‌

ಅಪ್ಪ ರಾಮಚಂದ್ರ ರಾವ್ ಗೆ ಚಿನ್ನವೀಡು ಕಾಟ,ಮಲ ಮಗಳು ರನ್ಯಾ ರಾವ್ ಗೆ ಚಿನ್ನ ಕಳವಿನ...

ರಾಮಚಂದ್ರ ರಾವ್ ಅಲಿಯಾಸ್ ಕಾಮುಕ ರಾವ್ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ

ರಾಮಚಂದ್ರ ರಾವ್ ಅಲಿಯಾಸ್ ಕಾಮಚಂದ್ರ ರಾವ್ ನಿವೃತ್ತಿ ಅಂಚಿನಲ್ಲಿ ಕಾಮ ಪುರಾಣದಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಮಾಡಿದ್ದು...

ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ....

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...