Home namma chikmagalur chikamagalur ನರ್ಸ್‌ನಿಂದ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ರೀಲ್ಸ್ ವೀಕ್ಷಣೆ
chikamagalurHomeLatest Newsnamma chikmagalur

ನರ್ಸ್‌ನಿಂದ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ರೀಲ್ಸ್ ವೀಕ್ಷಣೆ

Share
Share

ಎನ್.ಆರ್.ಪುರ : ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರವೀಗ ರೀಲ್ಸ್ ಅಡ್ಡವಾಗಿ ಮಾರ್ಪಟ್ಟಿದೆ. ರೋಗಿಗಳ ಸೇವೆಯಲ್ಲಿ ನಿರತರಾಗಬೇಕಿದ್ದ ನರ್ಸ್‌ಗಳು ಆಸ್ಪತ್ರೆಯ ಬೆಡ್ ಗಳ ಮೇಲೆಯೇ ಮಲಗಿ ಮೊಬೈಲ್‌ನಲ್ಲಿ ರೀಲ್ಸ್ ನೋಡುವುದರಲ್ಲಿ ಮಗ್ನರಾಗಿರುವ ಆಘಾತಕಾರಿ ದೃಶ್ಯಗಳು ಬೆಳಕಿಗೆ ಬಂದಿವೆ.

ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ರೋಗಿಗಳು ನೋವಿನಿಂದ ನರಳುತ್ತಿದ್ದರೂ, ಅದಾವುದರ ಪರಿವೆಯಿಲ್ಲದ ನರ್ಸ್‌ಗಳು ತಮ್ಮದೇ ಲೋಕದಲ್ಲಿ ಮುಳುಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿನ ಸಿಬ್ಬಂದಿ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಒಂದೆರಡಲ್ಲ. ಮಧ್ಯಾಹ್ನ ಊಟಕ್ಕೆಂದು ಮನೆಗೆ ತೆರಳುವ ನರ್ಸ್‌ಗಳು ಮತ್ತೆ ಆಸ್ಪತ್ರೆಯ ಕಡೆಗೆ ಮುಖ ಮಾಡುವುದೇ ಅಪರೂಪ ಎಂಬ ದೂರಿದೆ. ಒಂದು ವೇಳೆ ಕೆಲಸಕ್ಕೆ ಬಂದರೂ ವೈದ್ಯರ ಅನುಪಸ್ಥಿತಿಯಲ್ಲಿ ರೀಲ್ಸ್ ನೋಡುವುದನ್ನೇ ತಮ್ಮ ಮುಖ್ಯ ಕರ್ತವ್ಯವಾಗಿಸಿಕೊಂಡಿದ್ದಾರೆ.

ಚಿಕಿತ್ಸೆಗಾಗಿ ರೋಗಿಗಳು ದಾವಿಸಿದರೆ, ಕನಿಷ್ಠ ಸೌಜನ್ಯವೂ ಇಲ್ಲದೆ “ಡಾಕ್ಟರ್ ಬರ್ತಾರೆ, ಅಲ್ಲಿಯವರೆಗೆ ಸುಮ್ಮನೆ ಕುಳಿತುಕೊಳ್ಳಿ” ಎಂದು ಗದರಿಸುವ ಪ್ರವೃತ್ತಿ ಬೆಳೆದಿದೆ. ಇನ್ನು ಕೆಲವೊಮ್ಮೆ ಬೇಜವಾಬ್ದಾರಿಯ ಪರಮಾವಧಿ ಎಂಬಂತೆ, ಮೊಬೈಲ್ ನೋಡುತ್ತಲೇ ಪಕ್ಕದಲ್ಲಿರುವ ಮತ್ತೊಬ್ಬ ನರ್ಸ್ ಬಳಿ ಹೋಗುವಂತೆ ರೋಗಿಗಳನ್ನು ಅಲೆದಾಡಿಸುತ್ತಿದ್ದಾರೆ ಎನ್ನಲಾಗಿದೆ.

ವೈದ್ಯರ ನಿರ್ಲಕ್ಷ್ಯ ಮತ್ತು ನರ್ಸ್‌ಗಳ ಈ ಅತಿಯಾದ ಮೊಬೈಲ್ ವ್ಯಾಮೋಹದಿಂದಾಗಿ ಬಡ ರೋಗಿಗಳು ಹೈರಾಣಾಗಿದ್ದಾರೆ. ನರ್ಸ್ ಒಬ್ಬರು ಬೆಡ್ ಮೇಲೆ ಮಲಗಿ ಆರಾಮವಾಗಿ ರೀಲ್ಸ್ ವೀಕ್ಷಿಸುತ್ತಿರುವ ದೃಶ್ಯವನ್ನು ರೋಗಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಇಂತಹ ಸಿಬ್ಬಂದಿಗಳ ವಿರುದ್ಧ ಜಿಲ್ಲಾ ಆರೋಗ್ಯ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Watching reels while lying on a hospital bed by a nurse

Share

Leave a comment

Leave a Reply

Your email address will not be published. Required fields are marked *

Don't Miss

ಕನ್ನಡದ ಸಂಯೋಜಕ ಪ್ರತಿಭೆ ತೇಜಸ್ವಿ

ಕೊಟ್ಟಿಗೆಹಾರ: ಪೋಟೋಗ್ರಾಫಿ, ಫಿಶಿಂಗ್, ಪೈಂಟಿಂಗ್, ಸಾಹಿತ್ಯ ಹೀಗೆ ನಾನಾ ಬಗೆಯ ಆಸಕ್ತಿ ಕುತೂಹಲಗಳಿದ್ದ ತೇಜಸ್ವಿ ಅವರು ಕನ್ನಡದ ಸಂಯೋಜಕ ಪ್ರತಿಭೆ ಎಂದು ವಿಮರ್ಶಕ, ಲೇಖಕ ಡಾ.ಎಚ್.ಎಸ್.ಸತ್ಯನಾರಾಯಣ ಹೇಳಿದರು. ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ...

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮ ಯಶಸ್ಸಿಗೆ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಏಪ್ರಿಲ್ ೧೩ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಮಾಡಲಿದ್ದಾರೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ...

Related Articles

ಅಂಬೇಡ್ಕರ್ ಜಯಂತಿಗೆ ಅಡ್ಡಿ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಚಿಕ್ಕಮಗಳೂರು: ಮರ್ಲೆಹೊಸಕೋಟೆಯಲ್ಲಿ ಕಂದಾಯ ಜಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲು ಮುಂದಾಗಿದ್ದಾಗ ಧ್ವಜಗಳನ್ನು ತೆರವುಗೊಳಿಸಿದ ಗ್ರಾಮಲೆಕ್ಕಿಗರು ಮತ್ತು...

ಜಮೀನಿನ ನಕಲಿ ದಾಖಲೆ ಸೃಷ್ಟಿಸಿ ವಂಚನೆ

ಚಿಕ್ಕಮಗಳೂರು: ಕಡೂರು ತಾಲೂಕು ಪಂಚನಹಳ್ಳಿ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ತಮ್ಮ ಪಿತ್ರಾರ್ಜಿತ ಆಸ್ತಿಗೆ ನಕಲಿ ದಾಖಲೆಯನ್ನು...

ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ 80 ರೈತರಿಗೆ ವಂಚನೆ

ಕಡೂರು : ಸರಕಾರದ ವಿವಿಧ ಇಲಾಖೆಗಳಡಿ ದೊರೆಯುವ ಸಬ್ಸಿಡಿ ಸವಲತ್ತುಗಳನ್ನು ಕೊಡಿಸುವುದಾಗಿ ನಂಬಿಸಿ ೮೦ ಜನ...

ಸರ್ಫೇಸಿ ಕಾಯ್ದೆ ವಿರೋಧಿಸಿ ಏ. 22ರಂದು ಪ್ರತಿಭಟನೆ

ಚಿಕ್ಕಮಗಳೂರು: ಸರ್ಫೇಸಿ ಕಾಯ್ದೆ ವಿರೋಧಿಸಿ ಏ. 22ರಂದು ಬೆಳಿಗ್ಗೆ 11ಗಂಟೆಗೆ ನಗರದ ಸಂಸತ್ ಸದಸ್ಯರ ಕಚೇರಿ...