ತರೀಕೆರೆ: ತೋಟದ ಬೇಲಿ ಕಟಾವು ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಾಚ್ಮನ್ ಮೃತಪಟ್ಟಿರುವ ಘಟನೆ ತರೀಕೆರೆ ಪಟ್ಟಣದ ಗಾಳಿಹಳ್ಳಿ ಕ್ರಾಸ್ನಲ್ಲಿ ಆ.20ರಂದು ನಡೆದಿದೆ.
ಮೃತರನ್ನು ಲಿಂಗದಹಳ್ಳಿ ಕಾವಲ್ ಆರ್.ಸಿ. ಕಾಲೋನಿ ನಿವಾಸಿ ಪ್ರಸನ್ನ ಎಂದು ಗುರುತಿಸಲಾಗಿದೆ. ಅವರು ಕಳೆದ 17 ವರ್ಷಗಳಿಂದ ಗಾಳಿಹಳ್ಳಿ ಕ್ರಾಸ್ನಲ್ಲಿರುವ ವಿಕಾಸನ ಸಂಸ್ಥೆಯಲ್ಲಿ ವಾಚ್ಮನ್ ಆಗಿ ಕೆಲಸ ಮಾಡುತ್ತಿದ್ದರು.
ಆ.20ರಂದು ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದ ಪ್ರಸನ್ನ ಅವರು ಸಂಜೆ ವಿಕಾಸನ ಸಂಸ್ಥೆಯ ಮುಖ್ಯಸ್ಥ ವರ್ಗಿಸ್ ಅವರ ಮನೆಯ ಸಮೀಪದ ತೋಟದ ಬೇಲಿ ಕಟಾವು ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ನೆಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ವರ್ಗಿಸ್ ಅವರು ಪ್ರಸನ್ನ ಅವರ ಕುಟುಂಬದವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದ್ದು, ಬಳಿಕ ಪುತ್ರರಾದ ಸಾಗರ್ ಮತ್ತು ಕಾರ್ತಿಕ್ ಸ್ಥಳಕ್ಕೆ ತೆರಳಿ ತಂದೆಯನ್ನು ಅಂಬ್ಯುಲೆನ್ಸ್ ಮೂಲಕ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಪರಿಶೀಲಿಸಿದ ವೈದ್ಯರು ಪ್ರಸನ್ನ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ದೂರಿನಲ್ಲಿ, ತೋಟದ ಬೇಲಿಯ ಮೇಲೆಯೇ ವಿದ್ಯುತ್ ಮುಖ್ಯ ತಂತಿ ಹಾದು ಹೋಗಿರುವುದು ಗೊತ್ತಿದ್ದರೂ, ಯಾವುದೇ ಮುಂಜಾಗ್ರತಾ ಹಾಗೂ ಸುರಕ್ಷತಾ ಕ್ರಮ ಕೈಗೊಳ್ಳದೆ ಬೇಲಿ ಕಟಾವು ಕೆಲಸ ಮಾಡಿಸಿದ್ದರಿಂದ ವಿದ್ಯುತ್ ಸ್ಪರ್ಶಿಸಿ ತಂದೆ ಮೃತಪಟ್ಟಿದ್ದಾರೆ ಎಂದು ಮೃತರ ಪುತ್ರ ಆರೋಪಿಸಿದ್ದಾರೆ.
ಈ ಸಂಬಂಧ ಪ್ರಸನ್ನ ಅವರ ಸಾವಿಗೆ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ವರ್ಗಿಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಠಾಣಾ ಮೊ.ನಂ. 211/2026ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Watchman dies of electrocution while trimming fence
ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ ಸುಮಾರು ₹1.70 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನರಸಿಂಹರಾಜಪುರ...
ByN Raju Chief EditorAugust 14, 2026ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ ಫೈನಾನ್ಸ್ ಕಚೇರಿಗೆ ಬೀಗ ಹಾಕಿ ಮಾಲೀಕರು ನಾಪತ್ತೆಯಾಗಿರುವ ಆರೋಪದಡಿ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ...
ByN Raju Chief EditorAugust 14, 2026ಚಿಕ್ಕಮಗಳೂರು: ಇಲ್ಲಿನ ತಾಲ್ಲೂಕು ಕಛೇಯಲ್ಲಿ ಸರ್ವೆಯರ್ ಧೊರೆರಾಜು ಮತ್ತು ರಂಗನಾಥ್ ರವರು 2 ಲಕ್ಷರೂಗಳ ಲಂಚ...
ByN Raju Chief EditorAugust 22, 2026ಅಜ್ಜಂಪುರ: ಕರ್ತವ್ಯಕ್ಕೆ ತೆರಳುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಶುವೈದ್ಯಕೀಯ ಇಲಾಖೆಯ ಅಟೆಂಡರ್...
ByN Raju Chief EditorAugust 22, 2026ಕಡೂರು: ವ್ಯಾಪಾರಕ್ಕಾಗಿ ಕಡಿಮೆ ಬೆಲೆಯಲ್ಲಿ ಬಟ್ಟೆಗಳನ್ನು ಖರೀದಿಸಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹17.58 ಲಕ್ಷ ಪಡೆದು,...
ByN Raju Chief EditorAugust 21, 2026ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲೂಕಿನ ತಿಮ್ಮಾಪುರ ಸಮೀಪದ ಗೆಜ್ಜೆಗೊಂಡನಹಳ್ಳಿ ಹಾಗೂ ಕಡೂರು ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ...
ByN Raju Chief EditorAugust 21, 2026Excepteur sint occaecat cupidatat non proident
Leave a comment