Home Crime News ಕಿತ್ತೂರು ಚೆನ್ನಮ್ಮ ಶಾಲೆಯ ಗೋಧಿ ಹೆಗ್ಗಣಗಳು
Crime NewsHomeLatest Newsnamma chikmagalurTarikere

ಕಿತ್ತೂರು ಚೆನ್ನಮ್ಮ ಶಾಲೆಯ ಗೋಧಿ ಹೆಗ್ಗಣಗಳು

Share
Share

ತರೀಕೆರೆ: ಇಲ್ಲಿಗೆ ಸಮೀಪದ ನಂದಿ ಹೊಸಹಳ್ಳಿಯ ಕಿತ್ತೂರು ಚೆನ್ನಮ್ಮವಸತಿ ಶಾಲೆಯಲ್ಲಿ ಗೋಧಿ ತಿನ್ನುವ ಹೆಗ್ಗಣಗಳಿವೆ.ಮಕ್ಕಳ ಆಹಾರ ಕದ್ದು ತಿನ್ನುವ ಹೆಗ್ಗಣಗಳು 70 ಕ್ವಿಂಟಾಲ್ ನಷ್ಟು ಗೋಧಿಯನ್ನು ಶಾಲೆಯ ಬಳಿ ಗುಂಡಿ ತೆಗೆಸಿ ಮುಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ.

ಹರೀಶ್ ಎಂಬುವನು ಈ ಶಾಲೆಯಲ್ಲಿ ಮುಖ್ಯಸ್ಥನಾದ ಸಮಯದಲ್ಲಿ ಕಳ್ಳತನ ಮಾಡಿ ರಾತ್ರೋರಾತ್ರಿ ಗೋಧಿಯನ್ನು ಮಾರಲು ಗುಂಡಿ ತೆಗೆಸಿ ಮುಚ್ಚಿಟ್ಟದ್ದಾನೆ ಎನ್ನಲಾಗುತ್ತಿದೆ.ಈ ವಿಷಯ ಗ್ರಾಮದ ಹಲವರಿಗೆ ತಿಳಿದಿದ್ದು ಸಂಭಂಧ ಪಟ್ಟ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಸ್ಥಳಕ್ಕೆ ಬಂದ ಅಧಿಕಾರಿಗಳು ಗುಂಡಿ ತೆಗೆಸಿದ್ದ ಜಾಗದ ಬಳಿ ಆಗೆಸಿ ನೋಡಿದಾಗ ಗೋಧಿ ಮುಚ್ಚಿಟ್ಟಿರುವುದು ಪತ್ತೆಯಾಗಿದೆ.ಮಕ್ಕಳಿಗೆ ಚಾಪತಿ ಮಾಡಿಕೊಡಬೇಕಾದ ಗೋಧಿಯನ್ನು ಮಾರಾಟ ಮಾಡಲು ಈ ರೀತಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಗುಂಡಿ ಅಗೆಯಲು ಸ್ಥಳೀಯರನ್ನು ಬಳಸಿಕೊಂಡು ಈ ರೀತಿಯ ಕೃತ್ಯ ನಡೆಸಿರುವ ಹರೀಶ್ ಮೇಲೆ ಕಠಿಣ ಕ್ರಮ ಕೈಗೊಳ್ಳ ಬೇಕು ಎಂದು ಸ್ಥಳೀಯರ ಜೊತೆಗೆ ಪೋಷಕರು ಒತ್ತಾಯ ಮಾಡಿದ್ದಾರೆ.

ಹರೀಶ್ ಒಬ್ಬನೇ ಈ ಕೃತ್ಯ ನಡೆಸಿಲ್ಲ ಸಿಬ್ಬಂದಿ ಕೈ ಜೋಡಿಸಿ ದ್ದಾರೆ ಎನ್ನಲಾಗಿದೆ. ಮಕ್ಕಳ ಆಹಾರ ಕದಿಯುವ ಖದೀಮರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯ ಮಾಡಿದ್ದಾರೆ.

Wheat fields of Kitturchennamma School

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....