Home namma chikmagalur chikamagalur ಅಧಿಕಾರ ಎಂಬ ಮಾಯಾ ಜಿಂಕೆ ಮರೆಯಾಗಿದ್ದು ಏಕೆ ?
chikamagalurHomeLatest Newsnamma chikmagalur

ಅಧಿಕಾರ ಎಂಬ ಮಾಯಾ ಜಿಂಕೆ ಮರೆಯಾಗಿದ್ದು ಏಕೆ ?

Share
Share

ಚಿಕ್ಕಮಗಳೂರು: ಕಳೆದ ನಾಲ್ಕು ವರೆ ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಸದಸ್ಯರಾಗ ಬೇಕಿದ್ದ ಗಾಯಿತ್ರಿ ಶಾಂತೇಗೌಡ ಅಧಿಕಾರ ಪಡೆಯಲು ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ಕೋಟ್ಯಾಂತರ ಹಣ ಖರ್ಚು ಮಾಡಿ ನ್ಯಾಯಲಯದ ಮೂಲಕ ವಿಧಾನ ಪರಿಷತ್ ಸದಸ್ಯರಾದರು.

ಇಂದು, ನಾಳೆ ಎಂದು ಫಲಿತಾಂಶಕ್ಕೆ ಕಾದವರು ಮೂರು ನಾಲ್ಕು ಬಾರಿ ಪಟಾಕಿ ಸಿಡಿಸಿ,ಹೂವು ಹಾರ,ತುರಾಯಿಯೊಂದಿಗೆ ಅವರ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದ ಅಮರ ನೆನಪುಗಳು ಕಮರಿ ಹೋಗುವ ಸಮಯದಲ್ಲಿ ಇನ್ನುಳಿದ ಒಂದು ವರೆ ವರ್ಷಗಳ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಅಧಿಕಾರ ಸ್ವೀಕರಿಸಲು ರಾಜಧಾನಿ ಗೆ ಹೋಗುವ ಮೊದಲು ಉಪ ಸಭಾಪತಿ ಗ್ಯಾರಂಟಿ ಎನ್ನುವಾಗ ದೆಹಲಿ ಹೈಕಮಾಂಡ್ ಲಿಸ್ಟ್ ನಲ್ಲಿ ಮಂತ್ರಿ ಸ್ಥಾನಕ್ಕೆ ಗಾಯಿತ್ರಿ ಶಾಂತೇಗೌಡರ ಹೆಸರು ಬಂದಿದ್ದು ನೋಡಿ ” ಅಧಿಕಾರದ ಮಾಯಾ ಜಿಂಕೆ “ಅಂಗೇ ಬಂದು ಈಂಗೇ ಹೋಯಿತು. ಎನ್ನುವ ಪರಿಸ್ಥಿತಿ ಬಂದಿತು.ಕಾಂಗ್ರೆಸ್ ನ ಪ್ರಭಾವಿ ಮುಖಂಡ ಸಿದ್ದರಾಮಯ್ಯ ಇದಕ್ಕೆ ತಡೆ ಹಾಕಿದರು ಎಂಬುದು ಬಹಿರಂಗ ಸತ್ಯ.

ಮಂತ್ರಿ ಆಗಿದ್ದು ಹೇಗೆ?
ಬಹಳ ವರ್ಷಗಳ ಹಿಂದಿನಿಂದಲೂ ಗಾಯಿತ್ರಿ ಶಾಂತೇಗೌಡ ರಿಗೆ ರಾಜಕೀಯವಾಗಿ ಅನ್ಯಾಯವಾಗಿದೆ ಎಂದು ಅರಿತಿದ್ದ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಾಯಿತ್ರಿ ಶಾಂತೇಗೌಡ. ಮೇಲ್ಮನೆಯ ವಿಧಾನ ಪರಿಷತ್ ಉಪಸಭಾಪತಿ ಸ್ಥಾನ ಕೊಡಬೇಕು ಎಂಬ ನಿರ್ಣಯ ತೆಗೆದುಕೊಂಡಿದ್ದರು ಎನ್ನುವ ಸಮಯದಲ್ಲಿ ಗಾಯಿತ್ರಿ ಶಾಂತೇಗೌಡರ ಹೆಸರು ಮಂತ್ರಿ ಪಟ್ಟಿಯಲ್ಲಿ ಬಂದಿದ್ದು ನೋಡಿ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದರು ಜೊತೆಗೆ ಅಧಿಕಾರ ಸ್ವೀಕರ ಕಾರ್ಯಕ್ರಮಕ್ಕೆ ಗೈರು ಹಾಜರಾಗಿ ಹೈಕಮಾಂಡ್ ಗೆ ಶೆಡ್ಡು ಹೊಡೆದರು. ಇದರ ಫಲವಾಗಿ ಗಾಯಿತ್ರಿಗೆ ದೊರೆತ ಮಂತ್ರಿ ಸ್ಥಾನಕ್ಕೆ ಕೊಕ್ಕೆ ಹಾಕಲಾಯಿತು. ಇತ್ತಾ ಮಂತ್ರಿ ಸ್ಥಾನ ಪೆಡಿಂಗ್ ಆಗಿದೆ.

ದೂರಿಗೆ ಸಂಬಂಧಿಸಿದಂತೆ‌ ದೆಹಲಿ ಮಟ್ಟದಲ್ಲಿ ಪ್ರಭಾವ ಬೆಳೆಸಿಕೊಂಡಿದ್ದರ ಫಲದ ಜೊತೆಗೆ ವ್ಯವಹಾರ ನಡೆದಿದೆ ಎಂಬ ಸುದ್ದಿ ಮಾತ್ರ ಹರಿದಾಡುತ್ತಿದೆ. ಎಷ್ಟು? ಏನು? ಎಂಬುದು ನಿಗೂಢವಾಗಿ ಉಳಿದಿಲ್ಲ ಕೊಟ್ಟವರಿಗೆ ಮತ್ತು ತೆಗೆದುಕೊಂಡವರಿಗೆ ನಿಖರ ಮಾಹಿತಿ ಇರಬಹುದು.

ವಿಧಾನ ಪರಿಷತ್ ಉಪಸಭಾಪತಿ ಸ್ಥಾನವು ಇಲ್ಲ. ಬೆಳಗ್ಗೆ ಮಂತ್ರಿ ಸ್ಥಾನಕ್ಕೆ ಹೆಸರು ಫೈನಲ್,ಸಂಜೆ ವೇಳೆಗೆ ಪೆಡಿಂಗ್ ಇದಕ್ಕೆ ಹೇಳುವುದು ” ರಾಜಕೀಯ “ಎಂದು ಒಟ್ಟಾರೆ ಜಿಲ್ಲೆಯ ರಾಜಕಾರಣದಲ್ಲಿ ಮಾಯಾ ಜಿಂಕೆ ಓಡಾಡಿದ್ದು ಮಾತ್ರ ಗ್ಯಾರಂಟಿ.

Why has the magical deer of power disappeared?

Share

Leave a comment

Leave a Reply

Your email address will not be published. Required fields are marked *

Don't Miss

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ, ದೇಶದ ಸಾಧನೆಗಳನ್ನು ಸ್ಮರಿಸುವ, ಸ್ವಾತಂತ್ರ್ಯದ ಮೌಲ್ಯಗಳನ್ನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಸಂಕಲ್ಪದ ದಿನವಾಗಬೇಕು...

ಕಸ್ತೂರಿ ರಂಗನ್ ವರದಿ ಮರುಪರಿಶೀಲಿಸಲು ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ವೈಫಲ್ಯದಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ತಕ್ಷಣವೇ ಬರಗಾಲವೆಂದು ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಮಲೆನಾಡಿನ 137 ಗ್ರಾಮಗಳಿಗೆ ಕಂಟಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಪುನಃ ಪರಿಶೀಲಿಸಿ ಜನವಸತಿ...

Related Articles

ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ-ಲೂಟಿಗಾಗಿ ಪೈಪೋಟಿ

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಶಾಸಕರ ನಡುವೆ ಕ್ಷೇತ್ರದ ಅಭಿವೃದ್ಧಿಗೆ ಪೈಪೋಟಿ ನಡೆದರೆ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ,ಲೂಟಿಗಾಗಿ...

ಸ್ವಾವಲಂಬನೆ-ಸಮಾಜ ಅವಕಾಶವೇ ಸಹಕಾರಿ ಚಳುವಳಿ ಉದ್ದೇಶ

ಚಿಕ್ಕಮಗಳೂರು: ಸಹಕಾರಿ ಚಳುವಳಿಯ ಮೂಲತತ್ವವೇ ಸ್ವಾವಲಂಬನೆ, ಪರಸ್ಪರ ಸಹ ಕಾರ, ಸಮಾನ ಅವಕಾಶ ಹಾಗೂ ಸಾಮಾಜಿಕ...

ಅಕ್ರಮ ಮರಳು ಸಾಗಾಟ: 407 ಲಾರಿ ವಶ, ಚಾಲಕ ಪೊಲೀಸ್ ವಶಕ್ಕೆ

ಶೃಂಗೇರಿ: ಪರವಾನಗಿ ಇಲ್ಲದೆ 407 ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದ ಮೇಲೆ ಶೃಂಗೇರಿ ಪೊಲೀಸರು...

₹1.16 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು: ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ₹80 ಸಾವಿರ ಮೌಲ್ಯದ ಚಿನ್ನಾಭರಣ,...