Home namma chikmagalur ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?
namma chikmagalurchikamagalurHomeLatest NewsPolitical News

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

Share
ಬಿ.ಎಲ್. ಶಂಕರ್
ಬಿ.ಎಲ್. ಶಂಕರ್
Share

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?

ಕಿರಿಯ ವಯಸ್ಸಿನಲ್ಲಿ ಹಿರಿಯ ಜವಾಬ್ದಾರಿ ನಿರ್ವಹಿಸಿರುವ ಶಂಕರ್ ಕಳೆದ ಇಪ್ಪತ್ತೈದು ವರ್ಷಗಳಿಂದ ಯಾವ ಅಧಿಕಾರವಿಲ್ಲದೆ ಒದ್ದಾಡುತ್ತಿದ್ದಾರೆ. ಇಪ್ಪತ್ತೈದರ ಹರೆಯದಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಯುವಜನ ಸೇವಾ ಮತ್ತು ಕ್ರೀಡಾ ಮಂತ್ರಿಯಾಗಿದ್ದವರು.ಬೆಳಗ್ಗೆ ವಿಧಾನ ಪರಿಷತ್ ಸದಸ್ಯರಾಗಿ ಸಂಜೆ ದೊಡ್ಡ ಕೈಗಾರಿಕಾ ಮಂತ್ರಿ ಯಾದ ದಾಖಲೆ ಇದೆ.

ಸಭಾಪತಿ ಯಾಗಿ ಸೈ ಅನ್ನಿಸಿಕೊಂಡವರು ಲೋಕಸಭಾ ಸದಸ್ಯರಾಗಿ ಜನತಾದಳದ ರಾಜ್ಯ ಅಧ್ಯಕ್ಷರಾಗಿ ಪಕ್ಷ ಕಟ್ಟಿದವರು. ಒಂದು ಹಂತದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಇದ್ದವರು ಕಳೆದ ಇಪ್ಪತ್ತೈದು ವರ್ಷಗಳಿಂದ ಏನು ಆಗದು ಎಂಬಂತೆ ಈ ಸಾರಿ ವಿಧಾನ ಪರಿಷತ್ ಗೆ ಗ್ಯಾರಂಟಿ ಎನ್ನುತ್ತ ಇರುವಾಗಲೇ ಪಟ್ಟಿಯಲ್ಲಿ ಇದ್ದ ಹೆಸರು ಕಾಣೆಯಾಗುತ್ತಿರುವುದರ ಗುಟ್ಟೇನಲ್ಲ.

ಜನತಾದಳ ತೊರೆದು ಕಾಂಗ್ರೆಸ್ ಸೇರಿದ ಮೇಲೆ ಮೂಲೆಗುಂಪಾಗಿರುವುದು ಸ್ಪರ್ಧೆ ಮಾಡಿದ ಚುನಾವಣೆಯಲ್ಲಿ ಸೋತ ದಾಖಲೆ ಸೇರಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ರಾಜಕಾರಣಕ್ಕೆ ಸೀಮಿತವಾದ ಶಂಕರ್ ತನಗೆ ಬೇಕಾದ ಗುಂಪು ಕಟ್ಟಿಕೊಂಡು ನೆಲಕಚ್ಚಿದ್ದಾರೆ ಎಂದು ಕಾಂಗ್ರೆಸ್ ನ ಮುಖಂಡರು ಹೇಳುವುದಲ್ಲದೆ ಶಂಕರ್ ನಮಗೆ ಗೂಟ ಒಡೆದರೆ ಶಂಕರ್ ಗೂ ಗೂಟ ಒಡೆಯುವವರು ಇರುತ್ತಾರೆ ಆದ್ದರಿಂದ ಶಂಕರ್ ರಾಜಕೀಯ ನಿವೃತ್ತಿ ಪಡೆಯಲಿ ಎನ್ನುತ್ತಾರೆ.ಈ ಬಾರಿ ಖಚಿತವಾಗಿ ವಿಧಾನ ಪರಿಷತ್ ಗೆ ಹೋಗುತ್ತಾರೆ ಎನ್ನುವಾಗ ಅವರ ಬದಲಾಗಿ ಆರತಿಕೃಷ್ಣರ ಹೆಸರು ಮೂಂಚುಣಿಗೆ ಬಂದಿದ್ದು ಮಾತ್ರ ಶಂಕರ್ ತೀವ್ರ ಹಿನ್ನಡೆ ಎನ್ನಲಾಗಿದೆ.

ಶಂಕರ್ ಬೆಂಗಳೂರು ರಾಜಕಾರಣದ ಕೇಂದ್ರವಾಗಿಸಿಕೊಂಡು ತಳಮಟ್ಟದ ಹಿಡಿತ ಕಳೆದುಕೊಂಡಿರುವುದರ ಜೊತೆಗೆ ಹಿಂಬಾಲಕರು ಕಿವಿ ಕಚ್ಚಿ ರಾಜಕೀಯ ಹಿನ್ನಡೆಗೆ ಕಾರಣ ಎನ್ನುವವರು ಇದ್ದಾರೆ.

ಸಾಂಸ್ಕೃತಿಕವಾಗಿ ಉತ್ತಮ ನಡವಳಿಕೆ ಮಾತು,ಓದುವ ಹವ್ಯಾಸ ಸಭೆ,ಸಮಾರಂಭ ಸಂಘಟಿಸುವುದು,ಪ್ರಣಾಳಿಕೆ ಬೇಕಾದ ವಿಷಯ ತಿಳಿದಿರುವ ಶಂಕರ್ ಒಳ್ಳೆಯ ಭಾಷಣಕಾರ ಹೀಗಾಗಿ ಕಳೆದ ಇಪ್ಪತ್ತೈದು ವರ್ಷಗಳಿಂದ ಚಿತ್ರ ಕಲಾ ಪರಿಷತ್ ನ ಅಧ್ಯಕ್ಷರಾಗಿದ್ದು ಇತ್ತೀಚಿಗೆ ಮತ್ತೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರು ಹೌದು ಒಟ್ಟಾರೆ ಹೇಳುವುದಾದರೆ ಶಂಕರ್ ಗೆ ರಾಜಕೀಯ ಬೇಕೋ ಬೇಡವೋ ಅವರೇ ಉತ್ತರಿಸ ಬೇಕು.

Why is B.L. Shankar politically backward?

Share

Leave a comment

Leave a Reply

Your email address will not be published. Required fields are marked *

Don't Miss

ಮತದಾರ ಪಟ್ಟಿಗೆ ಮತದಾರರನ್ನು ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಲು

ಚಿಕ್ಕಮಗಳೂರು: ಕಾಂಗ್ರೆಸ್ ಸಾಂಪ್ರದಾಯಿಕ ಮತದಾರರನ್ನು ಮತದಾರ ಪಟ್ಟಿಗೆ ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಿದಲ್ಲಿಮಾತ್ರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಟ್ಟಿಯಾಗಿ ಎದುರಿಸಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ...

ನೂತನ ತಂತ್ರಜ್ಞಾನವನ್ನು ಯುವಜನತೆ ಮಿತಿಯಲ್ಲಿ ಬಳಸಬೇಕು

ಚಿಕ್ಕಮಗಳೂರು: ಎ ಐ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಯುವಜನತೆ ಇತಿ ಮಿತಿಯಲ್ಲಿ ಬಳಸಬೇಕು ಎಂದು ಎ ಐ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಸಲಹೆ ಮಾಡಿದರು....

Related Articles

ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಜೋಳದಾಳು ಗ್ರಾಮದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಜೋಳದಾಳು ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಮೈಲಿಮನೆ ಗ್ರಾಮ...

ರಕ್ತದಾನದಿಂದ ಜೀವ ಉಳಿಸುವವರು ಜೀವಸಂರಕ್ಷಕರೇ

ಚಿಕ್ಕಮಗಳೂರು: – ರಕ್ತದಾನಕ್ಕೆ ಜಾತಿ ತಾರತಮ್ಯವಿಲ್ಲ. ಜೀವ ಉಳಿಸುವ ಪ್ರತಿಯೊಬ್ಬ ವ್ಯಕ್ತಿಯು ಜೀವಸಂರಕ್ಷಕರೇ. ಶ್ರೀಮಂತಿಕೆ ಎಷ್ಟೇ...

ಯುದ್ಧ ನಿಲ್ಲಿಸಬೇಕಾದವರು ಮೌನವಾಗಿರುವುದು ಮಾನವತೆಯ ಸೋಲು

ಚಿಕ್ಕಮಗಳೂರು: ಯುದ್ಧದ ಬೆಂಕಿ ವಿಶ್ವವನ್ನು ಸುಡುತ್ತಿರುವಾಗ, ಶಾಂತಿಯ ಮಾತುಗಳನ್ನು ಹೇಳಬೇಕಾದ ಸಂಘಟನೆಗಳು ರಾಜಕೀಯ ಲಾಭ-ನ?ದ ಲೆಕ್ಕಾಚಾರದಲ್ಲಿ...

ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು

ಚಿಕ್ಕಮಗಳೂರು: ಚಿನ್ನದ ಬೆಲೆ ಹೆಚ್ಚಳದಿಂದಾಗಿ ಶೇ.೮೦ ರಷ್ಟು ಗೋಲ್ಡ್‌ಸ್ಮಿತ್ ಕೆಲಸಗಾರರು ಕೆಲಸವಿಲ್ಲದೆ ಪೇಚಾಡುವಂತಾಗಿರುವ ಹಿನ್ನೆಲೆಯಲ್ಲಿ ಸರ್ಕಾರ...