Home namma chikmagalur chikamagalur ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು
chikamagalurHomeLatest Newsnamma chikmagalur

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

Share
Share
ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ ಮತ್ತಾವರ ಗ್ರಾಮದ ಹಾಸುಪಾಸಿನಲ್ಲಿ ಬೀಡು ಬಿಟ್ಟಿರುವುದು ಚಿಕ್ಕಮಗಳೂರು  ನಗರ ನಿವಾಸಿಗಳ ನಿದ್ದೆಗೆಡಿಸಿದೆ.
ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಕ್ಷರಶಃ ಮಲೆನಾಡಿಗರ ನೆಮ್ಮದಿ ಕೆಡಿಸಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗಜಪಡೆಗಳ ಸಂಚಾರ ಮಿತಿಮೀರಿದ್ದು, ಕಾಫಿ ತೋಟದ ಕಾರ್ಮಿಕರು ಹಾಗೂ ಸ್ಥಳೀಯ ನಿವಾಸಿಗಳು ಪ್ರತಿ ಕ್ಷಣವೂ ಆತಂಕದಲ್ಲೇ ಬದುಕುವಂತಾಗಿದೆ.
ಇನ್ನೂ ​ಚಿಕ್ಕಮಗಳೂರು ನಗರಕ್ಕೆ ತೀರಾ ಸಮೀಪದಲ್ಲಿರುವ ಮತ್ತವರ ಮತ್ತು ನಲ್ಲೂರು ಗ್ರಾಮಗಳ ಸುತ್ತಮುತ್ತ 2 ಪುಂಡಾನೆಗಳು ಬೀಡುಬಿಟ್ಟಿವೆ. ಈ ಆನೆಗಳು ಎಸ್ಟೇಟ್‌ಗಳ ನಡುವೆ ಓಡಾಟ ನಡೆಸುತ್ತಿರುವುದರಿಂದ ತೋಟದ ಕೆಲಸಕ್ಕೆ ಹೋಗಲು ಕಾರ್ಮಿಕರು ಭಯಪಡುತ್ತಿದ್ದಾರೆ.
ಒಂಟಿ ಆನೆಗಳಷ್ಟೇ ಅಲ್ಲದೇ ಹಿಂಡು ಹಿಂಡಾಗಿ ಆನೆಗಳು ಕಾಣಿಸಿಕೊಳ್ಳುತ್ತಿರುವುದು ಕೃಷಿಕರ ನಿದ್ದೆಗೆಡಿಸಿದೆ. ಬೆಳೆ ಹಾನಿ ಭೀತಿಯ ಜೊತೆ ಜೀ ಭಯವೂ ಕಾಡುತ್ತಿದೆ. ​ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರು ಜಾಗರೂಕತೆಯಿಂದ ಇರಲು ಸೂಚಿಸಲಾಗಿದೆ.
Wild elephants approaching Chikmagalur city
Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...