Home namma chikmagalur chikamagalur ಬಿಜೆಪಿ ಕಾರ್ಯಕರ್ತರ ಬೆನ್ನಿಗೆ ನಾವು ನಿಲ್ಲುತ್ತೇವೆ
chikamagalurHomeLatest Newsnamma chikmagalur

ಬಿಜೆಪಿ ಕಾರ್ಯಕರ್ತರ ಬೆನ್ನಿಗೆ ನಾವು ನಿಲ್ಲುತ್ತೇವೆ

Share
Share

ಚಿಕ್ಕಮಗಳೂರು: ಸಂತೋಷ್ ಕೋಟ್ಯಾನ್ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ. ಹಿಂದೆ ವಿದ್ಯಾರ್ಥಿ ಪರಿ?ತ್ತಿನಲ್ಲಿ ವಿವಿಧ ಜವಾಬ್ದಾರಿ ಹೊತ್ತು ಕೆಲಸ ಮಾಡಿದವರು. ಶ್ಯಾಮ್ ವಿ ಗೌಡ ಬಜರಂಗದಳದ ಹಾಸನ ವಿಭಾಗದ ಜವಾಬ್ದಾರಿ ಹೊಂದಿರುವವರು. ಇವರಿಬ್ಬರೂ ವೈಚಾರಿಕ ಬದ್ಧತೆ ಹೊಂದಿರುವ, ಅನ್ಯಾಯದ ವಿರುದ್ಧ ಸಿಡಿದೇಳುವ ಕಾರ್ಯಕರ್ತರು. ನ್ಯಾಯದ ಪರವಾಗಿ ಹೋರಾಟ ಮಾಡುವುದು, ಪ್ರಶ್ನಿಸುವುದು ಅಪರಾಧವಲ್ಲ. ಪ್ರಶ್ನಿಸುವುದೇ ಅಪರಾಧ ಎನ್ನುವ ಮಾನಸಿಕತೆ ಸರ್ವಾಧಿಕಾರಿ ಮಾನಸಿಕತೆ ಎಂದು ವಿಧಾನ ಪರಿ?ತ್ ಸದಸ್ಯ ಡಾ. ರವಿ ಸಿ.ಟಿ ಹೇಳಿದರು. ಅವರು ಇಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ಯುವ ಮುಖಂಡರಿಗೆ ಗಡೀಪಾರು ನೋಟಿಸ್ ನೀಡಿರುವ ಕುರಿತು ಮಾಧ್ಯಮಗಳೊಡನೆ ಮಾತನಾಡುತ್ತಿದ್ದರು.‌

ಈ ಗಡೀಪಾರು ನೋಟಿಸ್ ನೀಡುವ ಮೂಲಕ ನಮ್ಮ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ನಾವು ಈ ಸವಾಲು ಸ್ವೀಕರಿಸಿ, ನ್ಯಾಯಾಲಯ ಮತ್ತು ಜನತಾ ನ್ಯಾಯಾಲಯಗಳಲ್ಲಿ ಇದನ್ನು ಪ್ರಶ್ನಿಸುತ್ತೇವೆ. ಈ ರೀತಿ ಬಿಜೆಪಿಯನ್ನು ಹೆದರಿಸಲು ಸಾಧ್ಯವಿಲ್ಲ. ಪೊಲೀಸ್ ಇಲಾಖೆ ಬಳಸಿರುವ ಭಾ? ಕ್ಷಮಿಸಲಸಾಧ್ಯ. ರಾಜಕೀಯ ಕಾರ್ಯಕರ್ತರನ್ನು, ಸೈದ್ಧಾಂತಿಕ ಬದ್ಧತೆಯ ಕಾರ್ಯಕರ್ತರನ್ನು ಗೂಂಡಾಗಳು, ಹಫ್ತಾ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಲು ನಾಚಿಕೆ ಆಗಬೇಕು. ಅವರನ್ನು ಕ್ರಿಮಿನಲ್‌ಗಳ ರೀತಿ ಕಾಣುವ ಮಾನಸಿಕತೆಗೆ ನಮ್ಮ ಧಿಕ್ಕಾರವಿದೆ. ನಮ್ಮ ಕಾರ್ಯಕರ್ತರ ಬೆನ್ನಿಗೆ ನಾವು ನಿಲ್ಲುತ್ತೇವೆ. ಅದೆ? ಜನರನ್ನು ಬಂಧಿಸುತ್ತೀರಿ, ಗಡೀಪಾರು ಮಾಡುತ್ತೀರಿ ನಾವೂ ನೋಡುತ್ತೇವೆ. ಇದು ಬ್ರಿಟಿಷ್ ಆಡಳಿತವಲ್ಲ ಎಂದು ರವಿ ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಒಂದು ಮಾತು ಹೇಳಲು ಬಯಸುತ್ತೇನೆ. ಈ ರೀತಿ ಬೆದರಿಸುವುದು ಹಳೆಯ ತಂತ್ರ. ಅದಕ್ಕೆ ನಾವು ಬೆದರುವುದಿಲ್ಲ. ಕಳೆದ ಮೂವತ್ತು ವ?ಗಳಿಂದಲೂ ನಾವು ಯಾವುದಕ್ಕೂ ಬೆದರಿದವರಲ್ಲ. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಬೆದರಿಸಲು ಬಿಜೆಪಿ ಕಾರ್ಯಕರ್ತರು ಬೆನ್ನೆಲುಬಿಲ್ಲದವರಲ್ಲ. ಅವರ ಬೆನ್ನಿಗೆ ನಾವು ನಿಲ್ಲುತ್ತೇವೆ ಎಂದರು.

ಬಾಗಲಕೋಟೆ ಮತ್ತು ದಾವಣಗೆರೆ ಉಪ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಸಂಘಟಿತ ಪ್ರಯತ್ನ ಮಾಡಿದರೆ, ಎರಡೂ ಚುನಾವಣೆಗಳಲ್ಲಿ ಬಿಜೆಪಿ ಗೆದ್ದು, ಸ್ಪಷ್ಟ ಸಂದೇಶ ನೀಡಬಹುದು. ಜೆಡಿಎಸ್‌ಗೂ ನಾಯಕರು, ಹಿತೈಷಿಗಳ ಬಳಗವಿದ್ದು, ಕಾಂಗ್ರೆಸ್ ವಿರುದ್ಧವಿರುವ ಜನಾಕ್ರೋಶವನ್ನು ನಾವು ಬಳಸಿಕೊಳ್ಳಬಹುದು. ಇದನ್ನು ಬಳಸಿಕೊಳ್ಳಬೇಕಾದರೆ ನಾವು ಸಂಘಟಿತ ಪ್ರಯತ್ನ ಮಾಡಬೇಕು ಎಂದರು.

ವೀರಣ್ಣ ಚರಂತಿಮಠ ಅವರು ಮೂರು ಬಾರಿ ಶಾಸಕರಾಗಿ ಅನುಭವ ಹೊಂದಿರುವವರು. ಶ್ರೀನಿವಾಸ್ ದಾಸ್ ಕರಿಯಪ್ಪ ಅವರು ಚುನಾವಣೆಗೆ ನಿಲ್ಲದಿದ್ದರೂ, ಪಕ್ಷಕ್ಕಾಗಿ ಕೆಲಸ ಮಾಡಿದವರು. ಒಬ್ಬ ಕಾರ್ಯಕರ್ತರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದರಲ್ಲಿ ಒಂದು ಸಂದೇಶವಿದೆ. ಪ್ರತಿಫಲಾಪೇಕ್ಷೆ ಇಲ್ಲದೆ ಹಗಲಿರುಳು ಕೆಲಸ ಮಾಡುತ್ತಿರುವ ಕಾರ್ಯಕರ್ತರಿಗೆ ವಿಶ್ವಾಸ ಮೂಡಿಸಬೇಕು. ಇದಕ್ಕಾಗಿ ನಾನು ಎರಡೂ ಕ್ಷೇತ್ರಗಳಲ್ಲೂ ಪ್ರಚಾರಕ್ಕೆ ಭಾಗಿಯಾಗಲಿದ್ದೇನೆ, ಪಕ್ಷ ಜವಾಬ್ದಾರಿ ನೀಡಿರುವ ಪಶ್ಚಿಮ ಬಂಗಾಳ ಚುನಾವಣಾ ಕಾರ್ಯದಲ್ಲೂ ತೊಡಗಿಕೊಳ್ಳುತ್ತೇನೆ ಎಂದು ರವಿ ವಿವರಿಸಿದರು.‌

Wild elephants in populated areas

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...