Home namma chikmagalur chikamagalur ಕಾಫಿನಾಡಿನ ಹಲವೆಡೆ ಕಾಡಾನೆಗಳ ಸಂಚಾರ – ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ
chikamagalurLatest Newsnamma chikmagalur

ಕಾಫಿನಾಡಿನ ಹಲವೆಡೆ ಕಾಡಾನೆಗಳ ಸಂಚಾರ – ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ

Share
Share

ಚಿಕ್ಕಮಗಳೂರು: ಕಾಫಿನಾಡಿನ ಹಲವೆಡೆ ಕಾಡಾನೆಗಳ ಸಂಚಾರ ತೀವ್ರಗೊಂಡಿದ್ದು, ಅರಣ್ಯ ಇಲಾಖೆ ಹಾಗೂ ಆನೆ ಕಾರ್ಯಪಡೆ (ETF) ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ ನೀಡಿದೆ.

ಕಬ್ಬಿನಹಳ್ಳಿ ಸುತ್ತಮುತ್ತ ಎರಡು ಕಾಡಾನೆಗಳು ಬೀಡುಬಿಟ್ಟಿದ್ದು, ಇದರಿಂದಾಗಿ ಉಳುವಗಿಲು, ಹುಕ್ಕುಂದ, ಕಡಬನಹಳ್ಳಿ, ಇಂದಾವರ, ತಳಿಹಳ್ಳಿ, ಜಾಕನಹಳ್ಳಿ, ಚಿಕ್ಕೋಳಲೆ ಹಾಗೂ ಹಿರಿಕೊಳಲೆ ಗ್ರಾಮಸ್ಥರು ತೀವ್ರ ಜಾಗರೂಕತೆಯಿಂದ ಇರಬೇಕೆಂದು ಸೂಚಿಸಲಾಗಿದೆ.

ವಿಶೇಷವಾಗಿ ಬೆಳಿಗ್ಗೆ ತೋಟಗಳಿಗೆ ಹೋಗುವ ರೈತರು ಮತ್ತು ಕಾರ್ಮಿಕರು ಹೆಚ್ಚಿನ ನಿಗಾ ವಹಿಸುವಂತೆ ಕೋರಲಾಗಿದೆ. ಮತ್ತೊಂದೆಡೆ, ಜಾಗರ್ ಖಾನ್ ಕಾಡಿನಿಂದ ಒಂಟಿ ಅನೆಯೊಂದು ಸಂಚರಿಸುತ್ತಿದ್ದು ಬಾರದಹಳ್ಳಿ, ಕಾರ್‌ಬೈಲು, ಚಂದ್ರಪುರ, ಕಮ್ಮರಗೋಡು, ದುಂಡುಗ, ಶುಭನಗರ ಹಾಗೂ ಕಸ್ಕೆಬೈಲ್ ಭಾಗದಲ್ಲಿ ಆತಂಕ ಸೃಷ್ಟಿಸಿದೆ.

ಅಲ್ಲದೆ, ದೊಡ್ಡಗಳ್ಳ ಎಸ್ಟೇಟ್ ಪಕ್ಕದ ಕಾಡಿನಲ್ಲಿ ಕಾಡಾನೆಗಳ ಗುಂಪು ಪತ್ತೆಯಾಗಿದ್ದು, ನಂದಿಬೆಟ್ಟ, ಆನೆ ಮಲ್ಲಪ್ಪ ಗುಡ್ಡ, ಹೊಸಪುರ, ಕಲ್ಲುಗುಡ್ಡ ಹಾಗೂ ಜಿ. ಹೊಸಹಳ್ಳಿ ಗ್ರಾಮಗಳ ಸುತ್ತಮುತ್ತಲೂ ತುರ್ತು ಎಚ್ಚರಿಕೆ ನೀಡಲಾಗಿದೆ.

ಬಾಳೆಹೊನ್ನೂರು ವಲಯದ ಅಂಡವಾನೆ, ಎಲೆಕಲ್, ಬಿಳುಕೊಪ್ಪ, ಕುಂಬ್ರುಮನೆ ಹಾಗೂ ಬನ್ನೂರು ಭಾಗದಲ್ಲೂ ಒಂಟಿ ಆನೆಯ ಸಂಚಾರವಿರುವ ಬಗ್ಗೆ ವರದಿಯಾಗಿದೆ. ಕಾಡಾನೆಗಳ ಓಡಾಟ ಹೆಚ್ಚಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆ ತೋಟಗಳಿಗೆ ನೀರು ಹಾಯಿಸಲು ಹೋಗುವುದು ಅಥವಾ ವಿನಾಕಾರಣ ಓಡಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಕಾಫಿ ಬೆಳೆಗಾರರು ಹಾಗೂ ಕಾರ್ಮಿಕರು ಅರಣ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಬೇಕು. ಒಂದು ವೇಳೆ ಆನೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಚಿಕ್ಕಮಗಳೂರು ಆನೆ ಕಾರ್ಯಪಡೆಯ ನಿಯಂತ್ರಣ ಕೊಠಡಿ ಸಂಖ್ಯೆ 7204004261 ಕ್ಕೆ ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Wild elephants moving in many parts of Coffee Country – Urgent warning to the public

Share

Leave a comment

Leave a Reply

Your email address will not be published. Required fields are marked *

Don't Miss

ಕಳ್ಳರ ತಂಡ ಬಂಧನ-32.74 ಲಕ್ಷ ರೂಪಾಯಿ ಮೌಲ್ಯದ ಸ್ವತ್ತು ವಶ

ತರೀಕೆರೆ: ಸರಣಿ ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ತರೀಕೆರೆ ಉಪ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದು, ಅಂತರಜಿಲ್ಲಾ ಕಳ್ಳರ ತಂಡವನ್ನು ಬಂಧಿಸಿ ಸುಮಾರು 32.74 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು...

ಕಾಡು ಹಂದಿ ದಾಳಿಗೆ ಮಹಿಳೆ ಗಂಭೀರ ಗಾಯ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಕಾಡಾನೆ ಮತ್ತು ಕಾಡೆಮ್ಮೆಗಳ ಬೆನ್ನಲ್ಲೇ ಇದೀಗ ಕಾಡು ಹಂದಿಗಳ ಭೀತಿ ಹೆಚ್ಚಾಗಿದೆ. ಮೂಡಿಗೆರೆ ತಾಲೂಕಿನ ಆಲೂರು ಗ್ರಾಮದಲ್ಲಿ ತೋಟದಲ್ಲಿ...

Related Articles

“ಕುರ್ಚಿ” ಮಹಾತ್ಮೆ: ಶೃಂಗೇರಿಯಲ್ಲಿ ಕಾಂಗ್ರೆಸ್ VS ಬಿಜೆಪಿ ದಂಗಲ್

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿಯ ಮಾಜಿ...

ಬಾಲ್ಯ ವಿವಾಹ ನಡೆದರೆ ಪೋಕ್ಸೋ ಪ್ರಕರಣ ದಾಖಲಿಸಲು ಸೂಚನೆ

ಚಿಕ್ಕಮಗಳೂರು: ಬಾಲ್ಯ ವಿವಾಹಕ್ಕೆ ನಿಷೇಧವಿದ್ದರೂ, ರಹಸ್ಯವಾಗಿ ಅಪ್ರಾಪ್ತರ ಮದುವೆ ನಡೆದರೆ ಪೋಕ್ಸೋ ಕಾಯಿದೆಯಡಿಯಲ್ಲೂ ಪ್ರಕರಣ ದಾಖಲಿಸುವಂತೆ...

ಜೀವರಾಜ್ ವಿರುದ್ಧದ FIRಗೆ ಹೈಕೋರ್ಟ್ ತಡೆ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆ...

ನಗರಸಭೆಯ 2.60 ಕೋಟಿ ರು. ವೆಚ್ಚದ ಫುಡ್ ಕೋರ್ಟ್ ಗೆ ಚಾಲನೆ

ಚಿಕ್ಕಮಗಳೂರು: ನಗರದ ಜನರ ಹಿತದೃಷ್ಟಿಯಿಂದ ಏನು ಮಾಡುತ್ತೇವೆಯೋ, ಅದು ಶಾಶ್ವತವಾಗಿ ಇರುವಂತೆ ಕೆಲಸ ಮಾಡಬೇಕು. ಪಕ್ಷಾತೀತವಾಗಿ...