Home namma chikmagalur ಕಮ್ಮರಗೋಡು ಗ್ರಾಮದ ಕೃಷಿಹೊಂಡದಲ್ಲಿ ಕಾಡಾನೆ ನೀರಾಟ
namma chikmagalurchikamagalurHomeLatest News

ಕಮ್ಮರಗೋಡು ಗ್ರಾಮದ ಕೃಷಿಹೊಂಡದಲ್ಲಿ ಕಾಡಾನೆ ನೀರಾಟ

Share
Share

ಮೂಡಿಗೆರೆ: ಗೋಣಿಬೀಡು ಹೋಬಳಿಯ ಕಮ್ಮರಗೋಡು ಗ್ರಾಮಕ್ಕೆ ಭಾನುವಾರ ಬೆಳಿಗ್ಗೆ ಬಂದಿದ್ದ ಕಾಡಾನೆಯೊಂದು ಕೃಷಿಹೊಂಡಕ್ಕೆ ಇಳಿದು ಅರ್ಧ ಗಂಟೆಗೂ ಹೆಚ್ಚು ಕಾಲ ನೀರಾಟವಾಡಿದೆ.

ಗೋಣಿಬೀಡು ಹೋಬಳಿಯಲ್ಲಿ ಒಂದೂವರೆ ತಿಂಗಳಿನಿಂದಲೂ ಬೀಡುಬಿಟ್ಟಿರುವ ಒಂಟಿ ಕಾಡಾನೆಯು ಕೆಲ ದಿನಗಳ ಹಿಂದೆ ಮನೆಯೊಳಗೆ ಪ್ರವೇಶಿಸುವ ಯತ್ನ ನಡೆಸಿ ಭೀತಿಗೊಳಿಸಿತ್ತು.

ಕಾಡಾನೆ ಕೃಷಿ ಹೊಂಡಕ್ಕೆ ಇಳಿದಿರುವ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದು, ವಿಡಿಯೊ, ಫೋಟೊ ಸೆರೆ ಹಿಡಿದರೂ ಕೃಷಿ ಹೊಂಡದಿಂದ ಕಾಡಾನೆ ಮೇಲೆ ಬರಲಿಲ್ಲ. ಬಳಿಕ ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡಾನೆಯನ್ನು ಕೃಷಿ ಹೊಂಡದಿಂದ ಓಡಿಸಿದ್ದು, ಪಕ್ಕದಲ್ಲಿರುವ ಅರಣ್ಯ ಪ್ರದೇಶ ಸೇರಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಒಂಟಿ ಕಾಡಾನೆ ಆತಂಕ: ಮಾಕೋನಹಳ್ಳಿ, ನಂದೀಪುರ, ಗೋಣಿಬೀಡು ಗ್ರಾ.ಪಂಗಳ ಸುತ್ತಮುತ್ತಲ ಪ್ರದೇಶಗಳಲ್ಲಿಯೇ ಒಂದೂವರೆ ತಿಂಗಳಿನಿಂದ ಓಡಾಡುತ್ತಿರುವ ಕಾಡಾನೆಯು, ಇತ್ತೀಚೆಗೆ ಹಗಲಿನಲ್ಲಿಯೂ ಕಾಣಿಸಿಕೊಳ್ಳು ತ್ತಿರುವುದು ಸ್ಥಳೀಯರಿಗೆ ಆತಂಕ ಮೂಡಿಸಿದೆ.

ರಾತ್ರಿಯಾಗುತ್ತಿದ್ದಂತೆ ಮನೆಯಂಗಳಕ್ಕೆ ಬರುವ ಕಾಡಾನೆಯು ಕಾಫಿ ತೋಟ, ಮನೆಯಂಗಳದಲ್ಲಿ ಬೆಳೆದಿರುವ ಬೆಳೆಗಳನ್ನು ನಾಶ ಮಾಡುತ್ತಿದ್ದು, ಬೆಳಕು ಮೂಡಿದರೂ ಗ್ರಾಮದೊಳಗೆ ಕಾಣಿಸಿಕೊಳ್ಳುತ್ತಿದ್ದು ಜೀವ ಭಯದಿಂದಿರುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Wild elephants watering in an agricultural pond in Kammaragod village

Share

Leave a comment

Leave a Reply

Your email address will not be published. Required fields are marked *

Don't Miss

ಮಕ್ಕಳಪ್ರತಿಭೆ ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ ಕ್ರೀಡಾ ಶಿಕ್ಷಕ

ತರೀಕೆರೆ: ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳ ಜೊತೆಗೆ ದೈಹಿಕ ಶಿಕ್ಷಣವು ಬಹು ಮುಖ್ಯ. ಮಕ್ಕಳ ಆಸಕ್ತಿ ಗಮನಿಸಿ ಪ್ರೋತ್ಸಾಹ ನೀಡುವುದರ ಜೊತೆಗೆ ತರಭೇತಿ ನೀಡಿದರೆ ತಾಲ್ಲೂಕು, ಜಿಲ್ಲೆ,ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕೀರ್ತಿ ಗಳಿಸಲು...

ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ

ಮೂಡಿಗೆರೆ: ತಾಲ್ಲೂಕಿನ ಗೋಣಿಬಿಡು ಹೋಬಳಿಯ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂರು ಗುಂಪುಗಳಲ್ಲಿ ಸುಮಾರು 40ಕ್ಕೂ ಅಧಿಕ ಕಾಡಾನೆಗಳು ದಾಳಿ ನಡೆಸಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ. ಒಂದು ತಿಂಗಳಿನಿಂದ...

Related Articles

ಫೋಟೋ-ವಿಡಿಯೋಗ್ರಫಿ ಕೆನಾನ್ ಕ್ಯಾಮಾರಗಳು ಶ್ರೇಷ್ಠ

ಚಿಕ್ಕಮಗಳೂರು:  ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ಕ್ಷೇತ್ರದಲ್ಲಿ ಹೊಸ ಆಯಾಮ ವನ್ನು ಸೃಷ್ಟಿಸುವ ಕೆನಾನ್ ಕ್ಯಾಮರಾಗಳು ಛಾಯಾಗ್ರಾಹಕರ...

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ...

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು...

ಅರಣ್ಯ ಸಚಿವರಿಗೆ ಮಲ್ನಾಡು ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ

ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲ್ನಾಡು ಭಾಗಕ್ಕೂ ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ. ನಿರಂತರವಾಗಿ...