Home namma chikmagalur chikamagalur ಉನ್ನತ ಅರಣ್ಯಾಧಿಕಾರಿಗಳ ಮೇಲೆ ವಾಮಾಚಾರ
chikamagalurCrime NewsHomeLatest Newsnamma chikmagalur

ಉನ್ನತ ಅರಣ್ಯಾಧಿಕಾರಿಗಳ ಮೇಲೆ ವಾಮಾಚಾರ

Share
Share

ಎನ್.ಆ‌ರ್.ಪುರ: ಮೌಡ್ಯದ ಪರಾಕಾಷ್ಠೆ ಎಂಬಂತಹ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಉನ್ನತ ಅರಣ್ಯಾಧಿಕಾರಿಯನ್ನೇ ಗುರಿಯಾಗಿಸಿ ವಾಮಾಚಾರ ನಡೆಸಿರುವುದು ಸ್ಥಳೀಯವಾಗಿ ತೀವ್ರ ಆತಂಕ ಹಾಗೂ ಕುತೂಹಲ ಮೂಡಿಸಿದೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮೋಹನ್ ಅವರ ಸರ್ಕಾರಿ ನಿವಾಸದ ಗೇಟ್ ಬಳಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಕೇವಲ ಅಧಿಕಾರಿಯನ್ನಷ್ಟೇ ಅಲ್ಲದೆ, ಅವರ ಜೀಪ್ ಚಾಲಕನನ್ನೂ ಗುರಿಯಾಗಿಸಿ ಈ ಮಾಟ-ಮಂತ್ರದ ಪ್ರಯೋಗ ಮಾಡಲಾಗಿದೆ.

ಮಣ್ಣಿನ ಮಡಕೆಯೊಂದರಲ್ಲಿ ಎಸಿಎಫ್ ಮೋಹನ್ ಮತ್ತು ಅವರ ಚಾಲಕನ ಭಾವಚಿತ್ರಗಳನ್ನು ಇಟ್ಟು, ಅದಕ್ಕೆ ಅರಿಶಿನ-ಕುಂಕುಮ ಹಾಗೂ ಇತರೆ ಪೂಜಾ ಸಾಮಗ್ರಿಗಳನ್ನು ಹಾಕಿ, ಮನೆಯ ಪ್ರವೇಶ ದ್ವಾರದ ಬಳಿಯೇ ಮಡಕೆಯನ್ನು ಒಡೆದು ಹಾಕುವ ಮೂಲಕ ಭಯದ ವಾತಾವರಣ ನಿರ್ಮಿಸಲಾಗಿದೆ.

ಬೆಳಿಗ್ಗೆ ಮನೆಯಿಂದ ಹೊರಬಂದ ಅಧಿಕಾರಿ ಹಾಗೂ ಸಿಬ್ಬಂದಿಗೆ ಈ ದೃಶ್ಯ ಕಂಡುಬಂದಿದ್ದು, ತಕ್ಷಣವೇ ಆತಂಕಕ್ಕೊಳಗಾಗಿದ್ದಾರೆ. ಈ ಘಟನೆಯ ಹಿಂದೆ ಇಲಾಖೆಯೊಳಗಿನ ದ್ವೇಷವಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದ್ದು, ಸ್ವತಃ ಕಚೇರಿಯ ಸಿಬ್ಬಂದಿಯ ಮೇಲೆಯೇ ಎಸಿಎಫ್ ಮೋಹನ್ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕರ್ತವ್ಯದ ವಿಚಾರದಲ್ಲಿ ಅಥವಾ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ವಾಮಾಚಾರದ ಹಾದಿ ಹಿಡಿದಿರಬಹುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದೆ.

Witchcraft on top forest officials

Share

Leave a comment

Leave a Reply

Your email address will not be published. Required fields are marked *

Don't Miss

ಕಾಡು ಹಂದಿ ದಾಳಿಗೆ ಮಹಿಳೆ ಗಂಭೀರ ಗಾಯ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಕಾಡಾನೆ ಮತ್ತು ಕಾಡೆಮ್ಮೆಗಳ ಬೆನ್ನಲ್ಲೇ ಇದೀಗ ಕಾಡು ಹಂದಿಗಳ ಭೀತಿ ಹೆಚ್ಚಾಗಿದೆ. ಮೂಡಿಗೆರೆ ತಾಲೂಕಿನ ಆಲೂರು ಗ್ರಾಮದಲ್ಲಿ ತೋಟದಲ್ಲಿ...

ಸಾಂಬಾರ್ ಮಾಡಿಲ್ಲ ಎಂಬ ಕಾರಣಕ್ಕೆ ಸೋದರಿ- ಆಕೆಯ ಮಗಳ ಮೇಲೆ ಹಲ್ಲೆ

ಚಿಕ್ಕಮಗಳೂರು: ಮೂಡಿಗೆರೆಯಲ್ಲಿ, ಸಾಂಬಾರ್ ಮಾಡಿಲ್ಲ ಎಂಬ ಕಾರಣಕ್ಕೆ ನಾಗರಾಜ್ ಎಂಬ ವ್ಯಕ್ತಿ ಕುಡಿದು ಬಂದು ತನ್ನ ಸೋದರಿ ಮತ್ತು ಆಕೆಯ ಮಗಳ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಸ್ಥಳೀಯರು ಜಗಳ ಬಿಡಿಸಲು ಹೋದಾಗ...

Related Articles

ಬಾಲ್ಯ ವಿವಾಹ ನಡೆದರೆ ಪೋಕ್ಸೋ ಪ್ರಕರಣ ದಾಖಲಿಸಲು ಸೂಚನೆ

ಚಿಕ್ಕಮಗಳೂರು: ಬಾಲ್ಯ ವಿವಾಹಕ್ಕೆ ನಿಷೇಧವಿದ್ದರೂ, ರಹಸ್ಯವಾಗಿ ಅಪ್ರಾಪ್ತರ ಮದುವೆ ನಡೆದರೆ ಪೋಕ್ಸೋ ಕಾಯಿದೆಯಡಿಯಲ್ಲೂ ಪ್ರಕರಣ ದಾಖಲಿಸುವಂತೆ...

ಜೀವರಾಜ್ ವಿರುದ್ಧದ FIRಗೆ ಹೈಕೋರ್ಟ್ ತಡೆ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆ...

ನಗರಸಭೆಯ 2.60 ಕೋಟಿ ರು. ವೆಚ್ಚದ ಫುಡ್ ಕೋರ್ಟ್ ಗೆ ಚಾಲನೆ

ಚಿಕ್ಕಮಗಳೂರು: ನಗರದ ಜನರ ಹಿತದೃಷ್ಟಿಯಿಂದ ಏನು ಮಾಡುತ್ತೇವೆಯೋ, ಅದು ಶಾಶ್ವತವಾಗಿ ಇರುವಂತೆ ಕೆಲಸ ಮಾಡಬೇಕು. ಪಕ್ಷಾತೀತವಾಗಿ...

ಅಕ್ರಮಗಳ ತನಿಖೆಗೆ ಒತ್ತಾಯ ಪೊಲೀಸ್ ದಬ್ಬಾಳಿಕೆ ವಿರುದ್ದ ಪ್ರತಿಭಟನೆ

ತರೀಕೆರೆಯಲ್ಲಿ ಬಿಜೆಪಿ ನೇತೃತ್ವದಲ್ಲಿ ಕೆಲವು ಸಂಘ ಸಂಸ್ಥೆಯವರು ಸ್ಥಳೀಯ ಶಾಸಕ ಶ್ರೀನಿವಾಸ್ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್...