Home Crime News ಜೆಸಿಬಿ ಚಾಲಕನಿಂದ ಮಹಿಳೆ ಮೇಲೆ ಹಲ್ಲೆ
Crime NewsHomeLatest Newsnamma chikmagalurTarikere

ಜೆಸಿಬಿ ಚಾಲಕನಿಂದ ಮಹಿಳೆ ಮೇಲೆ ಹಲ್ಲೆ

Share
Share

ತರೀಕೆರೆ: ನಂದಿಬಟ್ಟಲು ಗ್ರಾಮದ ಕೆರೆಯನ್ನು ಮೂರು ವರ್ಷಗಳ ಅವಧಿಗೆ ಗುತ್ತಿಗೆಗೆ ಪಡೆದು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಮೀನು ಸಾಕಾಣಿಕೆ ಮಾಡುತ್ತಿದ್ದ ರಂಗನಾಥ್ ಎಂಬುವವರ ಕೆರೆಯ ನೀರನ್ನು ಜೆಸಿಬಿ ಮೂಲಕ ಗೊಂದಲಗೊಳಿಸಿ ಮೀನುಗಳು ಸಾಯುವಂತೆ ಮಾಡಿ ನಷ್ಟ ಉಂಟುಮಾಡಿದ ಘಟನೆ ಲಿಂಗದಹಳ್ಳಿಯಲ್ಲಿ ನಡೆದಿದೆ.

ಈ ನಷ್ಟದ ಕುರಿತು ಕೆರೆಯ ಬಳಿ ಹೋದ ರಂಗನಾಥ್ ಅವರ ಪತ್ನಿ ರೂಪ ಅವರು ಜೆಸಿಬಿ ಚಾಲಕ ವಿಜಿ ಅಲಿಯಾಸ್ ಜಯಣ್ಣ ಎಂಬುವವರನ್ನು ಪ್ರಶ್ನಿಸಿದಾಗ, ಆತ ಮಹಿಳೆಗೆ ಅವಾಚ್ಯವಾಗಿ ನಿಂದಿಸಿ ತಲೆಕೂದಲು ಹಿಡಿದು ಎಳೆದಾಡಿ, ಕಪಾಳಕ್ಕೆ ಹೊಡೆದು ಕುತ್ತಿಗೆ ಹಿಸುಕಿ ಮತ್ತೊಮ್ಮೆ ಕೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಹಲ್ಲೆಯಿಂದ ಗಾಯಗೊಂಡ ರೂಪ ಅವರು ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಲಿಂಗದಹಳ್ಳಿ ಪೊಲೀಸ್ ಠಾಣೆಗೆ ಬಂದು ನೀಡಿದ ಕಂಪ್ಯೂಟ‌ರ್ ಮುದ್ರಿತ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Woman attacked to death by JCB driver

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...

Related Articles

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ...

ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು

ಕಡೂರು: ಸ್ಕೂಟರ್ ನಿಯಂತ್ರಣ ತಪ್ಪಿ ಆಲದ ಮರದ ಬಿಳಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ...

ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಿಂದ ಜನರೇಟರ್, ಪೈಪ್ ಕಳವು

ಚಿಕ್ಕಮಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಬಳಸುತ್ತಿದ್ದ 10 ಕೆವಿಎ ಡೀಸೆಲ್...

ಬೀರೂರಿನ ಫೈನಾನ್ಸ್ ಕಂಪನಿಗೆ ₹9.91 ಲಕ್ಷ ವಂಚನೆ

ಬೀರೂರು: ಬೇರೊಬ್ಬ ವ್ಯಕ್ತಿಯಂತೆ ನಟಿಸಿ ಫೈನಾನ್ಸ್‌ನಲ್ಲಿ ಗಿರವಿ ಇಟ್ಟಿರುವ ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ನವರತ್ನ ಗೋಲ್ಡ್...